spot_img

CISF ಮಹಿಳಾ ಅಧಿಕಾರಿ ವಿರುದ್ಧ ಲೈಂಗಿಕ ವಂಚನೆ ಆರೋಪ: ಮಂಗಳೂರಿನಲ್ಲಿ ವ್ಯಕ್ತಿಯ ಆತ್ಮಹತ್ಯೆ!

Date:

ಮಂಗಳೂರು, ಮಾರ್ಚ್. 3: ಉತ್ತರ ಪ್ರದೇಶದ ವ್ಯಕ್ತಿಯೋರ್ವ ಸಿಐಎಸ್‌ಎಫ್ ಮಹಿಳಾ ಅಧಿಕಾರಿಯ ವಿರುದ್ಧ ಲೈಂಗಿಕ ವಂಚನೆ ಮತ್ತು ಹಣಕಾಸು ಮೋಸದ ಆರೋಪ ಹೊರಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನ ಲಾಡ್ಜ್‌ನಲ್ಲಿ ನಡೆದಿದೆ.

ಮೃತರನ್ನು ಉತ್ತರ ಪ್ರದೇಶದ ಗಾಜಿಪುರದ ಅಭಿಷೇಕ್ ಸಿಂಗ್ (40) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ಮೊದಲು ಇನ್‌ಸ್ಟಾಗ್ರಾಂನಲ್ಲಿ ವಿಡಿಯೋ ಪೋಸ್ಟ್ ಮಾಡಿರುವ ಅವರು, CISF ಸಹಾಯಕ ಕಮಾಂಡೆಂಟ್ ಮೋನಿಕಾ ಸಿಹಾಗ್ ಮದುವೆಯಾಗುವ ಭರವಸೆ ನೀಡಿ ದೈಹಿಕ ಸಂಬಂಧ ಬೆಳೆಸಿ ಮೋಸ ಮಾಡಿದ್ದಾಳೆ ಎಂದು ಆರೋಪಿಸಿದ್ದಾರೆ.

ಪ್ರೇಮದ ಹೆಸರಿನಲ್ಲಿ ವಂಚನೆ
ಚೆನ್ನೈನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಅಭಿಷೇಕ್, ವಸ್ತುಪ್ರದರ್ಶನಕ್ಕಾಗಿ ಮಂಗಳೂರಿಗೆ ಬಂದಿದ್ದರು. ಆದರೆ, ಮಾರ್ಚ್.3ರಂದು ನಗರದ ಲಾಡ್ಜ್ ಒಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ವಿಡಿಯೋ ಪ್ರಕಾರ, ಮೋನಿಕಾ ಈಗಾಗಲೇ ವಿವಾಹಿತೆಯಾಗಿದ್ದು, ಆ ಮಾಹಿತಿಯನ್ನು ಮುಚ್ಚಿಟ್ಟು ದೈಹಿಕ ಮತ್ತು ಆರ್ಥಿಕ ಲಾಭ ಪಡೆದು ತಮ್ಮನ್ನು ವಂಚಿಸಿದ್ದಾಳೆ ಎಂದು ಆರೋಪಿಸಲಾಗಿದೆ.

15 ಲಕ್ಷ ರೂ. ಹಣ, ಚಿನ್ನ ವಂಚನೆ ಆರೋಪ
ಮೃತನ ಸಹೋದರ ಈ ಸಂಬಂಧ ಪಾಂಡೇಶ್ವರ ಪೊಲೀಸ್ ಠಾಣೆಗೆ ದೂರು ನೀಡಿದ್ದು, 15 ಲಕ್ಷ ರೂಪಾಯಿ ಮತ್ತು 8 ಲಕ್ಷ ಮೌಲ್ಯದ ಚಿನ್ನ ವಂಚಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ CISF ಅಧಿಕಾರಿ ಮೋನಿಕಾ ಸಿಹಾಗ್‌ಗೆ ನೋಟೀಸ್ ಜಾರಿಗೊಳಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ಮಹಾರಾಜ ಕರ್ಣಿ ಸಿಂಗ್

ಬಿಕನೆರ್ ನ ರಾಜ ವಂಶಸ್ಥ ಮಹಾರಾಜ ಸಾಧುಲ್ ಸಿಂಗ್ ದಂಪತಿಗಳಿಗೆ 1924 ಎಪ್ರಿಲ್ 21ರಂದು ಕರ್ನಿ ಸಿಂಗ್ ಜನಿಸಿದರು.

ಬೇಸಿಗೆಯಲ್ಲಿ ವಾಲ್ನಟ್ ಸೇವಿಸುವುದರ ಪ್ರಯೋಜನಗಳು!

ಬೇಸಿಗೆಯಲ್ಲಿ ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳಲು ನೀರಿನಾಂಶದಿಂದ ಕೂಡಿದ ಹಣ್ಣುಗಳು ಮತ್ತು ತರಕಾರಿಗಳಷ್ಟೇ ಪ್ರಾಮುಖ್ಯತೆ ಡ್ರೈ ಫ್ರೂಟ್ಸ್‌ಗೂ ಇದೆ

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಜನಿವಾರ ನಿಷೇಧ: ವಿದ್ಯಾರ್ಥಿಗಳಿಗೆ ಅವಮಾನ, ನ್ಯಾಯಾಲಯದ ಮುಂದೆ ಪ್ರಕರಣ

ಸಿಇಟಿ ಪರೀಕ್ಷಾ ಕೇಂದ್ರಗಳಲ್ಲಿ ಯಜ್ಞೋಪವೀತ (ಜನಿವಾರ) ಧರಿಸಿದ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅನುಮತಿ ನಿರಾಕರಿಸಿದ ಪ್ರಕರಣಗಳು ರಾಜ್ಯವ್ಯಾಪಿ ವಿವಾದವಾಗಿ ಪರಿಣಮಿಸಿದೆ.

ಸುಪ್ರೀಂಕೋರ್ಟ್ ಕಾನೂನು ರಚಿಸಿದರೆ ಸಂಸತ್ತಿನ ಅಗತ್ಯವೇನು? – ಬಿಜೆಪಿ ಸಂಸದ ನಿಶಿಕಾಂತ್ ದುಬೆಯ ವಿವಾದಾತ್ಮಕ ಹೇಳಿಕೆ

ಭಾರತೀಯ ಜನತಾ ಪಕ್ಷದ (ಬಿಜೆಪಿ) ಸಂಸದ ನಿಶಿಕಾಂತ್ ದುಬೆ ಅವರು ಸುಪ್ರೀಂಕೋರ್ಟ್ ಕಾನೂನು ರಚನೆಯಲ್ಲಿ ಹೆಚ್ಚು ಹಸ್ತಕ್ಷೇಪ ಮಾಡಿದರೆ ಸಂಸತ್ತನ್ನು ಮುಚ್ಚಿಬಿಡಬೇಕು ಎಂದು ವಾದಿಸಿದ್ದಾರೆ