ಹೈಕೋರ್ಟ್ ಆದೇಶ ಉಲ್ಲಂಘನೆ: ಶರಣ್ ಪಂಪ್‌ವೆಲ್‌ಗೆ ₹2 ಲಕ್ಷ ದಂಡ ವಿಧಿಸಿದ ನ್ಯಾಯಾಲಯ

Date:

spot_img

ಚಿತ್ರದುರ್ಗ: ಹಿಂದೂ ಮಹಾಗಣಪತಿ ಶೋಭಾಯಾತ್ರೆಯ ಸಂದರ್ಭದಲ್ಲಿ ಹೈಕೋರ್ಟ್ ವಿಧಿಸಿದ್ದ ಷರತ್ತುಗಳನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ, ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಸಹ ಕಾರ್ಯದರ್ಶಿ ಶರಣ್ ಪಂಪ್‌ವೆಲ್‌ಗೆ ಹೈಕೋರ್ಟ್ ₹2 ಲಕ್ಷ ದಂಡ ವಿಧಿಸಿ ಆದೇಶ ಹೊರಡಿಸಿದೆ.

ದಂಡದ ಮೊತ್ತದಲ್ಲಿ, ರಾಜ್ಯ ಲೀಗಲ್ ಸರ್ವೀಸ್ ಅಥಾರಿಟಿಗೆ ₹1 ಲಕ್ಷ ಮತ್ತು ಪೊಲೀಸ್ ಕ್ಷೇಮಾಭಿವೃದ್ಧಿ ನಿಧಿಗೆ ₹1 ಲಕ್ಷ ನೀಡುವಂತೆ ಕೋರ್ಟ್ ಬುಧವಾರ ಆದೇಶಿಸಿದೆ.

ನಿರ್ಬಂಧ ತೆರವು ಮತ್ತು ಷರತ್ತುಗಳ ಉಲ್ಲಂಘನೆ

ಇತ್ತೀಚೆಗೆ ಚಿತ್ರದುರ್ಗದಲ್ಲಿ ನಡೆದ ಹಿಂದೂ ಮಹಾಗಣಪತಿ ಶೋಭಾಯಾತ್ರೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಶರಣ್ ಪಂಪ್‌ವೆಲ್‌ಗೆ ಜಿಲ್ಲೆಗೆ ಪ್ರವೇಶಿಸದಂತೆ ನಿರ್ಬಂಧ ವಿಧಿಸಿತ್ತು. ಈ ನಿರ್ಬಂಧವನ್ನು ಪ್ರಶ್ನಿಸಿ ಪಂಪ್‌ವೆಲ್ ಹೈಕೋರ್ಟ್ ಮೊರೆ ಹೋಗಿದ್ದರು. ಹೈಕೋರ್ಟ್ ಕೆಲ ಕಠಿಣ ಷರತ್ತುಗಳನ್ನು ವಿಧಿಸಿ, ಜಿಲ್ಲಾಡಳಿತದ ನಿರ್ಬಂಧವನ್ನು ತೆರವುಗೊಳಿಸಿತ್ತು.

ಸೆಪ್ಟೆಂಬರ್ 13ರಂದು ನಡೆದ ಮಹಾಗಣಪತಿ ಶೋಭಾಯಾತ್ರೆ ವೇಳೆ, ಕೋರ್ಟ್ ಶರಣ್ ಪಂಪ್‌ವೆಲ್‌ಗೆ ಕೇವಲ ಬೆಳಿಗ್ಗೆ 10:30 ರಿಂದ 12:30ರ ವರೆಗೆ ಮಾತ್ರ ದರ್ಶನದಲ್ಲಿ ಭಾಗವಹಿಸಲು ಅವಕಾಶ ನೀಡಿತ್ತು.

ಆದರೆ, ಶರಣ್ ಪಂಪ್‌ವೆಲ್ ಅವರು ಆದೇಶಿತ ಸಮಯವನ್ನು ಮೀರಿ, 12:45ರ ವರೆಗೆ ಶೋಭಾಯಾತ್ರೆಯಲ್ಲಿ ಭಾಗಿಯಾಗಿದ್ದರು. ಮಾತ್ರವಲ್ಲದೆ, ಅವರಿಗೆ ಅನುಮತಿ ಇರದಿದ್ದರೂ ಸಹ ಶೋಭಾಯಾತ್ರೆಯಲ್ಲಿ ಭಾಷಣ ಕೂಡ ಮಾಡಿದ್ದರು. ಈ ಆದೇಶ ಉಲ್ಲಂಘನೆಯ ಬಗ್ಗೆ ಪೊಲೀಸರು ಹೈಕೋರ್ಟ್‌ನ ಗಮನಕ್ಕೆ ತಂದ ನಂತರ ನ್ಯಾಯಾಲಯವು ದಂಡ ವಿಧಿಸಿ ಆದೇಶ ಹೊರಡಿಸಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಉಡುಪಿ: ಹೆಬ್ರಿಯ ಮುನಿಯಾಲಿನಲ್ಲಿ ವ್ಯಕ್ತಿ ನಾಪತ್ತೆ – ಮಾಹಿತಿ ನೀಡಿ

ಹೆಬ್ರಿಯ ಮುನಿಯಾಲಿನಲ್ಲಿ ವಿಶ್ವನಾಥ ಶೆಟ್ಟಿ ಎಂಬವರು ಜುಲೈ 13 ರಿಂದ ನಾಪತ್ತೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳ ಗೃಹಜ್ಯೋತಿ ಪರಿಶೀಲನೆ: ಗ್ರಾಪಂನಲ್ಲೇ ಪ್ರಕ್ರಿಯೆ ನಡೆಸಲು ಆದೇಶ

ಕಾರ್ಕಳದಲ್ಲಿ ಗೃಹಜ್ಯೋತಿ ಫಲಾನುಭವಿಗಳ ಪರಿಶೀಲನೆ ಇನ್ಮುಂದೆ ಪಂಚಾಯತ್ ಕಚೇರಿಯಲ್ಲಿ ನಡೆಯಲಿದೆ. ಲಂಚ ಕೇಳಿದರೆ ಅಮಾನತು ಎಚ್ಚರಿಕೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಸಿಕ್ಕಿಂ ಸುರಂಗ ಕುಸಿತ ದುರಂತ: 8 ಸಾವು, 18 ಕಾರ್ಮಿಕರು ಸಿಲುಕಿರುವ ಶಂಕೆ

ಸಿಕ್ಕಿಂನ ನಾಮ್ಚಿ ಬಳಿ ಜಲವಿದ್ಯುತ್ ಸುರಂಗ ಕುಸಿದು 8 ಮಂದಿ ಸಾವು. ಮೀಥೇನ್ ಅನಿಲ ಸೋರಿಕೆಯಿಂದ ಕಾರ್ಯಾಚರಣೆಗೆ ಅಡ್ಡಿ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕಾರ್ಕಳದಲ್ಲಿ ಯುವತಿಗೆ ಹಲ್ಲೆ, ಜೀವ ಬೆದರಿಕೆ: ಯುವಕನ ವಿರುದ್ಧ ಪ್ರಕರಣ

ಕಾರ್ಕಳದಲ್ಲಿ 19 ವರ್ಷದ ಯುವತಿಗೆ ಹಲ್ಲೆ ಹಾಗೂ ಜೀವ ಬೆದರಿಕೆ ಆರೋಪದಡಿ ಯುವಕನ ವಿರುದ್ಧ ಪ್ರಕರಣ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