spot_img

ಖಾಸಗಿ ಅನುದಾನಿತ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಹಿತ ಕಾಪಾಡುವಂತೆ ಸರ್ಕಾರಕ್ಕೆ ಶಶೀಲ್ ಜಿ ನಮೋಶಿ ಆಗ್ರಹ

Date:

ಕಲಬುರ್ಗಿ: ರಾಜ್ಯದ ಖಾಸಗಿ ಅನುದಾನಿತ ಪದವಿಪೂರ್ವ ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಉಪನ್ಯಾಸಕರ ಕಾರ್ಯಭಾರದ ಕುರಿತು ದಿನಾಂಕ 28-08-2025 ರಂದು ಶಾಲಾ ಶಿಕ್ಷಣ ಇಲಾಖೆಯ ಪದವಿಪೂರ್ವ ವಿಭಾಗದ ನಿರ್ದೇಶಕರು ರಾಜ್ಯದ ಎಲ್ಲಾ ಜಿಲ್ಲೆಗಳ ಉಪನಿರ್ದೇಶಕರಿಗೆ ಜ್ಞಾಪನಾ ಪತ್ರವನ್ನು ಬರೆದಿದ್ದು ದಿನಾಂಕ 30-08-2025 ರ ಒಳಗಾಗಿ ಕಾರ್ಯಭಾರವನ್ನು ಹೊಂದಿರದ ಅಥವಾ ಕಡಿಮೆ ಕಾರ್ಯಭಾರ ಹೊಂದಿರುವ ಉಪನ್ಯಾಸಕರ ಮಾಹಿತಿಯನ್ನು ನೀಡುವಂತೆ ತಿಳಿಸಿರುತ್ತಾರೆ. ಮುಂದುವರೆದು ಅಂತಹ ಉಪನ್ಯಾಸಕರನ್ನು ಸೇವೆಯಿಂದ ವಿಮುಕ್ತಿಗೊಳಿಸಲು ಕ್ರಮವಹಿಸಬೇಕಾಗಿದೆ ಎಂದು ತಿಳಿಸಿರುತ್ತಾರೆ. ಇದು ರಾಜ್ಯದ ಖಾಸಗಿ ಅನುದಾನಿತ ಉಪನ್ಯಾಸಕರಿಗೆ ಆತಂಕ ಎದುರಾಗುವಂತೆ ಮಾಡಿದೆ ಎಂದು ಮಾನ್ಯ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವರಾದ ಮಾನ್ಯ ಶ್ರೀ ಮಧು ಬಂಗಾರಪ್ಪನವರಿಗೆ ಪತ್ರದ ಮುಖಾಂತರ ಹಾಗೂ ದೂರವಾಣಿ ಮುಖಾಂತರ ವಿಧಾನ ಪರಿಷತ್ ಸದಸ್ಯರಾದ ಶ್ರೀ ಶಶೀಲ್ ಜಿ ನಮೋಶಿ ತಿಳಿಸಿದ್ದಾರೆ.

