spot_img

ಪ್ರಾಮಾಣಿಕತೆಗೆ ಸಲಾಮ್: ಕಾಗೆ ಹೊತ್ತೊಯ್ದ ಚಿನ್ನದ ಬಳೆ 3 ವರ್ಷದ ಬಳಿಕ ಮರಳಿ ಒಡತಿಯ ಕೈಗೆ!

Date:

spot_img

ತಿರುವನಂತಪುರಂ: ಮೂರು ವರ್ಷಗಳ ಹಿಂದೆ ಕಾಗೆಯೊಂದು ಹೊತ್ತೊಯ್ದಿದ್ದ ಚಿನ್ನದ ಬಳೆಯೊಂದು ಮರಳಿ ತನ್ನ ಮಾಲೀಕರ ಕೈ ಸೇರಿರುವ ಅಚ್ಚರಿಯ ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯ ತ್ರಿಕ್ಕಲಂಗೋಡ್‌ನಲ್ಲಿ ನಡೆದಿದೆ.

ಮೂರು ವರ್ಷಗಳ ಹಿಂದೆ, ರುಕ್ಮಿಣಿ ಎಂಬುವವರು ಕೆಲಸ ಮಾಡುವಾಗ ತಮ್ಮ ಒಂದೂವರೆ ಪವನ್ ತೂಕದ (12 ಗ್ರಾಂ) ಚಿನ್ನದ ಬಳೆಯನ್ನು ಕೈಯಿಂದ ತೆಗೆದಿಟ್ಟಿದ್ದರು. ಕ್ಷಣಾರ್ಧದಲ್ಲಿ, ಅಲ್ಲಿಗೆ ಬಂದ ಕಾಗೆಯೊಂದು ಆ ಬಳೆಯನ್ನು ಎಗರಿಸಿ ಹಾರಿಹೋಗಿತ್ತು. ಕಳೆದುಹೋದ ಬಳೆಗಾಗಿ ಕೆಲವು ದಿನ ಹುಡುಕಾಡಿದ ರುಕ್ಮಿಣಿ ಕುಟುಂಬ, ನಂತರ ಅದರ ಆಸೆಯನ್ನು ಕೈಬಿಟ್ಟಿತ್ತು.

ಆದರೆ, ಮೂರು ತಿಂಗಳ ಹಿಂದೆ, ಅನ್ವರ್ ಸಾದತ್ ಎಂಬುವವರು ತೆಂಗಿನಕಾಯಿ ಕೀಳಲು ಹೋಗಿದ್ದಾಗ, ತಮ್ಮ ಮಗಳಿಗಾಗಿ ಮಾವು ಕೀಳಲು ಅನುಮತಿ ಪಡೆದು ಮರ ಹತ್ತಿದ್ದಾರೆ. ಮರದ ಕೊಂಬೆಯನ್ನು ಅಲ್ಲಾಡಿಸಿದಾಗ, ಕೆಳಗೆ ಹೊಳೆಯುವ ವಸ್ತುವೊಂದು ಬಿದ್ದಿದೆ. ಇದನ್ನು ಅವರ ಪುತ್ರಿ ಫಾತಿಮಾ ಹುದಾ ಗಮನಿಸಿದ್ದಾಳೆ. ಅದು ಬಳೆಯ ತುಂಡಾಗಿದ್ದು, ಪರಿಶೀಲಿಸಿದಾಗ ಅಸಲಿ ಚಿನ್ನವೆಂದು ಖಚಿತವಾಗಿದೆ. ಆಶ್ಚರ್ಯಕರ ಸಂಗತಿಯೆಂದರೆ, ಈ ಚಿನ್ನದ ಬಳೆ ರುಕ್ಮಿಣಿ ಅವರ ಮನೆಯಿಂದ ಕೇವಲ 50 ಮೀಟರ್ ದೂರದಲ್ಲೇ ಪತ್ತೆಯಾಗಿದೆ.

ಅನ್ವರ್ ಸಾದತ್ ಅವರ ಪ್ರಾಮಾಣಿಕತೆ:

