spot_img

ಬೆಂಗಳೂರು ನೂತನ ಪೊಲೀಸ್ ಕಮಿಷನರ್ ಆಗಿ ಸೀಮಂತ್ ಕುಮಾರ್ ಸಿಂಗ್ ನೇಮಕ

Date:

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತದ ಘಟನೆ ನಂತರ ರಾಜ್ಯ ಸರ್ಕಾರ ತಕ್ಷಣದ ಕ್ರಮ ಕೈಗೊಂಡಿದ್ದು, ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ್ ಅವರನ್ನು ಅಮಾನತು ಮಾಡಿ, ಹಿರಿಯ ಐಪಿಎಸ್ ಅಧಿಕಾರಿ ಸೀಮಂತ್ ಕುಮಾರ್ ಸಿಂಗ್ ಅವರನ್ನು ನೂತನ ಕಮಿಷನರ್ ಆಗಿ ನೇಮಕ ಮಾಡಿದೆ.

ಜಾರ್ಖಂಡ್ ಮೂಲದ 1996ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿರುವ ಸೀಮಂತ್ ಕುಮಾರ್ ಸಿಂಗ್, ಮಂಗಳೂರು ನಗರಕ್ಕೆ ಕಮಿಷನರೇಟ್ ಸ್ಥಾಪನೆಯಾದಾಗ ಮೊದಲ ಪೊಲೀಸ್ ಕಮಿಷನರ್ ಆಗಿದ್ದರು. 2000 ರಿಂದ 2004ರ ವರೆಗೆ ದಕ್ಷಿಣ ಕನ್ನಡದ ಎಸ್‌ಪಿಯಾಗಿ ಸೇವೆ ಸಲ್ಲಿಸಿ, ನಂತರ 2014ರಲ್ಲಿ ಪಶ್ಚಿಮ ವಲಯದ ಐಜಿಪಿಯಾಗಿಯೂ ಕಾರ್ಯನಿರ್ವಹಿಸಿದ್ದಾರೆ.

ಇದಕ್ಕೂ ಹಿಂದೆ ಅವರು ಬೆಂಗಳೂರು ಕೇಂದ್ರ ವಿಭಾಗದ ಐಜಿಪಿ, ನಕ್ಸಲ್ ನಿಗ್ರಹ ಪಡೆಯ ಕಮಾಂಡರ್ (ANF) ಹಾಗೂ ಡಿಐಜಿ ಹುದ್ದೆಗಳಲ್ಲಿ ಕೆಲಸ ಮಾಡಿದ್ದು, ಇತ್ತೀಚೆಗೆ ಬೆಂಗಳೂರಿನ ಮಹಾನಗರ ಕಾರ್ಯಪಡೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಐಪಿಎಲ್ ವಿಜಯೋತ್ಸವದ ವೇಳೆ ನಡೆದ ಅವ್ಯವಸ್ಥೆಯಿಂದಾಗಿ ಜನಜೀವನದ ಮೇಲೆ ಪರಿಣಾಮ ಬೀರಿದ ಸಂದರ್ಭದಲ್ಲಿಯೇ ಈ ಬದಲಾವಣೆ ನಡೆದಿದೆ. ರಾಜ್ಯ ಸರ್ಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದು, ಪೊಲೀಸ್ ಇಲಾಖೆಯಲ್ಲಿ ಹೆಚ್ಚಿನ ಜವಾಬ್ದಾರಿ ಮತ್ತು ಶಿಸ್ತಿಗೆ ಒತ್ತಡ ನೀಡಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಹಸಿರು ದ್ರಾಕ್ಷಿಯ 6 ಮಹತ್ವದ ಆರೋಗ್ಯ ಲಾಭಗಳು!

ಸಿಹಿ ಮತ್ತು ಸ್ವಲ್ಪ ಹುಳಿ ರುಚಿಯೊಂದಿಗೆ, ದ್ರಾಕ್ಷಿ ಹಣ್ಣು ಆರೋಗ್ಯಕ್ಕೆ ಅತ್ಯಂತ ಲಾಭದಾಯಕವೆಂಬುದು ತಜ್ಞರ ಅಭಿಪ್ರಾಯ. ಪೌಷ್ಟಿಕತೆಯಿಂದ ಸಮೃದ್ಧವಾಗಿರುವ ಈ ಹಣ್ಣು ದೇಹದ ವಿವಿಧ ಅಂಗಾಂಗಗಳಿಗೆ ಬಲ ನೀಡುತ್ತಿದ್ದು, ಹಲವಾರು ಆರೋಗ್ಯ ಸಮಸ್ಯೆಗಳನ್ನು ತಡೆಯುವಲ್ಲಿ ಸಹಕಾರಿ.

ಆರ್‌ಸಿಬಿ ಕಪ್ ಗೆದ್ದ ಖುಷಿಯಲ್ಲಿ ಟ್ವೀಟ್‌ ಮಾಡಿದ ವಿಜಯ್ ಮಲ್ಯಗೆ ಎಸ್‌ಬಿಐ ತಿರುಗುಬಾಣ

ಆರ್‌ಸಿಬಿ ಕಪ್ ಗೆದ್ದ ಖುಷಿಯಲ್ಲಿ ಟ್ವೀಟ್‌ ಮಾಡಿದ ವಿಜಯ್ ಮಲ್ಯಗೆ ಎಸ್‌ಬಿಐ ನಗುಮುಖದ ಇಮೋಜಿಯೊಂದಿಗೆ ಪ್ರತಿಕ್ರಿಯಿಸಿದೆ.

ಬೆವರಿಲ್ಲದೇ ಲಕ್ಷಾಂತರ ರೂಪಾಯಿ ಗಳಿಕೆ: ಮುಂಬೈನ ಆಟೋ ಚಾಲಕನ ಸ್ಮಾರ್ಟ್ ಐಡಿಯಾ

ಹೆಚ್ಚುವರಿ ಶ್ರಮವಿಲ್ಲದೇ ದುಡ್ಡು ಗಳಿಸುವವರ ಕಥೆಗಳು ಅಪರೂಪ, ಆದರೆ ಮುಂಬೈನ ಆಟೋ ಚಾಲಕನೊಬ್ಬ ತನ್ನ ಚತುರತನದಿಂದ ದಿನಕ್ಕೆ ಸಾವಿರಾರು ರೂ. ಗಳಿಸುತ್ತಿರುವ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಗ್ರಾಮ ಪಂಚಾಯತ್ ವ್ಯಾಪ್ತಿಗೂ ರೆರಾ ಕಡ್ಡಾಯ

ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿಯೂ ಬಡಾವಣೆ ಅನುಮೋದನೆಗೆ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರ (ರೆರಾ) ನೋಂದಣಿಯನ್ನು ಕಡ್ಡಾಯಗೊಳಿಸಿ ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.