spot_img

ಸಲ್ಮಾನ್ ಖಾನ್ – ಅಟ್ಲಿ ಜೋಡಿಗೆ ರಶ್ಮಿಕಾ ಮಂದಣ್ಣ? ಬಾಲಿವುಡ್‌ನಲ್ಲಿ ಮತ್ತೊಂದು ಸೆನ್ಸೇಷನ್!

Date:

spot_img

ದಕ್ಷಿಣದ ಜನಪ್ರಿಯ ನಿರ್ದೇಶಕ ಅಟ್ಲಿ ಕುಮಾರ್ ಬಾಲಿವುಡ್‌ನಲ್ಲಿ ಮತ್ತೊಂದು ದೊಡ್ಡ ಪ್ರಾಜೆಕ್ಟ್ ಕೈಗೊಳ್ಳಲು ಸಜ್ಜಾಗಿದ್ದಾರೆ. ‘ಜವಾನ್’ ಮೂಲಕ ಶಾರುಖ್ ಖಾನ್ ಜತೆ ಬಿಗ್ ಹಿಟ್ ನೀಡಿದ ಅವರು, ಈ ಬಾರಿ ಸಲ್ಮಾನ್ ಖಾನ್ ಜತೆ ಚಿತ್ರ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಕೆಲವು ದಿನಗಳಿಂದ ಊಹಾಪೋಹಗಳು ಕೇಳಿಬರುತ್ತಿದ್ದರೆ, ಈಗ ಚಿತ್ರದಲ್ಲಿ ನಾಯಕಿಯಾಗಿ ಯಾರು ಕಾಣಿಸಿಕೊಳ್ಳಲಿದ್ದಾರೆ ಎಂಬ ಪ್ರಶ್ನೆಗೆ ಉತ್ತರ ದೊರಕಿದೆ.

‘ಕಿರಿಕ್ ಪಾರ್ಟಿ’ ಮೂಲಕ ಎಂಟ್ರಿ ಕೊಟ್ಟು, ”ಪುಷ್ಪ’ದಂತಹ ಹಿಟ್ ಸಿನಿಮಾಗಳಲ್ಲಿ ಅಭಿನಯಿಸಿ, ಪ್ಯಾನ್ ಇಂಡಿಯಾ ಮಟ್ಟದ ನಟಿಯಾಗಿ ಮಿಂಚುತ್ತಿರುವ ರಶ್ಮಿಕಾ ಮಂದಣ್ಣ ಈ ಚಿತ್ರದಲ್ಲಿ ಹೀರೋಯಿನ್ ಆಗಲಿದ್ದಾರೆ ಎಂದು ‘ಫಿಲ್ಮ್ ಫೇರ್’ ವರದಿ ಮಾಡಿದೆ. ಶೀಘ್ರದಲ್ಲೇ ರಶ್ಮಿಕಾ ಚಿತ್ರಕ್ಕೆ ಒಪ್ಪಂದ ಮಾಡಿಕೊಳ್ಳಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಇನ್ನು ಈ ಚಿತ್ರದಲ್ಲಿ ಸಲ್ಮಾನ್ ಜತೆ ರಜನಿಕಾಂತ್ ಅಥವಾ ಕಮಲ್ ಹಾಸನ್ ಕೂಡ ಕಾಣಿಸಿಕೊಳ್ಳಬಹುದು ಎಂಬ ಮಾತುಗಳು ಕೇಳಿ ಬರುತ್ತಿವೆ. ಅದೃಷ್ಟವಶಾತ್, ರಶ್ಮಿಕಾ ಈಗಾಗಲೇ ‘ಸಿಕಂದರ್’ ಚಿತ್ರದಲ್ಲಿ ಸಲ್ಮಾನ್ ಜತೆ ಜೋಡಿಯಾಗಿದ್ದಾರೆ. ಈಗ ಮತ್ತೊಂದು ಚಿತ್ರಕ್ಕೂ ಅವರ ಜೋಡಿಯಾಗಿದೆ ಎಂಬ ಸುದ್ದಿ ಬಾಲಿವುಡ್‌ನಲ್ಲಿ ಹೊಸ ಸಂಚಲನ ಮೂಡಿಸಿದೆ!

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಧರ್ಮಸ್ಥಳ ಪ್ರಕರಣ: ತಿಮರೋಡಿ, ಸಮೀರ್, ಮಟ್ಟಣ್ಣನವರ್ ರವರ ತನಿಖೆಗೆ ಸ್ನೇಹಮಯಿ ಕೃಷ್ಣ ಆಗ್ರಹ!

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿರುವುದಾಗಿ ಆರೋಪಿಸಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ (SP) ಪತ್ರ ಬರೆದಿದ್ದಾರೆ.

ನೆಲದ ಮೇಲೆ ಕುಳಿತು ಊಟ ಮಾಡುವುದರ ಅದ್ಭುತ ಪ್ರಯೋಜನಗಳು

ಇತ್ತೀಚಿನ ಜೀವನಶೈಲಿ ಬದಲಾವಣೆಗಳ ನಡುವೆ, ಹಿಂದಿನ ಉತ್ತಮ ಅಭ್ಯಾಸಗಳು ಮರೆಯಾಗುತ್ತಿವೆ. ಕೆಲ ವರ್ಷಗಳ ಹಿಂದೆ ಕುಟುಂಬದವರೆಲ್ಲಾ ಒಟ್ಟಿಗೆ ನೆಲದ ಮೇಲೆ ಕುಳಿತು ಊಟ ಮಾಡುತ್ತಿದ್ದ ದೃಶ್ಯ ಈಗ ವಿರಳ.

ಕೆಜಿಎಫ್ ಬಾಬು ಮನೆಗೆ R.T.O ದಾಳಿ: ಐಷಾರಾಮಿ ಕಾರುಗಳ ತೆರಿಗೆ ಪರಿಶೀಲನೆ!

ರಾಜಕೀಯ ಮುಖಂಡ ಕೆಜಿಎಫ್ ಬಾಬು ಅವರ ಮನೆಗೆ ಇಂದು ಬೆಳ್ಳಂಬೆಳಗ್ಗೆ ಆರ್ಟಿಓ ಅಧಿಕಾರಿಗಳು ದಾಳಿ ನಡೆಸಿ ಶಾಕ್ ನೀಡಿದ್ದಾರೆ. ಐಷಾರಾಮಿ ಕಾರುಗಳ ತೆರಿಗೆ ಪಾವತಿ ಕುರಿತು ಪರಿಶೀಲನೆ ನಡೆಸಲು ಈ ದಾಳಿ ನಡೆಸಲಾಗಿದೆ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವಾತ್ಸಲ್ಯ ವಿದ್ಯಾನಿಧಿ ವಿತರಣಾ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್, ಉಡುಪಿ ಯೋಜನಾ ಕಚೇರಿಯಲ್ಲಿ ವಾತ್ಸಲ್ಯ ವಿದ್ಯಾನಿಧಿ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.