spot_img

ರಶ್ಮಿಕಾ ವಿವಾದಾತ್ಮಕ ಹೇಳಿಕೆ: “ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದವಳು ಬಹುಶಃ ನಾನೊಬ್ಬಳೇ”

Date:

spot_img

ನಟಿ ರಶ್ಮಿಕಾ ಮಂದಣ್ಣ ಮತ್ತೆ ತಮ್ಮ ಹೇಳಿಕೆಯಿಂದ ಸುದ್ದಿಯಾಗಿದ್ದಾರೆ. ಇತ್ತೀಚೆಗೆ ‘ಮೇಜೋ ಸ್ಟೋರಿ’ ಸಂದರ್ಶನದಲ್ಲಿ “ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದವಳು ಬಹುಶಃ ನಾನೊಬ್ಬಳೇ” ಎಂದು ರಶ್ಮಿಕಾ ನೀಡಿದ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಟ್ರೋಲ್‌ಗೆ ಕಾರಣವಾಗಿದೆ.

ರಶ್ಮಿಕಾ ಅವರ ಈ ಹೇಳಿಕೆಯು ಕೊಡವ ಸಮುದಾಯದವರ ಕೆಂಗಣ್ಣಿಗೆ ಗುರಿಯಾಗಿದೆ. ಅವರ ಹೇಳಿಕೆಗೆ ಪ್ರತಿಕ್ರಿಯೆಯಾಗಿ ಹಲವು ಮಂದಿ, ಪ್ರೇಮಾ, ಹರ್ಷಿಕಾ ಪೂಣಚ್ಚ, ಕೃಷಿ ತಾಪಂಡ, ನಿಧಿ ಸುಬ್ಬಯ್ಯ, ಡೈಸಿ ಬೋಪಣ್ಣ, ಶ್ವೇತಾ ಚಂಗಪ್ಪ ಸೇರಿದಂತೆ ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದು ಮಿಂಚಿದ ನಟಿಯರ ಹೆಸರನ್ನು ಉಲ್ಲೇಖಿಸಿ ಟೀಕಿಸಿದ್ದಾರೆ. ಕರ್ನಾಟಕದವರಾಗಿಯೂ ರಶ್ಮಿಕಾ ಅವರಿಗೆ ಈ ಮಾಹಿತಿ ಇಲ್ಲದಿರುವುದು ವಿಪರ್ಯಾಸ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

ಈ ಬಗ್ಗೆ ಖಾಸಗಿ ಟಿವಿಯೊಂದಕ್ಕೆ ಪ್ರತಿಕ್ರಿಯೆ ನೀಡಿರುವ ಕೊಡವ ಸಮುದಾಯದ ನಟಿಯೊಬ್ಬರು, “ಈ ಬಗ್ಗೆ ನಾವೇನು ಮಾತನಾಡುವುದು, ಜನಕ್ಕೆ ಇದರ ಬಗ್ಗೆ ಗೊತ್ತಿದೆ. ಅವರ ಹೇಳಿಕೆಯ ಬಗ್ಗೆ ಜನರೇ ಕಾಮೆಂಟ್‌ ಮಾಡಿದ್ದಾರೆ. ಕೊಡವ ಸಮಾಜದಿಂದ ಯಾರೆಲ್ಲಾ ಹೀರೋಯಿನ್ಸ್ ಆಗಿದ್ದಾರೆ ಎಂದು ಅವರೇ ತಿಳಿಸಿದ್ದಾರೆ. ನಾನೇನು ಹೇಳೋದು ಇದರಲ್ಲಿ. ಅವರ ಮಟ್ಟಿಗೆ ನಾವು ಮಾತನಾಡುವುದಕ್ಕೆ ಆಗೋದಿಲ್ಲ. ನಾವು ನಾವೇ, ಅವರು ಅವರೇ. ಜನ ಹೇಗೆ ಮಾತಾಡುತ್ತಾರೆ ಅಂತ ಕೂರ್ಗ್‌ ಜನಕ್ಕೆ ಗೊತ್ತಿದೆ. ನಾನು ಇಂಡಸ್ಟ್ರಿಯಲ್ಲಿ ಮಾತನಾಡುವುದಕ್ಕಿಂತ ಕೆಲಸ ಮಾಡಿಕೊಂಡು ಹೋಗಿದ್ದೇನೆ. ನಾನು ಒಬ್ಬಳು ಕೆಲಸಗಾರ್ತಿ. ಮುಂದೆ ಏನು ಮಾಡಬೇಕು ಅದರ ಬಗ್ಗೆ ಯೋಚಿಸುತ್ತೇವೆ ಅಷ್ಟೇ. ಅವರ ಮಾತಿಗೆಲ್ಲಾ ಕಾಮೆಂಟ್‌ ಮಾಡುವುದಷ್ಟು ದೊಡ್ಡ ವ್ಯಕ್ತಿಯೇನಲ್ಲ. ಜನರೇ ನನಗೆ ಪ್ರಶಸ್ತಿ ಕೊಟ್ಟಿದ್ದಾರೆ. ಮತ್ತೇನು ಬೇಕು” ಎಂದು ಹೇಳಿದ್ದಾರೆ.

