spot_img

ಹೆಚ್ಚುತ್ತಿರುವ ಉಷ್ಣತೆ: ಸಾರ್ವಜನಿಕರಿಗಾಗಿ ಜಿಲ್ಲಾಡಳಿತದ ಮುನ್ನೆಚ್ಚರಿಕೆ ಮಾರ್ಗಸೂಚಿಗಳು

Date:

spot_img

ಉಡುಪಿ : ಬೇಸಿಗೆ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದಂತೆ ಉಡುಪಿ ಜಿಲ್ಲೆಯಲ್ಲಿ ಶಾಖದ ಹೊಡೆತ (Heat Wave) ಸಮಸ್ಯೆಯ ಆತಂಕ ಹೆಚ್ಚಾಗಿದೆ. ಸಾರ್ವಜನಿಕರ ಆರೋಗ್ಯಕ್ಕೆ ಹಾನಿ ಉಂಟಾಗುವ ಸಂಭವ ಇರುವುದರಿಂದ ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮಗಳನ್ನು ಪ್ರಕಟಿಸಿದೆ.

ಶಾಖದ ಹೊಡೆತದಿಂದ ಹೇಗೆ ತಯಾರಾಗಬೇಕು?
➡ ಮಧ್ಯಾಹ್ನ 12 ರಿಂದ 3 ರವರೆಗೆ ಬಿಸಿಲಿಗೆ ಹೋಗುವುದು ತಪ್ಪಿಸಿ.
➡ ಸಾಕಷ್ಟು ನೀರು ಕುಡಿಯುವುದು; ಬಾಯಾರಿಕೆ ಇಲ್ಲದಿದ್ದರೂ ನೀರು ಸೇವಿಸಬೇಕು.
➡ ಹಗುರವಾದ, ಸಡಿಲ, ತಿಳಿ ಬಣ್ಣದ ಹತ್ತಿ ಬಟ್ಟೆ ಧರಿಸಬೇಕು.
➡ ಬಿಸಿಲಿಗೆ ಹೋಗುವಾಗ ಟೋಪಿ, ಛತ್ರಿ, ಬೂಟು ಅಥವಾ ಚಪ್ಪಲ್ ಬಳಸಬೇಕು.
➡ ಶ್ರಮದಾಯಕ ಚಟುವಟಿಕೆಗಳನ್ನು ಬಿಸಿಲಿನಲ್ಲಿ ಮಾಡುವುದು ತಪ್ಪಿಸಬೇಕು.

ಎಲ್ಲರಿಗೂ ಮುಖ್ಯವಾದ ಮುನ್ನೆಚ್ಚರಿಕೆಗಳು
✔ ಆಲ್ಕೊಹಾಲ್, ಚಹಾ, ಕಾಫಿ, ಕಾರ್ಬೋನೇಟೆಡ್ ಪಾನೀಯಗಳನ್ನು
ಮಿತಿಯಾಗಿ ಬಳಸಬೇಕು.
✔ ಹಳೆಯ ಆಹಾರ ಸೇವನೆ ತಪ್ಪಿಸಿ, ಹೆಚ್ಚು ಪ್ರೋಟೀನ್ ಇರುವ ಆಹಾರವನ್ನು
ಸೇವಿಸಬೇಕು.
✔ ಬಿಸಿಲಿಗೆ ಹೆಚ್ಚು ತೆರೆದಿರದಂತೆ ಮುನ್ನೆಚ್ಚರಿಕೆ ವಹಿಸಬೇಕು.
✔ ತಲೆ, ಕುತ್ತಿಗೆ, ಮುಖ, ಕೈಕಾಲುಗಳ ಮೇಲೆ ಒದ್ದೆಯಾದ ಬಟ್ಟೆ ಇಡಬಹುದು.
✔ ನಿಲ್ಲಿಸಿದ ವಾಹನಗಳಲ್ಲಿ ಮಕ್ಕಳನ್ನು ಅಥವಾ ಸಾಕುಪ್ರಾಣಿಗಳನ್ನು ಬಿಡಬಾರದು.
✔ ತುರ್ತು ಪರಿಸ್ಥಿತಿಯಲ್ಲಿ ತಕ್ಷಣ ವೈದ್ಯರನ್ನು ಸಂಪರ್ಕಿಸಬೇಕು.

ಸನ್‌ಸ್ಟ್ರೋಕ್ ಆಗಿದ್ದರೆ ಏನು ಮಾಡಬೇಕು?
➡ ತಕ್ಷಣ ವ್ಯಕ್ತಿಯನ್ನು ತಂಪಾದ ಸ್ಥಳಕ್ಕೆ ಕರೆದೊಯ್ಯಬೇಕು.
➡ ದೇಹವನ್ನು ಒದ್ದೆಯಾದ ಬಟ್ಟೆಯಿಂದ ತೊಳೆಯಬೇಕು, ತಲೆಗೆ ತಣ್ಣೀರಿನ ತೊಳೆಹಾಕಬೇಕು.
➡ ಓ.ಆರ್.ಎಸ್, ನಿಂಬೆ ಹಣ್ಣು ನೀರು, ತೋರಣಿ, ಮಜ್ಜಿಗೆ ಸೇವಿಸಲು ನೀಡಬೇಕು.
➡ ತಕ್ಷಣ ವೈದ್ಯಕೀಯ ಚಿಕಿತ್ಸೆ ಪಡೆಯಲು ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಹೋಗಬೇಕು.

