ಬೈಲೂರಿನಲ್ಲಿ ಅಮ್ಮನ ನೆರವು ಟ್ರಸ್ಟನಿಂದ ವಿದ್ಯಾರ್ಥಿವೇತನ ವಿತರಣೆ

Date:

spot_img

ಅಕ್ಷರ ಕ್ರಾಂತಿಯಿಂದ ಸಮಾಜದ ಅಭಿವೃದ್ಧಿ – ವಿ.ಸುನೀಲ್ ಕುಮಾರ್

ಬೈಲೂರು : ಅಮ್ಮನ ನೆರವು ಟ್ರಸ್ಟ್(ರಿ) ಸಂಸ್ಥೆಯಿಂದ ಬೈಲೂರು ಮತ್ತು ಸುತ್ತಮುತ್ತಲ ಶಾಲೆಗಳ ಪ್ರತಿಭಾವಂತ ಪಿಯುಸಿ ಮತ್ತು ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸುವ ಕಾರ್ಯಕ್ರಮವು ಬೈಲೂರು ಜ್ಯೂನಿಯರ್ ಕಾಲೇಜಿನ ಸಭಾಂಗಣದಲ್ಲಿ ಜೂನ್ 26ರಂದು ನಡೆಯಿತು. ಕಾರ್ಕಳದ ಶಾಸಕರಾದ ವಿ ಸುನೀಲ್ ಕುಮಾರ್ ಅವರು ಅಧ್ಯಕ್ಷತೆ ವಹಿಸಿ ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು.

ಅವರು ಮಾತನಾಡಿ ಅಕ್ಷರ ಕಾಂತಿಯಿಂದ ಸಮಗ್ರ ಸಮಾಜದ ಅಭಿವೃದ್ಧಿ ಆಗುತ್ತದೆ. ಅಮ್ಮನ ನೆರವು ಟ್ರಸ್ಟ್ ಸರಕಾರಿ ಶಾಲೆಗಳಲ್ಲಿ ಸಾಧನೆ ಮಾಡಿದ ಮಕ್ಕಳಿಗೆ ದೊಡ್ಡ ಮೊತ್ತದ ವಿದ್ಯಾರ್ಥಿ ವೇತನವನ್ನು ನೀಡುವುದರ ಮೂಲಕ ಒಂದು ಉತ್ತಮ ಮೇಲ್ಪಂಕ್ತಿ ಹಾಕಿಕೊಟ್ಟಿದೆ ಎಂದರು. ಟ್ರಸ್ಟನ ಅಧ್ಯಕ್ಷ ಅವಿನಾಶ್ ಜಿ ಶೆಟ್ಟಿಯಂತಹ ಯುವಕರು ಈ ಟ್ರಸ್ಟ್ ಸ್ಥಾಪನೆ ಮಾಡಿದ್ದು ತಾಲೂಕಿನಾದ್ಯಂತ ನೂರಾರು ವಿದ್ಯಾರ್ಥಿಗಳಿಗೆ ಅಂದಾಜು 16 ಲಕ್ಷ ರೂ. ಮೊತ್ತದ ವಿದ್ಯಾರ್ಥಿ ವೇತನ ನೀಡುತ್ತಿರುವುದು ನಿಜಕ್ಕೂ ಶ್ಲಾಘನೀಯ ಎಂದವರು ಹೇಳಿದರು.

ತಾಲೂಕಿನ ಏಳು ಕೇಂದ್ರಗಳಲ್ಲಿ ಈ ವಿದ್ಯಾರ್ಥಿ ವೇತನ ವಿತರಣೆಯ ಕಾರ್ಯಕ್ರಮಗಳು ನಡೆಯಲಿದ್ದು ಅದರ ಮೊದಲ ಹಂತದ ಕಾರ್ಯಕ್ರಮವು ಬೈಲೂರು ಜೂನಿಯರ್ ಕಾಲೇಜಿನಲ್ಲಿ ನಡೆದಿದೆ. ಒಟ್ಟು 16 ಲಕ್ಷ ರೂ. ಮೊತ್ತದ ವಿದ್ಯಾರ್ಥಿವೇತನ ಈ ವರ್ಷ ವಿತರಣೆ ಆಗಲಿದೆ ಎಂದು ಟ್ರಸ್ಟ್ ಅಧ್ಯಕ್ಷ ಅವಿನಾಶ್ ಜಿ ಶೆಟ್ಟಿ ಅವರು ಹೇಳಿದರು.

ಬೈಲೂರಿನಲ್ಲಿ 13 ಪಿಯುಸಿ ವಿದ್ಯಾರ್ಥಿಗಳಿಗೆ ತಲಾ 10,000 ರೂ, 32 ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ತಲಾ 5,000 ರೂ. ಮತ್ತು ಒಂದು ಶಾಲೆಗೆ 10,000 ನೆರವು ಈ ಕಾರ್ಯಕ್ರಮದಲ್ಲಿ ಹಸ್ತಾಂತರ ಮಾಡಲಾಯಿತು.

