ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಇನ್ನಿಲ್ಲ: ನಾಡಿಗೆ ಒಂದು ದಿನ ಸಾರ್ವಜನಿಕ ರಜೆ ಘೋಷಣೆ

Date:

spot_img

ಬೆಂಗಳೂರು: ಪದ್ಮಶ್ರೀ ಪುರಸ್ಕೃತೆ, ‘ವೃಕ್ಷಮಾತೆ’ ಎಂದೇ ಖ್ಯಾತರಾಗಿದ್ದ ಸಾಲು ಮರದ ತಿಮ್ಮಕ್ಕನವರು ದಿನಾಂಕ: 14.11.2025 ರ ಶುಕ್ರವಾರ ಬೆಳಗಿನ ಜಾವ 02:30ಕ್ಕೆ ನಿಧನರಾಗಿದ್ದಾರೆ. ಅವರ ನಿಧನದ ವಿಷಯವನ್ನು ಕರ್ನಾಟಕ ರಾಜ್ಯ ಸರ್ಕಾರವು ತೀವ್ರ ಸಂತಾಪದಿಂದ ಈ ಮೂಲಕ ಪ್ರಕಟಿಸಿದೆ. ಅವರಿಗೆ 114 ವರ್ಷ ವಯಸ್ಸಾಗಿತ್ತು.

ಸಾವಿರಾರು ಮರಗಳನ್ನು ನೆಟ್ಟು ಪೋಷಿಸುವ ಮೂಲಕ ಪರಿಸರ ಸಂರಕ್ಷಣೆಗೆ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದ ಈ ಮಹಾಚೇತನದ ಅಗಲಿಕೆಯಿಂದ ನಾಡಿಗೆ ತುಂಬಲಾರದ ನಷ್ಟವಾಗಿದೆ.

ಅಂತ್ಯಕ್ರಿಯೆ ಮತ್ತು ಸಾರ್ವಜನಿಕ ರಜೆ ಘೋಷಣೆ

  • ಸಕಲ ಸರ್ಕಾರಿ ಗೌರವ: ದಿವಂಗತರ ಅಂತ್ಯಕ್ರಿಯೆಯನ್ನು ದಿನಾಂಕ: 15.11.2025 ರ ಶನಿವಾರದಂದು ಅವರ ಹುಟ್ಟೂರಾದ ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಸೋಮನಹಳ್ಳಿ ಸ್ವಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು.
  • ಸಾರ್ವಜನಿಕ ರಜೆ: ದಿವಂಗತರ ಗೌರವಾರ್ಥವಾಗಿ ದಿನಾಂಕ 15.11.2025 ರ ಶನಿವಾರದಂದು ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳಿಗೆ ಮತ್ತು ಎಲ್ಲಾ ಶಾಲಾ ಕಾಲೇಜುಗಳಿಗೆ (ಅನುದಾನಿತ ವಿದ್ಯಾ ಸಂಸ್ಥೆಗಳು ಸೇರಿದಂತೆ) ಸಾರ್ವಜನಿಕ ರಜೆಯನ್ನು ಘೋಷಿಸಲಾಗಿದೆ.

ನಾಡಿನ ಈ ಪರಿಸರ ರಾಯಭಾರಿಗೆ ಶ್ರದ್ಧಾಂಜಲಿ ಸಲ್ಲಿಸಲು ಸರ್ಕಾರವು ಈ ನಿರ್ಧಾರವನ್ನು ಕೈಗೊಂಡಿದೆ.

ಈ ಅಧಿಸೂಚನೆಯನ್ನು ಕರ್ನಾಟಕ ಸರ್ಕಾರದ ಸಚಿವಾಲಯ, ವಿಧಾನ ಸೌಧ, ಬೆಂಗಳೂರು, ದಿನಾಂಕ: 14.11.2025 ರಂದು ಹೊರಡಿಸಲಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.