spot_img

ಸಮ್ಮಿಲನ ಟ್ರೋಫಿ 2024 ಉದ್ಘಾಟನೆ: ಅಶಕ್ತರಿಗೆ ಸಹಾಯಾರ್ಥ ಕ್ರೀಡಾ ಕೂಟ

Date:

ಯುನೈಟೆಡ್ ಸೋಲ್ಸ್ ಉಡುಪಿ ಆಶ್ರಯದಲ್ಲಿ ಹಿರಿಯಡಕ ಗಾಂಧೀ ಮೈದಾನದಲ್ಲಿ 2 ದಿನಗಳ ಕಾಲ ಆಶಕ್ತರ ಸಹಾಯರ್ಥವಾಗಿ ನಡೆಯುವ ಸಮ್ಮಿಲನ ಟ್ರೋಫಿ 2024 ಶನಿವಾರ ದಿನಾಂಕ 28-12-2024 ಬೆಳಿಗ್ಗೆ 9 ಗಂಟೆಗೆ ಉದ್ಘಾಟನೆ ಗೊಂಡಿತು.
ಉದ್ಘಾಟನೆಯನ್ನು ಬೊಮ್ಮರಬೆಟ್ಟು ಗ್ರಾಮಪಂಚಾಯತ್ ಅಧ್ಯಕ್ಷರಾದ ಜಯಂತಿ ಶೆಟ್ಟಿ ನಡೆಸಿದ್ದು ಮುಖ್ಯ ಅತಿಥಿಗಳಾಗಿ ಚಂದ್ರಶೇಖರ್ ಪ್ರಾಜೆಕ್ಟ್ ಮ್ಯಾನೇಜರ್ NIPL ಭಾಗವಹಿಸಿದ್ದು ಯುವಕರ ಹುಮ್ಮಸ್ಸು ಮತ್ತು ಅಶಕ್ತರಿಗೆ ಜೊತೆಯಾಗಿ ನಿಲ್ಲುವ ಸಂಘಟನೆಯ ಕಾರ್ಯವನ್ನು ಶ್ಲಾಘಿಸಿದರು.

ಕಾರ್ಯಕ್ರಮದಲ್ಲಿ ಹಿರಿಯ ಚಲನ ಚಿತ್ರ ಕಲಾ ನಿರ್ದೇಶಕರು ಪ್ರತಿಬಿಂಬ ಕಲಾರಂಗ ಇದರ ಮುಖ್ಯಸ್ಥರಾದ ಶ್ರೀ ವರದರಾಜ ಕಾಮತ್ ಸ್ಥಳೀಯ ಉದ್ಯಮಿ ವಿಜೇತ್ ಕುಮಾರ್ ಬೆಳ್ಳರ್ಪಾಡಿ, ಜೈದೇವ್ ಎಂಟರ್ಪ್ರೈಸಸ್ ಮಾಲಕರು ಹಾಗೂ ಯುನೈಟೆಡ್ ಸೋಲ್ಸ್ ನಾ ಗೌರವಾಧ್ಯಕ್ಷರಾದ ಹರೀಶ್ ನಾಯಕ್, ಸಂಘಟನೆಯ ಅಧ್ಯಕ್ಷರಾದ ಸಂಪತ್ ಶೆಟ್ಟಿ, ಉಪಾಧ್ಯಕ್ಷರಾದ ಪ್ರಸಾದ್ ನಾಯಕ್, ಕಾರ್ಯದರ್ಶಿ ರಾಜೇಶ್ ಕುಲಾಲ್ ಉಪಸ್ಥಿತರಿದ್ದರು. ಪ್ರಮೋದ್ ನಾಯಕ್ ಸ್ವಾಗತಿಸಿ ಅಜಿತ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಭಾನುವಾರ ಸಂಜೆ ಸಮಾರೋಪ ಸಮಾರಂಭದಲ್ಲಿ ಸ್ಥಳೀಯ ಪೌರಕಾರ್ಮಿಕರು ಮತ್ತು ಸಮಾಜ ಸೇವಕರಿಗೆ ಸನ್ಮಾನ ಮತ್ತು ಅಶಕ್ತ ಕುಟುಂಬಕ್ಕೆ ಧನ ಸಹಾಯ ನಡೆಯಲಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ಮುಖೇಶ್ ಅಂಬಾನಿ