ಕಾರ್ಕಳ ಜ್ಞಾನಸುಧಾ ವಿದ್ಯಾಸಂಸ್ಥೆಗಳ ಸ್ಥಾಪಕರಾದ ಡಾ. ಸುಧಾಕರ್ ಶೆಟ್ಟಿಯವರು ಅಮ್ಮನ ನೆರವು ಟ್ರಸ್ಟಿನಿಂದ ಪಡೆದ ವಿದ್ಯಾರ್ಥಿವೇತನಗಳ ಹಿಂದೆ ಉದಾತ್ತವಾದ ಆಶಯವಿದೆ. ಆದ್ದರಿಂದ ಅದನ್ನು ಸದುಪಯೋಗ ಪಡಿಸುವಂತೆ ವಿದ್ಯಾರ್ಥಿಗಳಿಗೆ ಸಲಹೆ ನೀಡಿ ಶುಭ ಹಾರೈಸಿದರು.

ಉದ್ಯಮಿಗಳಾದ ಚಂದ್ರಶೇಖರ್ ಶೆಟ್ಟಿ (ದಾಮಣ್ಣ), ಬೈಲೂರು ಕೃಷ್ಣರಾಜ್ ಹೆಗ್ಡೆ, ಸುಮಿತ್ ಶೆಟ್ಟಿ ಬೈಲೂರು, ಲಯನ್ಸ್ ಅಧ್ಯಕ್ಷ ಗುತ್ತುಮನೆ ಪ್ರಶಾಂತ್ ಶೆಟ್ಟಿ, ಕ್ಲಾಸ್ ಒನ್ ಗುತ್ತಿಗೆದಾರರಾದ ಪ್ರಸನ್ನ ಶೆಟ್ಟಿ ಬೈಲೂರು, ಉದ್ಯಮಿ ಜಯಪ್ರಕಾಶ್ ಶೆಟ್ಟಿ ಪೂನಾ, ಶಾಲಾ ಎಸ್ಡಿಎಂಸಿ ಅಧ್ಯಕ್ಷ ಸ್ಟೀವನ್ ಡಿಸೋಜಾ ಮುಂತಾದವರು ಕಾರ್ಯಕ್ರಮದ ಅತಿಥಿಗಳಾಗಿದ್ದು ಶುಭ ಹಾರೈಸಿದರು.

ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸೀತಾರಾಮ್, ಪ್ರೌಢಶಾಲೆಯ ಮುಖ್ಯಶಿಕ್ಷಕರಾದ ನಾಗರಾಜ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಶಿಕ್ಷಕ ರಾಜೇಂದ್ರ ಭಟ್ ಕೆ. ಎಲ್ಲರನ್ನೂ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಣೆ ಮಾಡಿದರು. ನಿವೃತ್ತ ಶಿಕ್ಷಕ ವಸಂತ ಎಂ ಅವರು ಧನ್ಯವಾದ ನೀಡಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಪ್ರಜ್ವಲ್ ರೇವಣ್ಣಗೆ ಜೈಲಿನಲ್ಲಿ ಆಪ್ತರ ಭೇಟಿಗೆ ಕೋರ್ಟ್ ಸಮ್ಮತಿ

ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿದ ನ್ಯಾಯಾಲಯ ಜೈಲಿನಲ್ಲಿ ಆಪ್ತರ ಭೇಟಿಗೆ ಅನುಮತಿ ನೀಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಚಿಕ್ಕಮಗಳೂರು: ಪೂಜಾರಿ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ, ಪ್ರಕರಣ ದಾಖಲು

ಚಿಕ್ಕಮಗಳೂರಿನಲ್ಲಿ ಪೂಜಾರಿ ವಿರುದ್ಧ ಮಹಿಳೆ ಲೈಂಗಿಕ ದೌರ್ಜನ್ಯ ಆರೋಪಿಸಿ ದೂರು ನೀಡಿದ್ದಾರೆ. ಆರೋಪಿ ಪತ್ತೆಗೆ ಪೊಲೀಸ್ ಶೋಧ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬೆಂಗಳೂರು: ಗರ್ಲ್‌ಫ್ರೆಂಡ್ ಮಾತನಾಡದ ನೋವಿಗೆ 41 ವರ್ಷದ ವ್ಯಕ್ತಿ ಆತ್ಮಹತ್ಯೆ

ಬೆಂಗಳೂರುದಲ್ಲಿ ಗರ್ಲ್‌ಫ್ರೆಂಡ್ ಮಾತನಾಡುತ್ತಿಲ್ಲ ಎಂಬ ಬೇಸರದಲ್ಲಿ 41 ವರ್ಷದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕೋವಿಡ್ ಆತಂಕ ಬೇಡ, ಎಚ್ಚರವಿರಲಿ: ಆರೋಗ್ಯ ಸಚಿವ ಯು.ಟಿ. ಖಾದರ್

ನೆರೆ ರಾಜ್ಯದಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಜನತೆಗೆ ಆರೋಗ್ಯ ಸಚಿವರು ಪ್ರಮುಖ ಎಚ್ಚರಿಕೆ ನೀಡಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.