ನಾಯಿ ಕಡಿತದಿಂದ ರೇಬಿಸ್! ಚಿಕಿತ್ಸೆ ವಿಳಂಬ – ಸುಳ್ಯದಲ್ಲಿ ಮಹಿಳೆ ದುರ್ಮರಣ!

Date:

spot_img

ಸುಳ್ಯದ ಸಂಪಾಜೆಯಲ್ಲಿ ನಾಯಿ ಕಡಿತಕ್ಕೆ ಒಳಗಾದ 42 ವರ್ಷದ ಮಹಿಳೆ ಚಿಕಿತ್ಸೆ ಪಡೆಯದೆ ಇದ್ದ ಕಾರಣ ಸಾವನ್ನಪ್ಪಿರುವ ಘಟನೆ ನಡೆದಿದೆ. ಫೆಬ್ರವರಿ 7ರಂದು ಅರಂತೋಡಿನಲ್ಲಿ ತೋಟದ ಕೆಲಸ ಮಾಡುತ್ತಿದ್ದಾಗ ನಾಯಿಮರಿಯೊಂದು ಅವರ ಮೇಲೆ ದಾಳಿ ಮಾಡಿತ್ತು. ಆದರೆ ಈ ಬಗ್ಗೆ ಅವರು ಯಾರಿಗೂ ಹೇಳದೆ, ಯಾವುದೇ ಚಿಕಿತ್ಸೆ ಕೂಡ ಪಡೆಯಲಿಲ್ಲ.

ರೇಬಿಸ್ ದೃಢ: ಚಿಕಿತ್ಸೆಗೆ ವಿಳಂಬ ದುರಂತಕ್ಕೆ ಕಾರಣ!
ಸೋಮವಾರ ಹೊಟ್ಟೆನೋವು ಕಾಣಿಸಿಕೊಂಡಿದ್ದ ಕಾರಣ ಅವರು ಸುಳ್ಯದ ಸರಕಾರಿ ಆಸ್ಪತ್ರೆಗೆ ತೆರಳಿದಾಗ ನೀರನ್ನು ನೋಡುತ್ತಲೇ ಬೊಬ್ಬೆ ಹಾಕುವಂತಹ ವಿಚಿತ್ರ ಲಕ್ಷಣಗಳು ಗೋಚರಿಸಿದವು. ಹೆಚ್ಚಿನ ವಿಚಾರಣೆ ನಡೆಸಿದಾಗ ನಾಯಿ ಕಡಿತದ ಬಗ್ಗೆ ಮಾಹಿತಿ ಬಹಿರಂಗವಾಯಿತು. ತಕ್ಷಣ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ಕರೆದೊಯ್ಯಲಾದರೂ ಚಿಕಿತ್ಸೆ ಫಲಕಾರಿಯಾಗದೆ ಮಾರ್ಚ್ 20ರಂದು ಮೃತಪಟ್ಟರು.

ಇತರರಿಗೂ ಅಪಾಯ?
ಮಹಿಳೆಗೆ ಕಚ್ಚಿದ ನಾಯಿಮರಿ ಇನ್ನೂ ಹಲವರನ್ನು ಕಚ್ಚಿರುವ ಶಂಕೆ ವ್ಯಕ್ತವಾಗಿದೆ. ಆದರೆ ಪ್ರಸ್ತುತ ನಾಯಿ ಎಲ್ಲಿ ಹೋದೆಯೆಂಬ ಬಗ್ಗೆ ಸ್ಪಷ್ಟತೆ ಇಲ್ಲ. ಈ ಹಿನ್ನೆಲೆಯಲ್ಲಿ ಪರಿಸರದ ಹಲವರಿಗೆ ಹಾಗೂ ಕುಟುಂಬದವರಿಗೆ ಎಆರ್‌ವಿ ಲಸಿಕೆ ನೀಡಲಾಗಿದೆ ಎಂದು ತಾಲೂಕು ವೈದ್ಯಾಧಿಕಾರಿ ಡಾ. ನಂದಕುಮಾರ್ ತಿಳಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ವಿಪ್ರ ಸ್ವಉದ್ಯಮ ಯೋಜನೆ: 2 ಲಕ್ಷ ಸಾಲಕ್ಕೆ ಅರ್ಜಿ ಆಹ್ವಾನ!

ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಸ್ವಉದ್ಯೋಗಕ್ಕೆ ಬಡ್ಡಿ ರಹಿತ/ಕಡಿಮೆ ಬಡ್ಡಿಯಲ್ಲಿ ಸಾಲ ಸೌಲಭ್ಯ. ಅರ್ಜಿ ಸಲ್ಲಿಸಲು 31-08-2026 ಕೊನೆ ದಿನ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಬೆಂಗಳೂರು ಇಡಿ ದಾಳಿ: ಐಸಿಸ್ ಫಂಡಿಂಗ್ ಆರೋಪದ ಮೇಲೆ 8 ಕಡೆ ಶೋಧ

ಬೆಂಗಳೂರಿನಲ್ಲಿ ಐಸಿಸ್ ಉಗ್ರ ಸಂಘಟನೆಗೆ ಹಣಕಾಸು ನೆರವು ನೀಡಿದ ಆರೋಪದ ಮೇಲೆ ಇಡಿ ಅಧಿಕಾರಿಗಳು 8 ಕಡೆ ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕರ್ನೂಲು ಬಳಿ ಭೀಕರ ಕಾರು ಅಪಘಾತ: ರವಿಚಂದ್ರ ಶೆಟ್ಟಿ ದುರ್ಮರಣ

ಆಂಧ್ರದ ಕರ್ನೂಲು ಬಳಿ ನಡೆದ ಕಾರು ಅಪಘಾತದಲ್ಲಿ ಮಂಗಳೂರಿನ ರವಿಚಂದ್ರ ಶೆಟ್ಟಿ ನಿಧನರಾಗಿದ್ದಾರೆ. ಮೂವರಿಗೆ ಗಾಯಗಳಾಗಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.