ಕಾಂತಾರ-2 ಅಧ್ಯಾಯ ಆರಂಭ? ಹೊಂಬಾಳೆ ಫಿಲಂಸ್ ಅನ್‌ಫಾಲೋ ಮಾಡಿದ ರಿಷಬ್!

Date:

spot_img

ಬೆಂಗಳೂರು: ಸ್ಯಾಂಡಲ್‌ವುಡ್‌ನ ಸ್ಟಾರ್ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಅವರ ಇತ್ತೀಚಿನ ಸೋಶಿಯಲ್ ಮೀಡಿಯಾ ಪೋಸ್ಟ್ ಮತ್ತು ನಡೆಗಳು ಚಿತ್ರರಂಗದಲ್ಲಿ ಸಂಚಲನ ಮೂಡಿಸಿವೆ. ಯುಗಾದಿ ಹಬ್ಬದ ದಿನದಂದು ಬಿಳಿ ಬೋರ್ಡ್ ಮೇಲೆ “ಅಧ್ಯಾಯ 2, ಇಲ್ಲಿಂದ ಶುರು” ಎಂದು ಬರೆದಿರುವ ಫೋಟೋ ಹಂಚಿಕೊಂಡಿರುವ ರಿಷಬ್, ಇದು ‘ಕಾಂತಾರ-2’ ಸಿನಿಮಾ ಕುರಿತಾದ ಮುನ್ಸೂಚನೆಯೇ ಎಂಬ ಚರ್ಚೆಗೆ ಗ್ರಾಸವಾಗಿದ್ದಾರೆ.

ವಿಶೇಷವೆಂದರೆ, ಈ ಪೋಸ್ಟ್‌ನಲ್ಲಿ ‘ರಿಷಬ್ ಶೆಟ್ಟಿ ಫಿಲಂಸ್’ ಬ್ಯಾನರ್‌ನ ಸುಳಿವು ನೀಡಲಾಗಿದ್ದು, ಇದು ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ. ಪ್ರಸ್ತುತ ಅವರು ‘ಜೈ ಹನುಮಾನ್’ ಚಿತ್ರದ ಮುಹೂರ್ತ ಮುಗಿಸಿ ನಟನೆಯಲ್ಲಿ ಬ್ಯುಸಿಯಾಗಿದ್ದಾರೆ. ಇದರ ಬೆನ್ನಲ್ಲೇ ರಿಷಬ್ ಶೆಟ್ಟಿ ಅವರು ಇನ್‌ಸ್ಟಾಗ್ರಾಮ್‌ನಲ್ಲಿ ‘ಹೊಂಬಾಳೆ ಫಿಲಂಸ್’ ಅಧಿಕೃತ ಖಾತೆಯನ್ನು ಅನ್‌ಫಾಲೋ ಮಾಡಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಹೊಂಬಾಳೆ ಫಿಲಂಸ್ ಮುಖ್ಯಸ್ಥ ವಿಜಯ ಕಿರಗಂದೂರು ಅವರನ್ನು ರಿಷಬ್ ಇಂದಿಗೂ ಫಾಲೋ ಮಾಡುತ್ತಿದ್ದರೂ, ಸಂಸ್ಥೆಯ ಖಾತೆಯನ್ನು ಅನ್‌ಫಾಲೋ ಮಾಡಿರುವುದು ಕಾಂತಾರ ಸೀಕ್ವೆಲ್ ನಿರ್ಮಾಣದ ಜವಾಬ್ದಾರಿಯಲ್ಲಿ ಏನಾದರೂ ಬದಲಾವಣೆಗಳಾಗಿದೆಯೇ ಅಥವಾ ಸ್ವತಂತ್ರವಾಗಿ ಸಿನಿಮಾ ನಿರ್ಮಿಸಲಿದ್ದಾರೆಯೇ ಎಂಬ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಮುಂದಿನ 2 ವರ್ಷಗಳ ನಂತರ ಈ ಹೊಸ ಅಧ್ಯಾಯ ಅಧಿಕೃತವಾಗಿ ಸೆಟ್ಟೇರುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.