spot_img

‘ಶೆಟ್ಟಿ ಗ್ಯಾಂಗ್’ ಎಂಬ ಹಣೆಪಟ್ಟಿಗೆ ರಾಜ್ ಬಿ.ಶೆಟ್ಟಿ ಖಡಕ್ ಉತ್ತರ

Date:

spot_img

ಬೆಂಗಳೂರು: ಇತ್ತೀಚೆಗೆ ಕನ್ನಡ ಚಿತ್ರರಂಗದಲ್ಲಿ ರಿಷಬ್ ಶೆಟ್ಟಿ, ರಕ್ಷಿತ್ ಶೆಟ್ಟಿ, ರಾಜ್ ಬಿ. ಶೆಟ್ಟಿ ಮತ್ತು ಪ್ರಮೋದ್ ಶೆಟ್ಟಿ ಅವರಂತಹ ಕಲಾವಿದರು ವಿಭಿನ್ನ ಶೈಲಿಯ ಸಿನಿಮಾಗಳ ಮೂಲಕ ದೊಡ್ಡ ಮಟ್ಟದ ಯಶಸ್ಸು ಗಳಿಸಿದ್ದಾರೆ. ಈ ತಂಡವನ್ನು ಕೆಲವರು ‘ಶೆಟ್ಟಿ ಮಾಫಿಯಾ’ ಅಥವಾ ‘ಶೆಟ್ಟಿ ಗ್ಯಾಂಗ್’ ಎಂದು ಕರೆಯುತ್ತಿದ್ದು, ಈ ಬಗ್ಗೆ ನಟ ಮತ್ತು ನಿರ್ದೇಶಕ ರಾಜ್ ಬಿ. ಶೆಟ್ಟಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಒಂದು ಮೊಟ್ಟೆಯ ಕಥೆ, ಉಳಿದವರು ಕಂಡಂತೆ, ಕಿರಿಕ್ ಪಾರ್ಟಿ, ಕಾಂತಾರ, ಸು ಫ್ರಮ್ ಸೋ ಮುಂತಾದ ಯಶಸ್ವಿ ಚಿತ್ರಗಳ ಮೂಲಕ ಈ ಕಲಾವಿದರು ಕನ್ನಡ ಚಿತ್ರರಂಗಕ್ಕೆ ಹೊಸ ದಿಕ್ಕು ತೋರಿದ್ದಾರೆ. ಹಾಲಿವುಡ್ ರಿಪೋರ್ಟರ್ ಇಂಡಿಯಾಗೆ ಅನುಪಮಾ ಚೋಪ್ರಾ ಅವರೊಂದಿಗೆ ನೀಡಿದ ಸಂದರ್ಶನದಲ್ಲಿ ರಾಜ್ ಬಿ. ಶೆಟ್ಟಿ ಅವರು ‘ಶೆಟ್ಟಿ ಗ್ಯಾಂಗ್’ ಎಂಬ ಕರೆಯ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

“ಕರ್ನಾಟಕದಲ್ಲಿ ಶೆಟ್ಟಿ ಮಾಫಿಯಾ, ಶೆಟ್ಟಿ ಗ್ಯಾಂಗ್ ಎನ್ನುತ್ತಾರೆ. ನೀವು ಕೂಡ ಗ್ಯಾಂಗ್ ಮಾಡಿ ಬ್ರದರ್. ನಿಮಗೆ ಒಂಟಿಯಾಗಿ ಓಡಾಡಿ ಎಂದು ಹೇಳಿದವರು ಯಾರು? ನೀವು ಕೂಡ ಗ್ಯಾಂಗ್ ಮಾಡಿ. ನಿಮಗೆ ಎಲ್ಲಾ ಗ್ಲೋರಿ, ಜನಪ್ರಿಯತೆ ಬೇಕು. ನೀವು ಬೇರೆಯವರ ಜೊತೆ ಕೊಲ್ಯಾಬರೇಟ್ ಆಗುತ್ತಿಲ್ಲ ಎಂಬುದು ನಮ್ಮ ಸಮಸ್ಯೆ ಅಲ್ಲ. ನಿಮ್ಮದೇ ಗ್ಯಾಂಗ್ ಕಟ್ಟಿಕೊಳ್ಳಿ” ಎಂದು ರಾಜ್ ಬಿ. ಶೆಟ್ಟಿ ಖಡಕ್ ಆಗಿ ಸಲಹೆ ನೀಡಿದ್ದಾರೆ.

