ಆರ್‌ಎಸ್‌ಎಸ್ ಮುಖಂಡರ ಮನೆಗೆ ಮಧ್ಯರಾತ್ರಿ ಪೊಲೀಸರ ದಾಳಿ: ದ.ಕ. ಎಸ್‌ಪಿಗೆ ಹೈಕೋರ್ಟ್ ನೋಟಿಸ್!

Date:

spot_img

ಮಂಗಳೂರು: ಆರ್‌ಎಸ್‌ಎಸ್ ಮುಖಂಡ ಯು.ಜಿ. ರಾಧಾ ಅವರ ಮನೆಗೆ ಪೊಲೀಸ್ ದಾಳಿ ಪ್ರಕರಣ ಇದೀಗ ನ್ಯಾಯಾಂಗ ದಿಕ್ಕಿನಲ್ಲಿ ತೀವ್ರತೆ ಪಡೆದುಕೊಂಡಿದೆ. ಯಾವುದೇ ಕ್ರಿಮಿನಲ್ ಪ್ರಕರಣವಿಲ್ಲದಿದ್ದರೂ, ರಾತ್ರಿವೇಳೆ ಮನೆಗೆ ಬಂದ ಪೊಲೀಸರು ಅವರ ಫೋಟೋ ತೆಗೆದು, ಜಿಪಿಎಸ್ ಅಪ್‌ಲೋಡ್ ಮಾಡಿದ್ದರೆಂದು ಆರೋಪ ಕೇಳಿಬಂದಿದೆ.

ಈ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲಾ ಎಸ್‌ಪಿ ಡಾ. ಅರುಣ್ ಕುಮಾರ್‌ಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಜೂನ್ 1ರಂದು ಉಪ್ಪಿನಂಗಡಿಯಲ್ಲಿರುವ ಯು.ಜಿ. ರಾಧಾ ಅವರ ಮನೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿ ಹೈಕೋರ್ಟ್ ನ್ಯಾ. ಸುನಿಲ್ ದತ್ ಯಾದವ್ ಅವರ ಏಕಸದಸ್ಯ ಪೀಠ ಪ್ರಕರಣವನ್ನು ವಿಚಾರಣೆ ನಡೆಸಿದ್ದು, ಕಾರಣ ಕೇಳಿ ಎಸ್ಪಿಗೆ ನೋಟಿಸ್ ನೀಡಿದೆ.

ರಾಧಾ ಅವರು ನ್ಯಾಯಾಲಯಕ್ಕೆ ಸಲ್ಲಿಸಿದ ಅರ್ಜಿಯಲ್ಲಿ, “ನನಗೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡಲಾಗಿದೆ. ನನ್ನ ವ್ಯಕ್ತಿತ್ವ, ಖಾಸಗಿತನ ಹಕ್ಕಿಗೆ ಧಕ್ಕೆಯಾಗಿದೆ” ಎಂದು ದೂರಿದ್ದಾರೆ. ಅವರು 20 ಲಕ್ಷ ರೂಪಾಯಿ ಮಾನನಷ್ಟಕ್ಕೆ ಬೇಡಿಕೆ ಇಟ್ಟಿದ್ದಾರೆ. ಇವರ ಪರವಾಗಿ ನ್ಯಾಯವಾದಿ ಅರುಣ್ ಶ್ಯಾಮ್ ವಾದ ಮಂಡಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಪೊಲೀಸ್ ದೂರು ಪ್ರಾಧಿಕಾರ ಹಾಗೂ ರಾಷ್ಟ್ರೀಯ ಮಾನವ ಹಕ್ಕು ಆಯೋಗ ಕೂಡ ಜಿಲ್ಲಾ ಎಸ್‌ಪಿಗೆ ನೋಟಿಸ್ ನೀಡಿರುವುದು ಬೆಳಕಿಗೆ ಬಂದಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