spot_img

ಸ್ವಯಂಘೋಷಿತ ದೇವಮಾನವ ನಿತ್ಯಾನಂದ ನಿಧನ !ಸಹೋದರಿಯ ಮಗ ಸುಂದರೇಶ್ವರನ್ ವಿಡಿಯೋ ಮೂಲಕ ಮಾಹಿತಿ

Date:

ಭಾರತದಲ್ಲಿ ಹಲವಾರು ವಿವಾದಗಳನ್ನು ಎದುರಿಸಿದ ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಅವರ ಸಾವಿನ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಈ ಸುದ್ದಿಯನ್ನು ನಿತ್ಯಾನಂದನ ಸಹೋದರಿಯ ಮಗ ಸುಂದರೇಶ್ವರನ್ ವಿಡಿಯೋ ಮೂಲಕ ಬಹಿರಂಗಪಡಿಸಿದ್ದಾರೆ.

ವಿಡಿಯೋದಲ್ಲಿ ಸುಂದರೇಶ್ವರನ್, ನಿತ್ಯಾನಂದ ಅವರು ತಮ್ಮ ಜೀವನದುದ್ದಕ್ಕೂ ಹಿಂದೂ ಧರ್ಮದ ಪ್ರಚಾರಕ್ಕಾಗಿ ಶ್ರಮಿಸಿದ್ದಾರೆ ಎಂದು ಸ್ಮರಿಸಿಕೊಂಡು, ಇಂದು ಅವರು ನಮ್ಮನ್ನು ಅಗಲಿದಿದ್ದಾರೆ ಎಂದು ಹೇಳಿದರು. ಆದರೆ, ನಿತ್ಯಾನಂದ ಅವರ ಆಶ್ರಮವು ಸಾವಿನ ಕುರಿತಂತೆ ಯಾವುದೇ ಅಧಿಕೃತ ಹೇಳಿಕೆಯನ್ನು ನೀಡಿಲ್ಲ.

ಇದಕ್ಕಿಂತ ಮುಂಚೆ, ನಿತ್ಯಾನಂದ ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಬಳಲುತ್ತಿದ್ದರು ಮತ್ತು ಕೋಮಾದಲ್ಲಿದ್ದುದಾಗಿ ವರದಿಗಳು ಬಂದಿದ್ದವು. ಆದರೆ, ಅವರು ಈ ವದಂತಿಗಳಿಗೆ ಪ್ರತಿಕ್ರಿಯಿಸುವುದಾಗಿ ವೀಡಿಯೊಗಳಲ್ಲಿ ತಮ್ಮ ಸಂದೇಶಗಳನ್ನು ಹಂಚಿಕೊಂಡಿದ್ದಾರೆ.

ಈಗ ನಿತ್ಯಾನಂದ ಅವರ ಸಾವಿನ ಸುದ್ದಿ ಮತ್ತೆ ಹರಿದಾಡುತ್ತಿದ್ದರೂ, ಈ ಮಾಹಿತಿಯ ಸತ್ಯಾಸತ್ಯತೆ ಇನ್ನೂ ಸ್ಪಷ್ಟವಾಗಿಲ್ಲ. ಕೆಲವರು, ನಿತ್ಯಾನಂದದ ವಿರುದ್ಧ ಹಲವು ಮೊಕದ್ದಮೆಗಳಿದ್ದು, ಇದರಿಂದ ತಪ್ಪಿಸಿಕೊಳ್ಳಲು ಅವರು ಸುಳ್ಳು ಮಾಹಿತಿಯನ್ನು ಹರಡಿರಬಹುದೆಂದು ಸಂಶಯ ವ್ಯಕ್ತಪಡಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬೆಂಗಳೂರು ನೂತನ ಪೊಲೀಸ್ ಕಮಿಷನರ್ ಆಗಿ ಸೀಮಂತ್ ಕುಮಾರ್ ಸಿಂಗ್ ನೇಮಕ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತದ ಘಟನೆ ನಂತರ ರಾಜ್ಯ ಸರ್ಕಾರ ತಕ್ಷಣದ ಕ್ರಮ ಕೈಗೊಂಡಿದ್ದು, ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ್ ಅವರನ್ನು ಅಮಾನತು ಮಾಡಿ, ಹಿರಿಯ ಐಪಿಎಸ್ ಅಧಿಕಾರಿ ಸೀಮಂತ್ ಕುಮಾರ್ ಸಿಂಗ್ ಅವರನ್ನು ನೂತನ ಕಮಿಷನರ್ ಆಗಿ ನೇಮಕ ಮಾಡಿದೆ.

ಜೋಳಿಗೆ ಕಟ್ಟಿದ್ದ ಸೀರೆ ಕುತ್ತಿಗೆಗೆ ಸುತ್ತಿಕೊಂಡು ಶಿಶು ಸಾವನ್ನಪ್ಪಿದ ದಾರುಣ ಘಟನೆ

ಉಡುಪಿ ತಾಲೂಕಿನ ಪುತ್ತೂರು ಗ್ರಾಮದ ನಿಟ್ಟೂರಿನಲ್ಲಿ ಜೋಳಿಗೆ ಕಟ್ಟಿದ್ದ ಸೀರೆ ಕುತ್ತಿಗೆಗೆ ಸುತ್ತಿಕೊಂಡು ಒಂದು ವರ್ಷದ ಹೆಣ್ಣು ಮಗು ದುರ್ಮರಣಕ್ಕೀಡಾಗಿರುವ ದಾರುಣ ಘಟನೆ ನಡೆದಿದೆ.

ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತ ದುರಂತ!”ನಾನು ಎಂದಿಗೂ ರೋಡ್ ಶೋಗಳ ಬೆಂಬಲಿಗನಲ್ಲ”:ಗೌತಮ್ ಗಂಭೀರ್

ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್ ಸಿ ಬಿ ವಿಜಯೋತ್ಸವದಲ್ಲಿ ಅಪಾರ ಅಭಿಮಾನಿಗಳು ಭಾಗವಹಿಸಿದ ಪರಿಣಾಮ ಭೀಕರ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದ್ದು, 11 ಮಂದಿ ದುರಂತವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆ ದೇಶದಾದ್ಯಂತ ಆಘಾತ ಉಂಟುಮಾಡಿದ್ದು, ಟೀಂ ಇಂಡಿಯಾ ಮುಖ್ಯ ಕೋಚ್ ಗೌತಮ್ ಗಂಭೀರ್ ಈ ಕುರಿತು ತೀವ್ರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ದಿನ ವಿಶೇಷ – ವಿಶ್ವ ಕೀಟ ಸಚೇತನ ದಿನ

2017ರಲ್ಲಿ ಚೀನಾದ ಬೀಜಿಂಗ್ನಲ್ಲಿ ನಡೆದ ಸಮ್ಮೇಳನದಲ್ಲಿ ಈ ದಿನವನ್ನು ಪ್ರಾರಂಭಿಸಲಾಯಿತು.