
ಕಾಪು: ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿ, ಅವರಿಂದ ಲಕ್ಷಾಂತರ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತ ಆರೋಪಿಗಳನ್ನು ಉಡುಪಿಯ ಕೊಡವೂರು ಗ್ರಾಮದ ಅಭಿಷೇಕ್ ಪಾಲನ್ (30) ಮತ್ತು ಉಪ್ಪೂರು ಗ್ರಾಮದ ಆರ್. ಶಾಶ್ವತ್ (24) ಎಂದು ಗುರುತಿಸಲಾಗಿದೆ.
ಪ್ರಕರಣದ ವಿವರ
ದಿನಾಂಕ 09.10.2025 ರಂದು ಬೆಳಿಗ್ಗೆ 10.30 ಗಂಟೆಗೆ ಕಾಪು ತಾಲೂಕಿನ ಬೆಳಪು ಇಂಡಸ್ಟ್ರಿಯಲ್ ಏರಿಯಾ ಕ್ರಾಸ್ ರಸ್ತೆ ಬಳಿ ಗಾಂಜಾ ಮಾರಾಟದ ಕುರಿತು ದೊರೆತ ಖಚಿತ ಮಾಹಿತಿ ಮೇರೆಗೆ ಶಿರ್ವ ಪೊಲೀಸ್ ಠಾಣಾ ಉಪನಿರೀಕ್ಷಕರಾದ ಮಂಜುನಾಥ ಮರಬದ ಅವರು ಠಾಣಾ ಸಿಬ್ಬಂದಿಯೊಂದಿಗೆ ದಾಳಿ ನಡೆಸಿದರು.
ದಾಳಿ ವೇಳೆ ಆರೋಪಿಗಳು ಗಾಂಜಾ ಮಾರಾಟ ಮಾಡಲು ಬಂದಿರುವುದು ದೃಢಪಟ್ಟಿತು. ಪೊಲೀಸರು ಇಬ್ಬರನ್ನೂ ವಶಕ್ಕೆ ಪಡೆದು, ಅವರ ಬಳಿಯಿದ್ದ ಈ ಕೆಳಗಿನ ಸೊತ್ತುಗಳನ್ನು ಜಪ್ತಿ ಮಾಡಿದ್ದಾರೆ:
- ಸುಮಾರು 115.44 ಗ್ರಾಂ ಗಾಂಜಾ (ಅಂದಾಜು ಮೌಲ್ಯ ₹5,000/-)
- ತೂಕದ ಡಿಜಿಟಲ್ ಯಂತ್ರ (₹200/-)
- ಪ್ಲಾಸ್ಟಿಕ್ ಡಬ್ಬ ಮತ್ತು ಕೆಂಪು ಬಣ್ಣದ ಕೈ ಚೀಲ
- ಕೃತ್ಯಕ್ಕೆ ಬಳಸಿದ್ದ ಯಮಹಾ FZ ನೀಲಿ ಬಣ್ಣದ ಮೋಟಾರ್ ಸೈಕಲ್ (ಅಂದಾಜು ಮೌಲ್ಯ ₹70,000/-)
ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಅಂದಾಜು ಮೌಲ್ಯ ₹75,250 ಆಗಿದೆ. ಈ ಸಂಬಂಧ ಶಿರ್ವ ಪೊಲೀಸ್ ಠಾಣೆಯಲ್ಲಿ NDPS ಕಾಯಿದೆಯ ಕಲಂ 8(c), 20(b)(ii)(A) ರಂತೆ ಪ್ರಕರಣ ದಾಖಲಿಸಲಾಗಿದೆ.



