ಮತ್ತು ಇತರ ಮುನ್ನೆಚ್ಚರಿಕೆಗಳು
✔ ಪ್ರಾಣಿಗಳಿಗೆ ನೆರಳಿನಲ್ಲಿ ಇರಿಸಿ, ನೀರು ಕೊಡಿ.
✔ ಮನೆಯನ್ನು ತಂಪಾಗಿರಿಸಲು ಪರದೆ, ಶಟರ್‌ಗಳನ್ನು ಬಳಸಿರಿ.
✔ ತಣ್ಣೀರಿನಲ್ಲಿ ಸ್ನಾನ ಮಾಡಿ, ಫ್ಯಾನ್ ಅಥವಾ ಒದ್ದೆಯಾದ ಬಟ್ಟೆ ಬಳಸಿ.
✔ ತಂಪಾದ ವಾತಾವರಣದಿಂದ ಬಿಸಿಲಿಗೆ ಬರುವವರು ಕ್ರಮೇಣ ಹೊಂದಿಕೊಳ್ಳಬೇಕು.

ತುರ್ತು ಸೇವೆಗಾಗಿ 1077 ಅಥವಾ 0820-2574802 ಸಂಪರ್ಕಿಸಬಹುದು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಮಣಿಪಾಲದಲ್ಲಿ ಸಂಚಾರ ನಿಯಮ ಉಲ್ಲಂಘನೆ: ಲಕ್ಷಾಂತರ ರೂ. ದಂಡ ಸಂಗ್ರಹ

ಸಂಚಾರ ನಿಯಮ ಉಲ್ಲಂಘನೆ ಮತ್ತು ಮದ್ಯಪಾನ ಮಾಡಿ ವಾಹನ ಚಲಾಯಿಸುವವರ ವಿರುದ್ಧ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಲಕ್ಷಾಂತರ ರೂಪಾಯಿ ದಂಡ ಸಂಗ್ರಹಿಸಲಾಗಿದೆ.

ಕಲಾಪದ ವೇಳೆ ಮೊಬೈಲ್‌ನಲ್ಲಿ ‘ರಮ್ಮಿ’ ಆಟದಲ್ಲಿ ಮುಳುಗಿದ ಕೃಷಿ ಸಚಿವ

ಮಹಾರಾಷ್ಟ್ರ ವಿಧಾನಸಭೆಯ ಕಲಾಪ ನಡೆಯುತ್ತಿದ್ದ ಸಂದರ್ಭದಲ್ಲಿ ಓರ್ವ ಸಚಿವರು ತಮ್ಮ ಮೊಬೈಲ್ ಫೋನ್‌ನಲ್ಲಿ 'ರಮ್ಮಿ' ಗೇಮ್ ಆಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್

ಆಧಾರ್ ಕಾರ್ಡ್‌ಗೆ ಅವಧಿ ಇದೆಯೇ? ನಿಮ್ಮ ಆಧಾರ್ ಸಿಂಧುತ್ವವನ್ನು ಪರಿಶೀಲಿಸುವುದು ಹೇಗೆ?

ಸಾಮಾನ್ಯವಾಗಿ ಡ್ರೈವಿಂಗ್ ಲೈಸೆನ್ಸ್, ಪಾಸ್‌ಪೋರ್ಟ್‌ನಂತಹ ಗುರುತಿನ ಚೀಟಿಗಳಿಗೆ ನಿರ್ದಿಷ್ಟ ಅವಧಿ ಇರುತ್ತದೆ. ಆದರೆ, ಬಹುತೇಕರಿಗೆ ಆಧಾರ್ ಕಾರ್ಡ್‌ಗೆ ಎಕ್ಸ್‌ಪೈರಿ ದಿನಾಂಕದ ಬಗ್ಗೆ ಗೊಂದಲವಿದೆ.

ಉಪರಾಷ್ಟ್ರಪತಿ ಧಂಖರ್: ಭಾರತದ ಸಾರ್ವಭೌಮತೆಗೆ ಸವಾಲಿಲ್ಲ, ವಿದೇಶಿ ಹಸ್ತಕ್ಷೇಪ ಅಸಾಧ್ಯ

ಪಾಕಿಸ್ತಾನದೊಂದಿಗಿನ ಭಾರತದ ಸಂಬಂಧಗಳ ಕುರಿತು ಅಮೆರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಇತ್ತೀಚಿನ ಹೇಳಿಕೆಗಳ ಹಿನ್ನೆಲೆಯಲ್ಲಿ, ಭಾರತದ ಉಪರಾಷ್ಟ್ರಪತಿ ಜಗದೀಪ್ ಧಂಖರ್ ಅವರು ದೇಶದ ಸಾರ್ವಭೌಮತ್ವ ಮತ್ತು ಸ್ವತಂತ್ರ ನಿರ್ಧಾರ ತೆಗೆದುಕೊಳ್ಳುವಿಕೆಯ ಬಗ್ಗೆ ಬಲವಾದ ಸಂದೇಶವನ್ನು ರವಾನಿಸಿದ್ದಾರೆ