spot_img

ಶಿವಮೊಗ್ಗದ ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಘಟನೆಗೆ ಖಂಡನೆ

Date:

ಶಿವಮೊಗ್ಗ: ಶಿವಮೊಗ್ಗ ನಗರದ ಆದಿಚುಂಚನಗಿರಿ ಕಾಲೇಜಿನ ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಬ್ರಾಹ್ಮಣ ವಿದ್ಯಾರ್ಥಿಗಳ ಧಾರ್ಮಿಕ ಭಾವನೆಗಳನ್ನು ಕುಂದಿಸುವ ಘಟನೆ ನಡೆದಿದೆ. ದಿನಾಂಕ 16-04-2025ರಂದು ನಡೆದ ಸಿಇಟಿ ಪರೀಕ್ಷೆಗೆ ಹಾಜರಾದ ಬ್ರಾಹ್ಮಣ ವಿದ್ಯಾರ್ಥಿಗಳು ಧರಿಸಿದ್ದ ಕಾಶಿದಾರ ಮತ್ತು ಗಾಯತ್ರಿ ದೀಕ್ಷೆಯ ಜನಿವಾರವನ್ನು ಪರೀಕ್ಷಾ ಅಧಿಕಾರಿಗಳು ಬಲವಂತವಾಗಿ ತೆಗೆಸಿದ್ದಾರೆ.

ಈ ಘಟನೆಯಿಂದ ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಮಾನಸಿಕ ಆಘಾತಕ್ಕೊಳಗಾಗಿದ್ದಾರೆ. ಗಾಯತ್ರಿ ಮಂತ್ರದ ದೀಕ್ಷೆ ಪಡೆದು, ಧಾರ್ಮಿಕ ಪ್ರತಿಜ್ಞೆಗಳೊಂದಿಗೆ ಜನಿವಾರ ಧರಿಸುವ ಬ್ರಾಹ್ಮಣ ಸಮುದಾಯದವರಿಗೆ ಇದು ಅಪಮಾನಕಾರಿ ಎಂದು ಭಾವಿಸಲಾಗಿದೆ.

ಬ್ರಾಹ್ಮಣ ಸಂಘಟನೆಗಳು ಘೋಷಿಸಿದ ಖಂಡನೆ

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭೆ ಮತ್ತು ಶಿವಮೊಗ್ಗ ಜಿಲ್ಲೆಯ ವಿವಿಧ ಬ್ರಾಹ್ಮಣ ಸಂಘಗಳ ಒಕ್ಕೂಟ ಈ ಘಟನೆಯನ್ನು ತೀವ್ರವಾಗಿ ಖಂಡಿಸಿದೆ. ಅಧಿಕಾರಿಗಳು ವಿದ್ಯಾರ್ಥಿಗಳ ಧಾರ್ಮಿಕ ಸಂಸ್ಕಾರಗಳನ್ನು ಅವಹೇಳನ ಮಾಡಿದ್ದು ಹಿಂದೂ ವಿರೋಧಿ ಮನೋಭಾವದ ಪ್ರತೀಕ ಎಂದು ಹೇಳಿದ್ದಾರೆ.

“ಮೊಘಲ್ ಮತ್ತು ಬ್ರಿಟಿಷ್ ಆಳ್ವಿಕೆಯಲ್ಲಿ ಹಿಂದೂಗಳ ಧಾರ್ಮಿಕ ಸಂಕೇತಗಳನ್ನು ನಿಷೇಧಿಸಲಾಗುತ್ತಿತ್ತು. ಆದರೆ ಸ್ವತಂತ್ರ ಭಾರತದಲ್ಲಿ ಇಂತಹ ಕ್ರೌರ್ಯ ಸಹಿಸಲಾಗದು. ಧರ್ಮದ್ರೋಹಿ ಅಧಿಕಾರಿಗಳ ವರ್ತನೆಗೆ ಸರ್ಕಾರ ಕಟ್ಟುನಿಟ್ಟಾದ ನಡೆಸಿಕೊಳ್ಳಬೇಕು,” ಎಂದು ಸಂಘಟನೆಗಳು ಒತ್ತಿಹೇಳಿವೆ.

