spot_img

ರಶ್ಮಿಕಾ ವಿವಾದಾತ್ಮಕ ಹೇಳಿಕೆ: “ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದವಳು ಬಹುಶಃ ನಾನೊಬ್ಬಳೇ”

Date:

ನಟಿ ರಶ್ಮಿಕಾ ಮಂದಣ್ಣ ಮತ್ತೆ ತಮ್ಮ ಹೇಳಿಕೆಯಿಂದ ಸುದ್ದಿಯಾಗಿದ್ದಾರೆ. ಇತ್ತೀಚೆಗೆ ‘ಮೇಜೋ ಸ್ಟೋರಿ’ ಸಂದರ್ಶನದಲ್ಲಿ “ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದವಳು ಬಹುಶಃ ನಾನೊಬ್ಬಳೇ” ಎಂದು ರಶ್ಮಿಕಾ ನೀಡಿದ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಟ್ರೋಲ್‌ಗೆ ಕಾರಣವಾಗಿದೆ.

ರಶ್ಮಿಕಾ ಅವರ ಈ ಹೇಳಿಕೆಯು ಕೊಡವ ಸಮುದಾಯದವರ ಕೆಂಗಣ್ಣಿಗೆ ಗುರಿಯಾಗಿದೆ. ಅವರ ಹೇಳಿಕೆಗೆ ಪ್ರತಿಕ್ರಿಯೆಯಾಗಿ ಹಲವು ಮಂದಿ, ಪ್ರೇಮಾ, ಹರ್ಷಿಕಾ ಪೂಣಚ್ಚ, ಕೃಷಿ ತಾಪಂಡ, ನಿಧಿ ಸುಬ್ಬಯ್ಯ, ಡೈಸಿ ಬೋಪಣ್ಣ, ಶ್ವೇತಾ ಚಂಗಪ್ಪ ಸೇರಿದಂತೆ ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದು ಮಿಂಚಿದ ನಟಿಯರ ಹೆಸರನ್ನು ಉಲ್ಲೇಖಿಸಿ ಟೀಕಿಸಿದ್ದಾರೆ. ಕರ್ನಾಟಕದವರಾಗಿಯೂ ರಶ್ಮಿಕಾ ಅವರಿಗೆ ಈ ಮಾಹಿತಿ ಇಲ್ಲದಿರುವುದು ವಿಪರ್ಯಾಸ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

ಈ ಬಗ್ಗೆ ಖಾಸಗಿ ಟಿವಿಯೊಂದಕ್ಕೆ ಪ್ರತಿಕ್ರಿಯೆ ನೀಡಿರುವ ಕೊಡವ ಸಮುದಾಯದ ನಟಿಯೊಬ್ಬರು, “ಈ ಬಗ್ಗೆ ನಾವೇನು ಮಾತನಾಡುವುದು, ಜನಕ್ಕೆ ಇದರ ಬಗ್ಗೆ ಗೊತ್ತಿದೆ. ಅವರ ಹೇಳಿಕೆಯ ಬಗ್ಗೆ ಜನರೇ ಕಾಮೆಂಟ್‌ ಮಾಡಿದ್ದಾರೆ. ಕೊಡವ ಸಮಾಜದಿಂದ ಯಾರೆಲ್ಲಾ ಹೀರೋಯಿನ್ಸ್ ಆಗಿದ್ದಾರೆ ಎಂದು ಅವರೇ ತಿಳಿಸಿದ್ದಾರೆ. ನಾನೇನು ಹೇಳೋದು ಇದರಲ್ಲಿ. ಅವರ ಮಟ್ಟಿಗೆ ನಾವು ಮಾತನಾಡುವುದಕ್ಕೆ ಆಗೋದಿಲ್ಲ. ನಾವು ನಾವೇ, ಅವರು ಅವರೇ. ಜನ ಹೇಗೆ ಮಾತಾಡುತ್ತಾರೆ ಅಂತ ಕೂರ್ಗ್‌ ಜನಕ್ಕೆ ಗೊತ್ತಿದೆ. ನಾನು ಇಂಡಸ್ಟ್ರಿಯಲ್ಲಿ ಮಾತನಾಡುವುದಕ್ಕಿಂತ ಕೆಲಸ ಮಾಡಿಕೊಂಡು ಹೋಗಿದ್ದೇನೆ. ನಾನು ಒಬ್ಬಳು ಕೆಲಸಗಾರ್ತಿ. ಮುಂದೆ ಏನು ಮಾಡಬೇಕು ಅದರ ಬಗ್ಗೆ ಯೋಚಿಸುತ್ತೇವೆ ಅಷ್ಟೇ. ಅವರ ಮಾತಿಗೆಲ್ಲಾ ಕಾಮೆಂಟ್‌ ಮಾಡುವುದಷ್ಟು ದೊಡ್ಡ ವ್ಯಕ್ತಿಯೇನಲ್ಲ. ಜನರೇ ನನಗೆ ಪ್ರಶಸ್ತಿ ಕೊಟ್ಟಿದ್ದಾರೆ. ಮತ್ತೇನು ಬೇಕು” ಎಂದು ಹೇಳಿದ್ದಾರೆ.

