
ಉಡುಪಿ ಜಿಲ್ಲಾ ಬ್ರಾಹ್ಮಣ ಮಹಾಸಭಾ(ರಿ) ಇದರ ಅಧ್ಯಕ್ಷರಾದ ಸಂದೀಪ ಕುಮಾರ್ ಮಂಜ ಇವರನ್ನು ಬ್ರಾಹ್ಮಣ ಸಮುದಾಯಕ್ಕೆ ನಿಸ್ಪೃಹತೆಯಿಂದ ನಿರಂತರವಾಗಿ ಸಲ್ಲಿಸುತ್ತಿರುವ ಸೇವೆಯನ್ನು ಪರಿಗಣಿಸಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ(ರಿ) ರಾಜ್ಯ ಉಪಾಧ್ಯಕ್ಷರನ್ನಾಗಿ ಅಧ್ಯಕ್ಷರಾದ ಎಸ್ ರಘುನಾಥ್ ಇವರು ಆಯ್ಕೆ ಮಾಡಿರುತ್ತಾರೆ.
ಬ್ರಾಹ್ಮಣ ಸಮುದಾಯದ ಹಿತರಕ್ಷಣೆ ಮತ್ತು ಸಾಂಸ್ಕೃತಿಕ ಮೌಲ್ಯಗಳ ಸಂರಕ್ಷಣೆಗಾಗಿ ಅವರು ನಿರಂತರವಾಗಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿದ್ದಾರೆ ಎಂಬುದನ್ನು ಗಮನಿಸಿ ಈ ಹುದ್ದೆಗೆ ಆಯ್ಕೆ ಮಾಡಲಾಗಿದೆ.