spot_img

ಸೈoಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಕೋಪರೇಟಿವ್ ಲಿಮಿಟೆಡ್ ಕಾರ್ಕಳ ಬ್ರಾಂಚ್ ವತಿಯಿಂದ ವಿಜೇತ ವಿಶೇಷ ಶಾಲಾ ಮಕ್ಕಳಿಗೆ ಅವಶ್ಯಕ ವಸ್ತುಗಳ ಹಸ್ತಾಂತರ

Date:

spot_img

ಕಾರ್ಕಳ : ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಕೋಪರೇಟಿವ್ ಲಿಮಿಟೆಡ್‌ನ ಕಾರ್ಕಳ ಶಾಖೆಯ ವತಿಯಿಂದ, ವಿಜೇತ ವಿಶೇಷ ಶಾಲೆಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳಿಗೆ ಅಗತ್ಯ ವಸ್ತುಗಳನ್ನು ಹಸ್ತಾಂತರಿಸಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಗಳಾಗಿ ಉದ್ಯಮಿಗಳು ಮತ್ತು ಬಂಟ್ಸ್ ಕ್ರೆಡಿಟ್ ಕೋಪರೇಟಿವ್ ಸೊಸೈಟಿ ಅಧ್ಯಕ್ಷರು , ರಾಜಕೀಯ ಮುಖಂಡರಾದ ಉದಯ್ ಶೆಟ್ಟಿ ಮುನಿಯಾಲು ಹಾಗೂ ಭುವನೇಂದ್ರ ಹೈಸ್ಕೂಲ್ ಪ್ರಾಧ್ಯಾಪಕರು , ಸಾಹಿತ್ಯ ಪರಿಷತ್ತಿನ ಸಂಘಟನಾ ಕಾರ್ಯದರ್ಶಿ, ಸ್ಕೌಟ್ & ಗೈಡ್ಸ್ ಕಾರ್ಕಳ ವಲಯದ ಕಾರ್ಯದರ್ಶಿ ಗಣೇಶ್ ಜಾಲ್ಸುರ್ ಇವರು ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಬೆಡ್ ಶೀಟ್, ಟವೆಲ್ ಹಾಗೂ ತಂಪು ಪಾನೀಯ ವಸ್ತುಗಳನ್ನು ಹಸ್ತಾಂತರಿಸಿದರು.

ಸೈoಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಕೋಪರೇಟಿವ್ ಲಿಮಿಟೆಡ್ ಕಾರ್ಕಳ ಬ್ರಾಂಚ್ ಮ್ಯಾನೇಜರ್ ಕಿಶೋರ್ ದೇವಾಡಿಗ , ಉಡುಪಿ & ಮಂಗಳೂರು ವಿಭಾಗ ಅಭಿವೃದ್ಧಿ ವ್ಯವಸ್ಥಾಪಕರಾದ ಮನೀಶ್, ಉಡುಪಿ & ಮಂಗಳೂರು ವಿಭಾಗ ಸಾಲ ವಸೂಲಾತಿ ಅಧಿಕಾರಿ ಗೌತಮ್ ರೈ , ವಿಜೇತ ವಿಶೇಷ ಶಾಲಾ ಸಂಸ್ಥಾಪಕರಾದ ಡಾ.ಕಾಂತಿ ಹರೀಶ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ವಿಶೇಷ ಶಿಕ್ಷಕಿ ಶ್ರೀಮತಿ ಶ್ರೀನಿಧಿ ಕಾರ್ಯಕ್ರಮ ನಿರೂಪಿಸಿ ಡಾ.ಕಾಂತಿ ಹರೀಶ್ ಸ್ವಾಗತಿಸಿ, ಸಿಬ್ಬಂದಿ ವರ್ಗದವರು ಹಾಗೂ ಮಕ್ಕಳು ಪ್ರಾರ್ಥನೆಯನ್ನು ನೆರವೇರಿಸಿ, ವಿಶೇಷ ಶಿಕ್ಷಕಿ ಶ್ರೀಮತಿ ಶ್ವೇತಾ ವಂದಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಹೆಬ್ರಿ ಗಣೇಶೋತ್ಸವದ ಸುವರ್ಣ ಸಂಭ್ರಮ: ಪುರುಷ-ಮಹಿಳೆಯರಿಗಾಗಿ ಕ್ರೀಡಾ ಸ್ಪರ್ಧೆಗಳು

ಹೆಬ್ರಿ ಗಣೇಶೋತ್ಸವದ ಸುವರ್ಣ ಸಂಭ್ರಮದ ಪ್ರಯುಕ್ತ ಪುರುಷ ಮತ್ತು ಮಹಿಳೆಯರಿಗಾಗಿ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಈ ಕ್ರೀಡಾಕೂಟಕ್ಕೆ ಮಹಿಳಾ ಸಮಿತಿಯ ಸಂಚಾಲಕಿ ಬಾನು ಪಿ. ಬಲ್ಲಾಲ್ ಅವರು ಚಾಲನೆ ನೀಡಿದರು.

ಯರ್ಲಪಾಡಿಯಲ್ಲಿ ಭೀಕರ ಸುಳಿಗಾಳಿ: ಹತ್ತಾರು ಮನೆಗಳು, ತೋಟಗಳಿಗೆ ವ್ಯಾಪಕ ಹಾನಿ

ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಬೀಸಿದ ಭೀಕರ ಸುಳಿಗಾಳಿ ಯರ್ಲಪಾಡಿ ಗ್ರಾಮದ ಜಾರ್ಕಳ ಅರ್ಬಿ ಪ್ರದೇಶದಲ್ಲಿ ಭಾರಿ ಹಾನಿ ಉಂಟುಮಾಡಿದೆ. ಈ ಅನಿರೀಕ್ಷಿತ ಪ್ರಕೃತಿ ವಿಕೋಪದಿಂದಾಗಿ ಹತ್ತಾರು ಮನೆಗಳು, ವಿದ್ಯುತ್ ಕಂಬಗಳು ಹಾಗೂ ಕೃಷಿ ತೋಟಗಳಿಗೆ ತೀವ್ರ ಹಾನಿಯಾಗಿದೆ.

ಬೈಲೂರು: ಉದ್ಯಮಿ ಕೃಷ್ಣರಾಜ ಹೆಗ್ಡೆ (ತಮ್ಮಣ್ಣ) ಆತ್ಮಹತ್ಯೆ

ಬೈಲೂರಿನ ಉದ್ಯಮಿ ಕೃಷ್ಣರಾಜ ಹೆಗ್ಡೆ (ತಮ್ಮಣ್ಣ) (45) ಅವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ವರದಿಯಾಗಿದೆ.

14 ವರ್ಷದಿಂದ ತಲೆಮರೆಸಿಕೊಂಡಿದ್ದ ಮಲ್ಪೆ ಕಳ್ಳತನ ಪ್ರಕರಣದ ಆರೋಪಿ ಪೋಲೀಸರ ಬಲೆಗೆ

ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.