ರೀಲ್ಸ್ ಹುಚ್ಚಾಟ: ರೈಲು ಹಳಿ ಮೇಲೆ ಮಲಗಿ ಸಾವಿನ ದವಡೆಯಿಂದ ಪಾರಾದ ಬಾಲಕ, ಪೊಲೀಸರ ಅತಿಥಿ!

Date:

spot_img

ಭುವನೇಶ್ವರ: ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುವ ಹುಚ್ಚು ರೀಲ್ಸ್‌ಗಳಿಗಾಗಿ ಯುವಕರು ತಮ್ಮ ಜೀವವನ್ನು ಪಣಕ್ಕಿಡುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಇಂತಹದ್ದೇ ಒಂದು ಘಟನೆಯಲ್ಲಿ, ಒಡಿಶಾದ ಪುರುನಪಾಣಿ ನಿಲ್ದಾಣದ ಬಳಿಯ ದಾಲುಪಲಿ ಪ್ರದೇಶದಲ್ಲಿ ಮೂವರು ಬಾಲಕರು ಅಪಾಯಕಾರಿ ರೀಲ್ಸ್ ಮಾಡಿ ಪೊಲೀಸರ ಅತಿಥಿಯಾಗಿದ್ದಾರೆ.

ಅತಿ ವೇಗದಲ್ಲಿ ಹಾದುಹೋಗುತ್ತಿದ್ದ ರೈಲಿನ ಹಳಿಯ ಮೇಲೆ ಒಬ್ಬ ಬಾಲಕ ಮಲಗಿಕೊಂಡಿದ್ದಾನೆ. ಈ ಭೀಕರ ದೃಶ್ಯವನ್ನು ಆತನ ಇಬ್ಬರು ಸ್ನೇಹಿತರು ತಮ್ಮ ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದಾರೆ. ರೈಲು ಹೋದ ನಂತರ ಮೂವರೂ ಖುಷಿಯಿಂದ ಕುಣಿದಾಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ, ಪೊಲೀಸರ ಗಮನಕ್ಕೆ ಬಂದಿದೆ. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಮೂವರನ್ನೂ ವಶಕ್ಕೆ ಪಡೆದಿದ್ದಾರೆ.

ಪೊಲೀಸರು ಇಂತಹ ಅಜಾಗರೂಕ ಕೃತ್ಯಗಳು ಜೀವಗಳನ್ನು ಅಪಾಯಕ್ಕೆ ಸಿಲುಕಿಸುತ್ತವೆ ಮತ್ತು ಕಾನೂನುಗಳನ್ನು ಉಲ್ಲಂಘಿಸುತ್ತವೆ ಎಂದು ಎಚ್ಚರಿಕೆ ನೀಡಿದ್ದಾರೆ. ರೈಲು ಹಳಿಗಳ ಮೇಲೆ ಇಂತಹ ಸಾಹಸಗಳನ್ನು ಮಾಡದಂತೆ ಕಟ್ಟುನಿಟ್ಟಾಗಿ ಸೂಚಿಸಿದ್ದಾರೆ. ಅಲ್ಲದೆ, ಪೋಷಕರು ತಮ್ಮ ಮಕ್ಕಳ ಸಾಮಾಜಿಕ ಮಾಧ್ಯಮ ಚಟುವಟಿಕೆಗಳ ಬಗ್ಗೆ ಗಮನ ಹರಿಸಬೇಕೆಂದು ಕರೆ ನೀಡಿದ್ದಾರೆ.

“ರೀಲ್ ವೈರಲ್ ಆಗುತ್ತದೆ ಎಂಬ ನಿಟ್ಟಿನಲ್ಲಿ ಸ್ನೇಹಿತರು ಈ ರೀತಿ ಐಡಿಯಾ ಮಾಡಿದರು” ಎಂದು ಹಳಿಯ ಮೇಲೆ ಮಲಗಿದ್ದ ಬಾಲಕ ಹೇಳಿದ್ದಾನೆ. “ನಾನು ಹಳಿಗಳ ಮೇಲೆ ಮಲಗಿದಾಗ, ರೈಲು ಹಾದು ಹೋದಾಗ, ನನ್ನ ಹೃದಯ ಜೋರಾಗಿ ಬಡಿಯುತ್ತಿತ್ತು. ನಾನು ಬದುಕುಳಿಯುತ್ತೇನೆಂದು ನಿರೀಕ್ಷಿಸಿರಲಿಲ್ಲ,” ಎಂದು ಬಾಲಕ ತಿಳಿಸಿದ್ದಾನೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.