ಜಿಲ್ಲಾಡಳಿತಕ್ಕೆ ಕರೆ

ಮಹಾಸಭೆಯ ನೇತೃತ್ವ ಜಿಲ್ಲಾಧಿಕಾರಿಗಳಿಗೆ ತಕ್ಷಣ ತನಿಖೆ ನಡೆಸಿ, ಧಾರ್ಮಿಕ ಭಾವನೆಗಳನ್ನು ಗೌರವಿಸದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿದೆ. “ಗಾಯತ್ರಿ ಮಂತ್ರದ ಪವಿತ್ರತೆ ಮತ್ತು ಜನಿವಾರದ ಮಹತ್ವವನ್ನು ಅರಿತುಕೊಳ್ಳದೆ, ವಿದ್ಯಾರ್ಥಿಗಳನ್ನು ಹೀಗಳೆಯುವುದು ಸಹಿಸಲಾಗದ ಅಪರಾಧ. ಸರ್ಕಾರವು ಧಾರ್ಮಿಕ ಸಂವೇದನಶೀಲತೆಯನ್ನು ಕಾಪಾಡಬೇಕು,” ಎಂದು ಹೇಳಿದ್ದಾರೆ.

ಈ ಘಟನೆಯ ನಿವಾರಣೆಗಾಗಿ ಸಂಬಂಧಿಸಿದ ಅಧಿಕಾರಿಗಳು ತಕ್ಷಣ ವಿವರಣೆ ನೀಡಬೇಕು ಮತ್ತು ಪರೀಕ್ಷಾ ಸೆಂಟರ್‌ಗಳಲ್ಲಿ ಧಾರ್ಮಿಕ ಸ್ವಾತಂತ್ರ್ಯವನ್ನು ಗೌರವಿಸುವಂತೆ ಕಟ್ಟುನಿಟ್ಟಾದ ನಿರ್ದೇಶನಗಳನ್ನು ಜಾರಿಗೊಳಿಸಬೇಕು ಎಂದು ಬ್ರಾಹ್ಮಣ ಸಮುದಾಯವು ಒತ್ತಾಯಿಸಿದೆ.


share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ನೇಪಾಳದಲ್ಲಿ ಭುಗಿಲೆದ್ದ ಪ್ರತಿಭಟನೆ: ಪ್ರಧಾನಿ ಕೆ.ಪಿ. ಶರ್ಮಾ ಓಲಿ ರಾಜೀನಾಮೆ

ನೇಪಾಳದಲ್ಲಿ ಭುಗಿಲೆದ್ದ ಭ್ರಷ್ಟಾಚಾರ ವಿರೋಧಿ ಮತ್ತು ಸರ್ಕಾರದ ವಿರುದ್ಧದ ಪ್ರತಿಭಟನೆಗಳು ಹಿಂಸಾತ್ಮಕ ರೂಪ ಪಡೆದ ಹಿನ್ನೆಲೆಯಲ್ಲಿ ಪ್ರಧಾನಿ ಕೆ.ಪಿ.ಶರ್ಮಾ ಓಲಿ ರಾಜೀನಾಮೆ ನೀಡಿದ್ದಾರೆ.

ಆಲ್ ಇಂಡಿಯಾ ಕರಾಟೆ ಸ್ಪರ್ಧಾಕೂಟದಲ್ಲಿ ಮಿಂಚಿದ ನಚಿಕೇತ ವಿದ್ಯಾಲಯ : ಒಟ್ಟು 6 ಪದಕಗಳ ಸಾಧನೆ

ಆಲ್ ಇಂಡಿಯಾ ಕರಾಟೆ ಸ್ಪರ್ಧಾಕೂಟದಲ್ಲಿ ನಚಿಕೇತ ವಿದ್ಯಾಲಯದ ವಿದ್ಯಾರ್ಥಿಗಳು ಒಟ್ಟು 6 ಪದಕಗಳನ್ನು ಪಡೆದಿರುತ್ತಾರೆ.

‘ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟುವ ಆಸೆ’: ಶಾಸಕ ಸಂಗಮೇಶ್ವರ್

ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್ ಅವರು ನೀಡಿದ ಹೇಳಿಕೆಯೊಂದು ಸಂಚಲನ ಮೂಡಿಸಿದೆ. ಮುಸ್ಲಿಂ ಸಮುದಾಯದ ಪ್ರೀತಿಗೆ ಪಾತ್ರನಾಗಿರುವ ತಾನು ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟುವ ಆಸೆಯಿದೆ ಎಂದು ಅವರು ಹೇಳಿದ್ದಾರೆ.

“ನನಗೆ ಸ್ವಲ್ಪ ವಿಷ ಕೊಡಿ” ಎಂದು ಕೋರ್ಟ್ ನಲ್ಲಿ ಕಣ್ಣೀರಿಟ್ಟ ದರ್ಶನ್

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್, ಮಂಗಳವಾರ ಬೆಂಗಳೂರಿನ ಕೋರ್ಟ್‌ನಲ್ಲಿ ಮನವಿಯೊಂದನ್ನು ಮಾಡಿದ್ದಾರೆ.