ಈ ತಂಡದ ಸದಸ್ಯರು ಒಬ್ಬರಿಗೊಬ್ಬರು ಬೆಂಬಲವಾಗಿ ನಿಂತಿದ್ದಾರೆ. ಉದಾಹರಣೆಗೆ, ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿದ ಕಾಂತಾರ ಚಿತ್ರವನ್ನು ನೋಡಿ ರಕ್ಷಿತ್ ಶೆಟ್ಟಿ ಸಂತೋಷದಿಂದ ಅವರನ್ನು ತಬ್ಬಿಕೊಂಡಿದ್ದರು. ಇದು ಈ ಗುಂಪಿನ ಸಹಕಾರ ಮತ್ತು ಸ್ನೇಹವನ್ನು ತೋರಿಸುತ್ತದೆ. ರಾಜ್ ಬಿ. ಶೆಟ್ಟಿ ಅವರ ಈ ಪ್ರತಿಕ್ರಿಯೆ, ಈ ಹಣೆಪಟ್ಟಿಗಳ ಬಗ್ಗೆ ಅವರ ನಿಲುವನ್ನು ಸ್ಪಷ್ಟಪಡಿಸಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ರಾಜ್ಯಾದ್ಯಂತ ಕೆಎಸ್‌ಆರ್‌ಟಿಸಿ ಮುಷ್ಕರ: ಗ್ರಾಮೀಣ ಭಾಗದಲ್ಲಿ ಎಂದಿನಂತೆ ಬಸ್ ಸಂಚಾರ

ರಾಜ್ಯದಾದ್ಯಂತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ನೌಕರರು ಮುಷ್ಕರ ನಡೆಸುತ್ತಿದ್ದರೂ, ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನಲ್ಲಿ ಬಸ್ ಸಂಚಾರ ಎಂದಿನಂತೆ ಸುಗಮವಾಗಿದೆ.

ಡಾ.ಎನ್.ಎಸ್.ಎ.ಎಮ್ ಪ್ರಥಮದರ್ಜೆ ಕಾಲೇಜು 38 ನೇ ವಿದ್ಯಾರ್ಥಿ ಪರಿಷತ್ ಉದ್ಘಾಟನೆ.

ದಿನಾಂಕ 05-08-2025 ರ ಮಂಗಳವಾರದಂದು ಡಾ.ನಿಟ್ಟೆ ಶಂಕರ ಅಡ್ಯಂತಾಯ ಸ್ಮಾರಕ ಪ್ರಥಮದರ್ಜೆ ಕಾಲೇಜು ನಿಟ್ಟೆ ಇದರ 38ನೇ ವಿದ್ಯಾರ್ಥಿ ಪರಿಷತ್ ಅನ್ನು ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಅಂತರಾಷ್ಟ್ರೀಯ ಸಹಯೋಗಗಳ ನಿರ್ದೇಶಕರಾದ ಪ್ರೋ. ಹರೀಕೃಷ್ಣ ಭಟ್ ಉದ್ಘಾಟಿಸಿದರು.

ಬಲ್ಲಾಡಿ ಮಠದಲ್ಲಿ ಲಕ್ಷ ತುಳಸಿ ಅರ್ಚನೆ, ಧಾರ್ಮಿಕ ಪ್ರವಚನ

ವೇದಾಂತ ವಿದ್ವಾನ್ ಕಾರ್ಕಳ ಮದ್ವೇಶ ಆಚಾರ್ಯ ಅವರು ಮುದ್ರಾಡಿ ಗ್ರಾಮದ ಬಲ್ಲಾಡಿ ಮಠದ ಶ್ರೀ ವಿಠ್ಠಲ ದೇವರ ಲಕ್ಷ ತುಳಸಿ ಅರ್ಚನೆಯಲ್ಲಿ ಪಾಲ್ಗೊಂಡು ಧಾರ್ಮಿಕ ಉಪನ್ಯಾಸ ನೀಡಿದರು.

ತುಮಕೂರು: ಒಟಿಪಿ ಹೇಳದಿದ್ದರೂ ನಿವೃತ್ತ ನೌಕರನ ಖಾತೆಯಿಂದ ₹17 ಲಕ್ಷ ಮಾಯ; ಹೊಸ ಮಾದರಿಯ ಸೈಬರ್‌ ವಂಚನೆ!

ತುಮಕೂರಿನಲ್ಲಿ ನಿವೃತ್ತ ರೇಷ್ಮೆ ಇಲಾಖೆ ನೌಕರರೊಬ್ಬರು ಇದಕ್ಕೆ ಬಲಿಯಾಗಿದ್ದಾರೆ.