spot_img

CISF ಮಹಿಳಾ ಅಧಿಕಾರಿ ವಿರುದ್ಧ ಲೈಂಗಿಕ ವಂಚನೆ ಆರೋಪ: ಮಂಗಳೂರಿನಲ್ಲಿ ವ್ಯಕ್ತಿಯ ಆತ್ಮಹತ್ಯೆ!

Date:

spot_img

ಮಂಗಳೂರು, ಮಾರ್ಚ್. 3: ಉತ್ತರ ಪ್ರದೇಶದ ವ್ಯಕ್ತಿಯೋರ್ವ ಸಿಐಎಸ್‌ಎಫ್ ಮಹಿಳಾ ಅಧಿಕಾರಿಯ ವಿರುದ್ಧ ಲೈಂಗಿಕ ವಂಚನೆ ಮತ್ತು ಹಣಕಾಸು ಮೋಸದ ಆರೋಪ ಹೊರಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನ ಲಾಡ್ಜ್‌ನಲ್ಲಿ ನಡೆದಿದೆ.

ಮೃತರನ್ನು ಉತ್ತರ ಪ್ರದೇಶದ ಗಾಜಿಪುರದ ಅಭಿಷೇಕ್ ಸಿಂಗ್ (40) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ಮೊದಲು ಇನ್‌ಸ್ಟಾಗ್ರಾಂನಲ್ಲಿ ವಿಡಿಯೋ ಪೋಸ್ಟ್ ಮಾಡಿರುವ ಅವರು, CISF ಸಹಾಯಕ ಕಮಾಂಡೆಂಟ್ ಮೋನಿಕಾ ಸಿಹಾಗ್ ಮದುವೆಯಾಗುವ ಭರವಸೆ ನೀಡಿ ದೈಹಿಕ ಸಂಬಂಧ ಬೆಳೆಸಿ ಮೋಸ ಮಾಡಿದ್ದಾಳೆ ಎಂದು ಆರೋಪಿಸಿದ್ದಾರೆ.

ಪ್ರೇಮದ ಹೆಸರಿನಲ್ಲಿ ವಂಚನೆ
ಚೆನ್ನೈನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಅಭಿಷೇಕ್, ವಸ್ತುಪ್ರದರ್ಶನಕ್ಕಾಗಿ ಮಂಗಳೂರಿಗೆ ಬಂದಿದ್ದರು. ಆದರೆ, ಮಾರ್ಚ್.3ರಂದು ನಗರದ ಲಾಡ್ಜ್ ಒಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ವಿಡಿಯೋ ಪ್ರಕಾರ, ಮೋನಿಕಾ ಈಗಾಗಲೇ ವಿವಾಹಿತೆಯಾಗಿದ್ದು, ಆ ಮಾಹಿತಿಯನ್ನು ಮುಚ್ಚಿಟ್ಟು ದೈಹಿಕ ಮತ್ತು ಆರ್ಥಿಕ ಲಾಭ ಪಡೆದು ತಮ್ಮನ್ನು ವಂಚಿಸಿದ್ದಾಳೆ ಎಂದು ಆರೋಪಿಸಲಾಗಿದೆ.

15 ಲಕ್ಷ ರೂ. ಹಣ, ಚಿನ್ನ ವಂಚನೆ ಆರೋಪ
ಮೃತನ ಸಹೋದರ ಈ ಸಂಬಂಧ ಪಾಂಡೇಶ್ವರ ಪೊಲೀಸ್ ಠಾಣೆಗೆ ದೂರು ನೀಡಿದ್ದು, 15 ಲಕ್ಷ ರೂಪಾಯಿ ಮತ್ತು 8 ಲಕ್ಷ ಮೌಲ್ಯದ ಚಿನ್ನ ವಂಚಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ CISF ಅಧಿಕಾರಿ ಮೋನಿಕಾ ಸಿಹಾಗ್‌ಗೆ ನೋಟೀಸ್ ಜಾರಿಗೊಳಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಉಪರಾಷ್ಟ್ರಪತಿ ಸ್ಥಾನಕ್ಕೆ ಕರ್ನಾಟಕ ಮೂಲದ ನ್ಯಾಯಮೂರ್ತಿ ಅಬ್ದುಲ್ ನಝೀರ್ ಹೆಸರು ಮುಂಚೂಣಿಯಲ್ಲಿ

ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ತಮ್ಮ ಸ್ಥಾನಕ್ಕೆ ಅನಿರೀಕ್ಷಿತವಾಗಿ ರಾಜೀನಾಮೆ ಸಲ್ಲಿಸಿದ ಬೆನ್ನಲ್ಲೇ, ಈ ಮಹೋನ್ನತ ಹುದ್ದೆಗೆ ಕರ್ನಾಟಕದ ಹೆಮ್ಮೆಯ ಪುತ್ರ, ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಸ್. ಅಬ್ದುಲ್ ನಝೀರ್ ಅವರ ಹೆಸರು ಪ್ರಬಲವಾಗಿ ಕೇಳಿಬರುತ್ತಿದೆ.

ಧರ್ಮಸ್ಥಳ ದುರಂತಗಳ ಆಳಕ್ಕೆ ಇಳಿಯಲು ಸಹಾಯವಾಣಿ ಸ್ಥಾಪನೆಗೆ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಸಾಮೂಹಿಕ ಶವ ವಿಲೇವಾರಿ ಪ್ರಕರಣವು ಇದೀಗ ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಬೋಳದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಅಡ್ಡಿಪಡಿಸಿದ ಬಿಜೆಪಿ ಗ್ರಾ. ಪಂ ಸದಸ್ಯರ ವಿರುದ್ದ ಕಾಂಗ್ರೆಸ್ ಪ್ರತಿಭಟನೆ

ಬಿಜೆಪಿ ಪಂಚಾಯತ್ ಸದಸ್ಯರ ದುರ್ನಡತೆಯ ವಿರುದ್ದ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಹಾಗೂ ಬೋಳ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಜಂಟಿ ಆಶ್ರಯದಲ್ಲಿ ಬೋಳ ಗ್ರಾಮ ಪಂಚಾಯತ್ ಕಚೇರಿ ಮುಂಬಾಗದಲ್ಲಿ ಪ್ರತಿಭಟನಾ ಸಭೆ ನಡೆಯಿತು.

ಎಂ.ಆರ್.ಐ. ಯಂತ್ರದಿಂದ ಲೋಹದ ಆಭರಣ ಧರಿಸಿದ ವ್ಯಕ್ತಿಯ ಸಾವು!

ವೈದ್ಯಕೀಯ ಜಗತ್ತಿನಲ್ಲಿ ಅಪರೂಪದ ಆದರೆ ಅತ್ಯಂತ ಗಂಭೀರವಾದ ದುರಂತವೊಂದು ಅಮೆರಿಕದ ನ್ಯೂಯಾರ್ಕ್‌ನಲ್ಲಿ ಸಂಭವಿಸಿದ್ದು, ಮ್ಯಾಗ್ನೆಟಿಕ್ ರೆಸೋನೆನ್ಸ್ ಇಮೇಜಿಂಗ್ (ಎಂ.ಆರ್.ಐ.) ಸ್ಕ್ಯಾನ್ ಯಂತ್ರದ ಪ್ರಬಲ ಕಾಂತೀಯ ಕ್ಷೇತ್ರಕ್ಕೆ ಸೆಳೆದುಕೊಂಡು ವ್ಯಕ್ತಿಯೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