ಈ ರೀತಿಯಾಗಿ ತಮ್ಮ ಇಲಾಖೆಯ ಅಧಿಕಾರಿಗಳು ಜ್ಞಾಪನಾ ಪತ್ರಗಳು, ಆದೇಶ ಮಾಡುವುದರಿಂದ ಉಪನ್ಯಾಸಕರಲ್ಲಿ ಮಾನಸಿಕ ಗೊಂದಲ ಉಂಟಾಗಿ ಇದರಿಂದ ಪಾಠ ಪ್ರವಚನಗಳ ಮೇಲೂ ಪರಿಣಾಮ ಬೀರಿ ರಾಜ್ಯದ ಪಿಯುಸಿ ಫಲಿತಾಂಶದ ಮೇಲೂ ಋಣಾತ್ಮಕ ಪರಿಣಾಮ ಬೀರುವ ಎಲ್ಲಾ ಸಾಧ್ಯತೆಗಳೂ ಇವೆ. ರಾಜ್ಯದ ಎಸ್ ಎಸ್ ಎಲ್ ಸಿ , ಪಿಯುಸಿ ಫಲಿತಾಂಶ ಸುಧಾರಣೆಗಾಗಿ ತಾವು ನಿರಂತರ ಪ್ರಯತ್ನ ಮಾಡುತ್ತಿರುವಿರಿ ಇಂತಹ ಸಂದರ್ಭಗಳಲ್ಲಿ ನಿಮ್ಮ ಇಲಾಖೆಯ ಅಧಿಕಾರಿಗಳ ಪತ್ರಗಳು ಆದೇಶಗಳು ನಿಮ್ಮ ಪ್ರಯತ್ನಗಳಿಗೆ ಹಿನ್ನಡೆ ಮಾಡುವ ಸಾಧ್ಯತೆಗಳಿವೆ. ಈಗಾಗಲೇ ರಾಜ್ಯದ ಎಸ್ ಎಸ್ ಎಲ್ ಸಿ ಫಲಿತಾಂಶ ಈ ಬಾರಿ ಕುಸಿತವಾಗಿರುವದರಿಂದ ರಾಜ್ಯ ಎಲ್ಲ ಪದವಿಪೂರ್ವ ಕಾಲೇಜುಗಳಲ್ಲಿ ಪ್ರವೇಶದಲ್ಲಿ ಇಳಿಕೆಯಾಗಿದೆ. ಅನುದಾನಿತ ಪದವಿಪೂರ್ವ ಕಾಲೇಜುಗಳಲ್ಲಿ ಕಾರ್ಯಭಾರದ ಕೊರತೆಯುಂಟಾಗಿರುವುದು ತಮಗೂ ತಿಳಿದ ವಿಷಯವಾಗಿದೆ. ತಮಗೂ ಅನುದಾನಿತ ನೌಕರರ ಸಮಸ್ಯೆಗಳ ಬಗ್ಗೆ ತಿಳಿದಿದೆ. ಇತ್ತೀಚೆಗೆ ತಾವುಗಳೆ ಈ ವಿಮುಕ್ತಿ ಅನ್ನುವ ಪದವನ್ನು ತೆಗೆದು ಅನುದಾನಿತ ನೌಕರರಿಗೆ ಯಾವುದೇ ಸಮಸ್ಯೆ ಆಗದ ಹಾಗೆ ಪ್ರಯತ್ನಿಸುವೆ ಎಂದು ಭರವಸೆ ನೀಡಿದ್ದೀರಿ. ಶಿಕ್ಷಕರ ಕ್ಷೇತ್ರದ ಹಾಗೂ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಸಭೆಯಲ್ಲಿ ರಾಜ್ಯದ ಅನುದಾನಿತ ಶಿಕ್ಷಕರ ಪರವಾಗಿ ನಾನಿರುವೆ ಅವರ ಎಲ್ಲಾ ಸಮಸ್ಯೆಗಳನ್ನೂ ಬಗೆಹರಿಸಲು ಪ್ರಯತ್ನಿಸುತ್ತೇನೆ ಎಂದು ಭರವಸೆಯು ನೀಡಿರುವಿರಿ. ಆದರೆ ಏಕಾಏಕಿ ನಿಮ್ಮ ಇಲಾಖೆಯ ಅಧಿಕಾರಿಗಳು ಈ ರೀತಿಯಾದ ಪತ್ರಗಳನ್ನು ಹೊರಡಿಸುವುದರಿಂದ ಇದು ಸರಿಯಾಗಿ ಪಾಠ ಪ್ರವಚನಗಳನ್ನು ಮಾಡುತ್ತಿರುವ ಉಪನ್ಯಾಸಕರಲ್ಲಿ ಆತಂಕ ಉಂಟು ಮಾಡುತ್ತದೆ ದಯವಿಟ್ಟು ತಾವುಗಳು ಅಧಿಕಾರಿಗಳು ಹೊರಡಿಸಿರುವ ಪತ್ರವನ್ನು ಹಿಂತೆಗಿಸಿ ಕಾರ್ಯಭಾರದ ಕೊರತೆ ಇರುವ ಉಪನ್ಯಾಸಕರನ್ನು ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ, ವಸತಿ ಪದವಿಪೂರ್ವ ಕಾಲೇಜುಗಳಲ್ಲಿ ನಿಯೋಜನೆ ಗೊಳಿಸಿ ಕಾರ್ಯಭಾರ ಸರಿದೂಗುವಂತೆ ಮಾಡಲು ಆದೇಶ ಮಾಡಬೇಕು. ಈ ಬಾರಿಯ ಎಸ್ ಎಸ್ ಎಲ್ ಸಿ ಫಲಿತಾಂಶ ಕಡಿಮೆ ಆಗಿರುವುದರಿಂದ ಕಾರ್ಯಭಾರ ಕೊರತೆ ಇರುವ ಯಾವುದೇ ಉಪನ್ಯಾಸಕರ ಮೇಲೆ ಕ್ರಮ ಕೈಗೊಳ್ಳಬಾರದೆಂದು ತಮ್ಮಲ್ಲಿ ನಾನು ಆಗ್ರಹ ಪೂರಕವಾಗಿ ಕೊರುತ್ತೇನೆ ಎಂದು ತಿಳಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ವಿಶ್ವ ಆತ್ಮಹತ್ಯಾ ನಿರೋಧ ದಿನ