ಅನ್ವರ್ ಸಾದತ್ ಅವರು ಈ ಚಿನ್ನದ ಬಳೆಯನ್ನು ಊರಿನ ಲೈಬ್ರರಿಗೆ ಕೊಟ್ಟು, ಅದರ ನಿಜವಾದ ಮಾಲೀಕರನ್ನು ತಲುಪಿಸುವಂತೆ ಮನವಿ ಮಾಡುವ ಮೂಲಕ ತಮ್ಮ ಪ್ರಾಮಾಣಿಕತೆಯನ್ನು ಮೆರೆದಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ, ರುಕ್ಮಿಣಿ ತಮ್ಮ ಪತಿಯೊಂದಿಗೆ ಲೈಬ್ರರಿಗೆ ತೆರಳಿ ಬಳೆ ತನ್ನದೇ ಎಂದು ಖಚಿತಪಡಿಸಿಕೊಂಡಿದ್ದಾರೆ. ಕಳೆದುಹೋಗಿದ್ದ ತಮ್ಮ ಬಳೆಯನ್ನು ಕಂಡು ರುಕ್ಮಿಣಿ ತುಂಬಾ ಖುಷಿಯಾಗಿದ್ದಾರೆ. ಬಳೆಯನ್ನು ಪತ್ತೆಹಚ್ಚಿದವರ ಕೈಯಿಂದಲೇ ಅದನ್ನು ಪಡೆಯಬೇಕು ಎಂಬ ರುಕ್ಮಿಣಿ ಅವರ ಮನವಿ ಮೇರೆಗೆ, ಊರಿನವರು ಅನ್ವರ್ ಸಾದತ್ ಕೈಯಿಂದಲೇ ರುಕ್ಮಿಣಿ ಅವರಿಗೆ ಬಳೆಯನ್ನು ಮರಳಿ ಕೊಡಿಸಿದ್ದಾರೆ. “ಈ ಬಳೆ ಮರಳಿ ಸಿಗುತ್ತದೆ ಎಂದು ನಾನು ನಿರೀಕ್ಷಿಸಿರಲಿಲ್ಲ,” ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಈ ಘಟನೆ ಪ್ರಾಮಾಣಿಕತೆ ಮತ್ತು ಅದೃಷ್ಟಕ್ಕೆ ಸಾಕ್ಷಿಯಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಉಡುಪಿ: ಭಾರಿ ಮಳೆ ಹಿನ್ನೆಲೆ, ಜುಲೈ 17ರಂದು ಶಾಲಾ-ಅಂಗನವಾಡಿಗಳಿಗೆ ರಜೆ ಘೋಷಣೆ

ಕರಾವಳಿ ಜಿಲ್ಲೆ ಉಡುಪಿಯಲ್ಲಿ ಕಳೆದ ಹಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯು ಜನಜೀವನಕ್ಕೆ ಅಡ್ಡಿಯಾಗುತ್ತಿದ್ದು, ಮುಂಗಾರು ಮಳೆಯ ಅಬ್ಬರ ಹೆಚ್ಚಾಗುವ ಸಾಧ್ಯತೆಗಳಿರುವುದರಿಂದ ಜಿಲ್ಲಾಡಳಿತ ಮಹತ್ವದ ನಿರ್ಧಾರ ಕೈಗೊಂಡಿದೆ.

NVIDIAಗೆ ಬ್ರಾಡ್‌ಕಾಮ್ ಸವಾಲು: ಹೊಸ ಟೊಮಾಹಾಕ್ ಅಲ್ಟ್ರಾ ನೆಟ್‌ವರ್ಕಿಂಗ್ ಚಿಪ್ ಬಿಡುಗಡೆ

ಬ್ರಾಡ್‌ಕಾಮ್ಸ್ (AVGO.O), ಮಂಗಳವಾರ ಹೊಸ ಟ್ಯಾಬ್ ಚಿಪ್ ಘಟಕವನ್ನು ಅನಾವರಣಗೊಳಿಸಿದೆ, ಇದು ಕೃತಕ ಬುದ್ಧಿಮತ್ತೆ ಡೇಟಾ ಕ್ರಂಚಿಂಗ್ ಅನ್ನು ವೇಗಗೊಳಿಸುವ ಗುರಿಯನ್ನು ಹೊಂದಿರುವ ಹೊಸ ನೆಟ್‌ವರ್ಕಿಂಗ್ ಪ್ರೊಸೆಸರ್ ಆಗಿದೆ

ಕಿವಿ ಹಣ್ಣು: ಆರೋಗ್ಯದ ಅಮೃತ, ತಪ್ಪದೇ ಸೇವಿಸಿ!!

ಕಿವಿ ಹಣ್ಣು, ಚೀನಾದ ಮಣ್ಣಿನಿಂದ ಹುಟ್ಟಿ, ನ್ಯೂಜಿಲೆಂಡ್‌ನಲ್ಲಿ ಜಾಗತಿಕವಾಗಿ ಬೆಳೆದು ನಿಂತಿರುವ ಒಂದು ಪುಟ್ಟ ಪೌಷ್ಟಿಕ ನಿಧಿ

ನೀರೆ ಗ್ರಾಮದಲ್ಲಿ ಪೊಲೀಸ್ ಜಾಗೃತಿ ಸಭೆ: ಸೈಬರ್ ಕ್ರೈಂ, 112 ಸಹಾಯವಾಣಿ ಬಗ್ಗೆ ಮಾಹಿತಿ ನೀಡಿದ ಉಮೇಶ್ ನಾಯಕ್

ಕಾರ್ಕಳ ನಗರ ಪೊಲೀಸ್ ಠಾಣೆಯ ಮುಖ್ಯ ಆರಕ್ಷಕರಾದ (ಹೆಡ್ ಕಾನ್‌ಸ್ಟೇಬಲ್) ಉಮೇಶ್ ನಾಯಕ್ ಅವರು ನೀರೆ ಗ್ರಾಮದ ಬೀಟ್ ಪೊಲೀಸ್ ಆಗಿ, ಹಗಲು ಗ್ರಾಮ ಗಸ್ತು ಸಮಯದಲ್ಲಿ ಮಹತ್ವದ ಕಾರ್ಯಕ್ರಮವೊಂದನ್ನು ನಡೆಸಿದರು.