1957 ಏಪ್ರಿಲ್ 19 ರಂದು ಮುಕೇಶ್ ಅಂಬಾನಿಯವರು ಗುಜರಾತಿ ಇಂದು ಕುಟುಂಬದಲ್ಲಿ ಇರುವ ಅಂಬಾನಿ ಹಾಗೂ ಕೋಕಿಲಾ ಬೆನ್ ದಂಪತಿಗಳಿಗೆ ಜನಿಸಿದರು

ಕಲರ್ಸ್ ಕನ್ನಡದಲ್ಲಿ ಹೊಸ ಕೌಟುಂಬಿಕ ಧಾರಾವಾಹಿ ‘ಮುದ್ದು ಸೊಸೆ’

'ಮುದ್ದು ಸೊಸೆ' ಕಲರ್ಸ್ ಕನ್ನಡದಲ್ಲಿ ವಿದ್ಯಾಗೆ ವಿದ್ಯೆ ಬೇಕು, ಮನೆಯವರಿಗೆ ಮದುವೆ ಸ್ಕೂಲ್ ಬೆಂಚಿಂದ ಹಸೆಮಣೆ ಏರುವ ವಿದ್ಯಾಳ ಬದುಕಿನ ಕತೆ ಕಲರ್ಸ್ ಕನ್ನಡ ವಾಹಿನಿ ಸದಾ ಪ್ರೇಕ್ಷಕರ ಹೃದಯವನ್ನು ಮುಟ್ಟುವ, ಮನಮಿಡಿಯುವ ಧಾರಾವಾಹಿಗಳನ್ನು ನೀಡುವ ಮೂಲಕ ಜನಪ್ರಿಯವಾಗಿದೆ.

ಅಪರೂಪದ ನಾಯಿ ಖರೀದಿಗೆ 50 ಕೋಟಿ? ಬೆಂಗಳೂರು ಶ್ವಾನ ಪ್ರೇಮಿಯ ಮನೆಗೆ ಇಡಿ ದಾಳಿ!

ಬೆಂಗಳೂರು ಶ್ವಾನ ಪ್ರೇಮಿ ಎಸ್. ಸತೀಶ್ ತನ್ನಿಂದ 50 ಕೋಟಿ ರೂ. ಮೊತ್ತದಲ್ಲಿ ನಾಯಿ ಖರೀದನೆಯಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಮಾಡಿದ ಹೇಳಿಕೆ ಇದೀಗ ಇಡಿ (ಅನ್ವೇಷಣಾ ನಿರ್ದೇಶನಾಲಯ) ತನಿಖೆಗೆ ಕಾರಣವಾಗಿದೆ.

ಪ್ರೊಸೆಸ್ಡ್ ಆಹಾರದ ನಿಗೂಢ ನಂಟು: ಆರೋಗ್ಯಕ್ಕೆ ರುಚಿಯೇ ವಿಷವಾಗುತ್ತಿದೆ !

ಇತ್ತೀಚಿನ ದಿನಗಳಲ್ಲಿ ಪ್ಯಾಕ್ಟ್ ಫುಡ್ಸ್, ಇನ್‌ಸ್ಟಂಟ್ ಆಹಾರಗಳು, ಬೀದಿ ಬದಿಯ ಜಂಕ್‌ಫುಡ್ಸ್ ಮತ್ತು ಇತರ ಸಂಸ್ಕರಿಸಿದ ಆಹಾರಗಳ ಬಳಕೆಯು ಗಣನೀಯವಾಗಿ ಹೆಚ್ಚಾಗಿದೆ.