ರಶ್ಮಿಕಾ ಮಂದಣ್ಣ ಈ ಹಿಂದೆಯೂ ಇಂತಹ ವಿವಾದಾತ್ಮಕ ಹೇಳಿಕೆಗಳಿಂದಲೇ ಟ್ರೋಲ್‌ಗೆ ಒಳಗಾಗಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಫುಟ್‌ಬಾಲ್ : ಕಾರ್ಕಳ ಜ್ಞಾನಸುಧಾ ತಂಡ ಜಿಲ್ಲಾಮಟ್ಟಕ್ಕೆ

ಪದವಿಪೂರ್ವ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ತಾಲೂಕು ಮಟ್ಟದ ಫುಟ್‌ಬಾಲ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ.

‘ಸೇವಾ ಪಾಕ್ಷಿಕ ಅಭಿಯಾನ’ ಯಶಸ್ವಿಗೊಳಿಸಲು ಕುತ್ಯಾರು ನವೀನ್ ಶೆಟ್ಟಿ ಕರೆ

ಜಿಲ್ಲೆಯಾದ್ಯಂತ ನಡೆಯಲಿರುವ ಸೇವಾ ಪಾಕ್ಷಿಕ ಅಭಿಯಾನವನ್ನು ಪಕ್ಷದ ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಸಂಘಟಿತ ಪರಿಶ್ರಮದ ಮೂಲಕ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಕರೆ ನೀಡಿದರು.

ಕ್ರಿಯೇಟಿವ್ ಕಾಲೇಜಿನಲ್ಲಿ ಗುರುದೇವೋಭವ ಕಾರ್ಯಕ್ರಮ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸಪ್ತಸ್ವರ ಸಭಾಂಗಣದಲ್ಲಿ, 'ಕ್ರಿಯೇಟಿವ್ ಗುರುದೇವೋಭವ' ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಜ್ಞಾನ ಜ್ಯೋತಿಯನ್ನು ಬೆಳಗಿ, ಡಾ. ರಾಧಾಕೃಷ್ಣನ್ ರವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆಯನ್ನು ನೀಡಲಾಯಿತು.

ಕಾರ್ಕಳ ಜ್ಞಾನಸುಧಾ – ಶಿಕ್ಷಕರ ದಿನಾಚರಣೆಸಾವಧಾನದ ಮನಸ್ಥಿತಿ ಗೌರವದ ಉಪಸ್ಥಿತಿ : ವಸಂತ್ ಆಚಾರ್

ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ನಡೆದ ಶಿಕ್ಷಕರ ದಿನಾಚರಣೆಯ ಸಂದರ್ಭ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲಾ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿ ಮಾತನಾಡಿದರು.