ವಿಶ್ವ ಆರೋಗ್ಯ ಸಂಸ್ಥೆ (WHO) ಮತ್ತು ಅಂತರರಾಷ್ಟ್ರೀಯ ಆತ್ಮಹತ್ಯಾ ನಿರೋಧ ಸಂಘಟನೆಯ (IASP) ಜಂಟಿ ಉದ್ದೇಶದೊಂದಿಗೆ ಪ್ರತಿ ವರ್ಷ ಸೆಪ್ಟೆಂಬರ್ 10 ರಂದು ಈ ದಿನವನ್ನು ಆಚರಿಸಲಾಗುತ್ತದೆ.

ಆಪಲ್‌ನಿಂದ ಐಫೋನ್ ಲೋಕಕ್ಕೆ ಹೊಸ ಸ್ಪರ್ಧಿ: ಅತಿ ತೆಳುವಾದ ‘ಐಫೋನ್ ಏರ್’ ಅನಾವರಣ!

ಅತಿ ತೆಳುವಾದ ಐಫೋನ್ 'ಏರ್' ಮಾದರಿ, ಹೊಸ ವೈಶಿಷ್ಟ್ಯಗಳೊಂದಿಗೆ ಐಫೋನ್ 17, ಸುಧಾರಿತ ಏರ್‌ಪಾಡ್ಸ್ ಪ್ರೊ 3 ಮತ್ತು ರಕ್ತದೊತ್ತಡ ಮಾನಿಟರ್ ಹೊಂದಿರುವ ಆಪಲ್ ವಾಚ್.

ಭಾರತದ ನೂತನ ಉಪರಾಷ್ಟ್ರಪತಿಯಾಗಿ ಸಿ.ಪಿ. ರಾಧಾಕೃಷ್ಣನ್ ಆಯ್ಕೆ

ಭಾರತದ 17ನೇ ಉಪರಾಷ್ಟ್ರಪತಿಯಾಗಿ ಮಹಾರಾಷ್ಟ್ರದ ಹಾಲಿ ರಾಜ್ಯಪಾಲ ಮತ್ತು ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಅವರು ಆಯ್ಕೆಯಾಗಿದ್ದಾರೆ.

ಸಾಂಬಾರಿಗೆ ರುಚಿ ಮಾತ್ರವಲ್ಲ, ಆರೋಗ್ಯಕ್ಕೂ ಒಳ್ಳೆಯದು: ಕೆಂಪು ಮೆಣಸಿನಕಾಯಿಯ ಪ್ರಯೋಜನಗಳು

ಅಡುಗೆಮನೆಯಲ್ಲಿ ಸಾಮಾನ್ಯವಾಗಿ ಬಳಸುವ ಕೆಂಪು ಮೆಣಸಿನಕಾಯಿ ಕೇವಲ ಆಹಾರಕ್ಕೆ ಖಾರ ಮತ್ತು ರುಚಿ ನೀಡುವುದಷ್ಟೇ ಅಲ್ಲ, ಇದು ಅನೇಕ ಆರೋಗ್ಯಕಾರಿ ಗುಣಗಳನ್ನು ಸಹ ಹೊಂದಿದೆ.