ರೈಲಿನಲ್ಲಿ ನೀಡಲಾದ ಆಹಾರದ ಪೊಟ್ಟಣ ಮರುಬಳಕೆ: ವಿಡಿಯೋ ವೈರಲ್ ಬೆನ್ನಲೇ ಸ್ಪಷ್ಟನೆ ನೀಡಿದ IRCTC ಮತ್ತು ಭಾರತೀಯ ರೈಲ್ವೆ

Date:

spot_img

ನವದೆಹಲಿ: ಬಳಸಿ ಬಿಸಾಡಬೇಕಾದ (ಯೂಸ್‌ ಅಂಡ್‌ ಥ್ರೋ) ಪೇಪರ್ ಬಾಕ್ಸ್‌ಗಳನ್ನು ರೈಲಿನ ಸಿಬ್ಬಂದಿ ತೊಳೆದು ಮರುಬಳಕೆ ಮಾಡುತ್ತಿದ್ದಾರೆ ಎಂದು ಹೇಳಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ.

ವೈರಲ್ ವಿಡಿಯೋದಲ್ಲಿ ಏನಿದೆ?

ಈರೋಡ್-ಜೋಗ್ಬಾನಿ ಅಮೃತ್ ಭಾರತ್ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16601) ರೈಲಿನಲ್ಲಿ ನಡೆದಿದೆ ಎನ್ನಲಾದ ಈ ವಿಡಿಯೋದಲ್ಲಿ, ಅಡುಗೆ ಸಿಬ್ಬಂದಿ ಪ್ರಯಾಣಿಕರು ಬಳಸಿ ಬಿಸಾಕಿರುವ ಆಹಾರದ ಪೊಟ್ಟಣಗಳನ್ನು ತೊಳೆದು ಸಂಗ್ರಹಿಸಿಡುತ್ತಿರುವುದು ಕಂಡುಬಂದಿದೆ. ಈ ವಿಡಿಯೋವನ್ನು ರೈಲು ಪ್ರಯಾಣಿಕರೊಬ್ಬರು ಸೆರೆಹಿಡಿದಿದ್ದಾರೆ. ಕಾಂಗ್ರೆಸ್ ನಾಯಕ ಶ್ರೀನಿವಾಸ್ ಬಿವಿ ಅವರೂ ಈ ವಿಡಿಯೋವನ್ನು ಹಂಚಿಕೊಂಡು, ರೈಲಿನಲ್ಲಿ ನೀಡುತ್ತಿರುವ ಆಹಾರದ ಗುಣಮಟ್ಟದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು.

ಭಾರತೀಯ ರೈಲ್ವೆಯ ಸ್ಪಷ್ಟೀಕರಣ

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಈ ವಿಡಿಯೋ ಕುರಿತು ತಕ್ಷಣವೇ ಭಾರತೀಯ ರೈಲ್ವೆ ಸ್ಪಷ್ಟೀಕರಣ ನೀಡಿದೆ.

“ರೈಲಿನಲ್ಲಿ ಒಮ್ಮೆ ಬಳಸಿದ ಆಹಾರದ ಪೊಟ್ಟಣಗಳನ್ನು ಯಾವುದೇ ಕಾರಣಕ್ಕೂ ಮರುಬಳಕೆ ಮಾಡಲಾಗುತ್ತಿಲ್ಲ. ವೈರಲ್ ಆಗುತ್ತಿರುವ ವಿಡಿಯೋದಲ್ಲಿ ರೈಲ್ವೆ ಸಿಬ್ಬಂದಿ ಬಳಕೆ ಮಾಡಿದ ಆಹಾರದ ಪೊಟ್ಟಣಗಳನ್ನು ತೊಳೆಯುತ್ತಿರುವುದು ನಿಜ. ಆದರೆ, ಅದನ್ನು ಮರುಬಳಕೆ ಮಾಡಲು ಅಲ್ಲ, ಬದಲಾಗಿ ವಿಲೇವಾರಿ ಮಾಡುವ ಮೊದಲು ಸ್ವಚ್ಛಗೊಳಿಸುತ್ತಾರೆ,” ಎಂದು ರೈಲ್ವೆ ಸ್ಪಷ್ಟನೆ ನೀಡಿದೆ.

ಈ ವಿಷಯಕ್ಕೆ ಸಂಬಂಧಿಸಿ ಜನರು ತಪ್ಪು ಮಾಹಿತಿಗಳನ್ನು ಹಂಚಬೇಡಿ ಎಂದು ಮನವಿ ಮಾಡಿರುವ ರೈಲ್ವೆ ಇಲಾಖೆ, ಭಾರತೀಯ ರೈಲ್ವೆಯಲ್ಲಿ ಪ್ರಯಾಣಿಕರಿಗೆ ಉತ್ತಮ ಗುಣಮಟ್ಟದ ಆಹಾರ ಪದಾರ್ಥಗಳನ್ನು ಒದಗಿಸಲಾಗುತ್ತಿದೆ ಎಂದು ಪುನರುಚ್ಚರಿಸಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಮಳೆಗಾಲದ ಜ್ವರ, ಸಾಂಕ್ರಾಮಿಕ ರೋಗ ತಡೆಗೆ ರಾಜ್ಯ ಸರ್ಕಾರ ಸನ್ನದ್ಧ

ಮಳೆಗಾಲದಲ್ಲಿ ವೈರಲ್ ಜ್ವರ ಮತ್ತು ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಭಾರಿ ಸಿದ್ಧತೆ ನಡೆಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ನೀಟ್ ಅಕ್ರಮ: ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ನೀಟ್‌ ಪರೀಕ್ಷೆ ಅಕ್ರಮ ಖಂಡಿಸಿ ದೇಶಾದ್ಯಂತ ಪ್ರತಿಭಟನೆ. ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಖರ್ಗೆ ವಾಗ್ದಾಳಿ: ಪ್ರಧಾನಿ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ತೀವ್ರ ಆಕ್ರೋಶ

ನೀಟ್ ಅಕ್ರಮ ಹಾಗೂ ಮಂದಿರದ ಟ್ರಸ್ಟ್ ವಿಚಾರವಾಗಿ ಪ್ರಧಾನಿ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಅನುಷ್ಠಾನಕ್ಕೆ ಸರ್ಕಾರ ಬದ್ಧ: ಸಿಎಂ ಡಿ.ಕೆ. ಶಿವಕುಮಾರ್

ವಿದ್ಯುತ್ ಯೋಜನೆಗಳ ಅನುಷ್ಠಾನಕ್ಕೆ ಸರ್ಕಾರ ಬದ್ಧವಾಗಿದೆ. ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಹಾಗೂ ಕೆಪಿಸಿಎಲ್ ಸಂಸ್ಥಾಪನಾ ದಿನದ ಪೂರ್ಣ ಮಾಹಿತಿ ಇಲ್ಲಿದೆ ಓದಿ.