ಮಣಿಪಾಲ್ ಹೈಸ್ಕೂಲ್ ಟ್ರಸ್ಟ್ ನ ನೂತನ ಪಿ.ಆರ್.ಒ ಆಗಿ ರಾಮಚಂದ್ರ ನೆಲ್ಲಿಕಾರು ನೇಮಕ

Date:

spot_img

ಮಣಿಪಾಲ : ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿನ ಸಹಭಾಗಿತ್ವದಲ್ಲಿರುವ ಮಣಿಪಾಲ್ ಹೈಸ್ಕೂಲ್ ಟ್ರಸ್ಟ್‌ನ ಸಾರ್ವಜನಿಕ ಸಂಪರ್ಕಾಧಿಕಾರಿ (ಪಿ.ಆರ್.ಒ)ಯಾಗಿ ಶ್ರೀ ರಾಮಚಂದ್ರ ನೆಲ್ಲಿಕಾರು ನೇಮಕಗೊಂಡಿದ್ದಾರೆ.

ಶೈಕ್ಷಣಿಕ ಕ್ಷೇತ್ರದಲ್ಲಿ 33 ವರ್ಷದ ಅನುಭವ ಹೊಂದಿರುವ ಇವರು ಕಳೆದ 12 ವರ್ಷಗಳಿಂದ ಪ್ರಾಂಶುಪಾಲರಾಗಿ, ಆಂಗ್ಲಭಾಷಾ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಅನುಭವಿ, ಖ್ಯಾತ ವಾಗ್ನಿಯಾಗಿರುವ ಶ್ರೀಯುತರು 2ಸಾವಿರಕ್ಕೂ ಅಧಿಕ ಅನೇಕ ಸಾರ್ವಜನಿಕ ಸಭೆ, ಸಮಾರಂಭಗಳಲ್ಲಿ ಭಾಷಣಕಾರರಾಗಿ, ರಾಜ್ಯಮಟ್ಟದಲ್ಲಿ ನಡೆದ ಎನ್.ಎಸ್.ಎಸ್ ಶಿಬಿರದಲ್ಲಿ ಮೂರು ಬಾರಿ ಸಂಪನ್ಮೂಲ ವ್ಯಕಿಯಾಗಿ ಹಾಗೂ 300ಕ್ಕೂ ಅಧಿಕ ಎನ್.ಎಸ್.ಎಸ್ ಶಿಬಿರದಲ್ಲಿ ಉಪನ್ಯಾಸಕರಾಗಿಯೂ ಜನಪ್ರಿಯರಾಗಿದ್ದಾರೆ. ವಿದ್ಯಾರ್ಥಿ ದೆಸೆಯಲ್ಲಿಯೇ ಮೂಡಬಿದ್ರಿಯ ದವಳಾ ಕಾಲೇಜಿನ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿಯೂ, ತದನಂತರ ವೃತ್ತಿ ಬದುಕಿನಲ್ಲಿ ಕಾರ್ಕಳ-ನಾರಾವಿ ದೇವಾಡಿಗ ಸಂಘದ ಕಾರ್ಯದರ್ಶಿಯಾಗಿ, ಕಾರ್ಕಳದ ಜೆ.ಸಿ.ಐನ ಉಪಾಧ್ಯಕ್ಷರಾಗಿ, ಕಾರ್ಯದರ್ಶಿಯಾಗಿಯೂ ಸೇವೆಸಲ್ಲಿಸಿದ ಹೆಗ್ಗಳಿಕೆ ಇವರದ್ದು. ವೃತ್ತಿಯಲ್ಲಿ ಉಪನ್ಯಾಸಕನಾಗಿದ್ದರೂ, ಪ್ರವೃತ್ತಿಯಲ್ಲಿ ರಂಗಭೂಮಿ ಕ್ಷೇತ್ರದಲ್ಲಿ 300ಕ್ಕೂ ಅಧಿಕ ನಾಟಕಗಳಲ್ಲಿ ಕಲಾವಿದರಾಗಿಯೂ ಜೊತೆಗೆ 8 ತುಳು ನಾಟಕಗಳನ್ನು ಬರೆದು ಕಲಾರಸಿಕರ ಮೆಚ್ಚುಗೆಗೂ ಪಾತ್ರರಾಗಿದ್ದಾರೆ.

ವಿದ್ಯಾನಗರದ ಮಣಿಪಾಲ್ ಪದವಿ ಪೂರ್ವ ಕಾಲೇಜಿನಲ್ಲಿ ಕಾರ್ಯನಿರತ ದಿನಗಳಲ್ಲಿ ಬೆಳಗ್ಗೆ 9ರಿಂದ ಸಂಜೆ 5ರವರೆಗೆ ಶಿಕ್ಷಣಾರ್ಥಿಗಳ ಭೇಟಿಗೆ ಲಭ್ಯವಿರುತ್ತಾರೆ ಎಂದು ಸಂಸ್ಥೆಯ ಪ್ರಕಟನೆ ತಿಳಿಸಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.