ರಶ್ಮಿಕಾ ಮಂದಣ್ಣ ಈ ಹಿಂದೆಯೂ ಇಂತಹ ವಿವಾದಾತ್ಮಕ ಹೇಳಿಕೆಗಳಿಂದಲೇ ಟ್ರೋಲ್‌ಗೆ ಒಳಗಾಗಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಶಿವಮೊಗ್ಗ ಹಿಂಸಾಚಾರ: ಸಿಸಿಟಿವಿ ದೃಶ್ಯದಿಂದ ಆರೋಪಿಗಳ ಪತ್ತೆಗೆ ಬಲೆ

ಶಿವಮೊಗ್ಗ ನಗರದ ಎನ್.ಟಿ. ರಸ್ತೆಯಲ್ಲಿ ಜೂನ್ 28 ರಂದು ಸಂಜೆ ಪಾಂಡುರಂಗ ವಿಠ್ಠಲ್ ದೇವಾಲಯದ ಸಮೀಪದಲ್ಲಿ ನಡೆದ ಘಟನೆ

ಕಾರ್ಕಳ ಅನೆಕೆರೆ ತಾವರೆ ವ್ರತ್ತ ದ ಬಳಿ ರಸ್ತೆ ಹೊಂಡಾ ಗುಂಡಿ ಗಳಿಂದ ಮುಕ್ತ

ಆನೆಕೆರೆ ನವಜ್ಯೋತಿ ಫ್ರೆಂಡ್ಸ್ ಕ್ಲಬ್ (ರಿ.) ಜುಲೈ 6 ರಂದು ಶ್ರೀಕಾಂತ್ ಭಾಗವತ್ ಅವರ ಮಾರ್ಗದರ್ಶನದಲ್ಲಿ ಸಂಘದ ಸದಸ್ಯರಿಂದ ರಸ್ತೆ ದುರಸ್ತಿ ಕಾರ್ಯಕ್ರಮ

125 ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ವನಿತಾ ಅರುಣ್ ಭಂಡಾರಿ ಅವರಿಂದ ತರಬೇತಿ

ಜೇಸಿಐ ಕಾರ್ಕಳ ರೂರಲ್ ನ ಜೆಜೆಸಿ ವತಿಯಿಂದ ದಿನಾಂಕ 05/07/25ನೇ ಶನಿವಾರ ಕಾರ್ಕಳ ಸುಂದರ ಪುರಾಣಿಕ ಸಂಯುಕ್ತ ಸರಕಾರಿ ಪ್ರೌಢಶಾಲೆ ಪೆರ್ವಾಜೆ ಯಲ್ಲಿ ಹದಿಹರೆಯದ ಶಿಕ್ಷಣ ತರಬೇತಿ ಕಾರ್ಯಕ್ರಮ ಜರುಗಿತು

ನೂತನ ರಾಷ್ಟ್ರೀಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯಗೆ ಕಾಂಗ್ರೆಸ್ ಹೈಕಮಾಂಡ್ ಮಹತ್ವದ ಹುದ್ದೆ

ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ರಾಷ್ಟ್ರಮಟ್ಟದಲ್ಲಿ ಮಹತ್ವದ ಜವಾಬ್ದಾರಿಯೊಂದನ್ನು ವಹಿಸಿದೆ.