spot_img

ಶಿವಮೊಗ್ಗ: ನಿಂತಿದ್ದ ಲಾರಿಗೆ ಬಸ್ ಡಿಕ್ಕಿ, ಇಬ್ಬರು ಸಾವು; 15ಕ್ಕೂ ಹೆಚ್ಚು ಜನರಿಗೆ ಗಾಯ!

Date:

spot_img

ಶಿವಮೊಗ್ಗ: ಶಿವಮೊಗ್ಗ ತಾಲೂಕಿನ ಗಾಜನೂರು ಸಮೀಪದ ಅಗ್ರಹಾರ ಬಳಿ ಬುಧವಾರ ಬೆಳಗ್ಗೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ, ನಿಂತಿದ್ದ ಲಾರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದಾರೆ. 15ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಮೃತಪಟ್ಟವರನ್ನು ಬಸ್ ಕಂಡಕ್ಟರ್ ಅಣ್ಣಪ್ಪ (40) ಮತ್ತು ಚಳ್ಳಕೆರೆಯ ನಿವಾಸಿ ಹರ್ಷಿತ (35) ಎಂದು ಗುರುತಿಸಲಾಗಿದೆ.

ಅಪಘಾತದ ವಿವರಗಳು

ಮಂಗಳೂರಿನಿಂದ ಚಳ್ಳಕೆರೆಗೆ ಹೊರಟಿದ್ದ ಖಾಸಗಿ ಬಸ್, ಗಾಜನೂರು ಸಮೀಪದ ಅಗ್ರಹಾರ ಬಳಿ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಬಸ್‌ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.

ಘಟನಾ ಸ್ಥಳಕ್ಕೆ ತುಂಗಾನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಗಾಯಗೊಂಡವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಅತಿಯಾದ ಯೋಚನೆ ಅಪಾಯಕಾರಿ: ಮಾನಸಿಕ ಆರೋಗ್ಯ ಕಾಪಾಡಲು ತಜ್ಞರ ಸಲಹೆಗಳು!

ಅತಿಯಾಗಿ ಯೋಚಿಸುವುದು ಮೇಲ್ನೋಟಕ್ಕೆ ಹಾನಿಕರವಲ್ಲ ಎನಿಸಿದರೂ, ಅದು ನಿಧಾನವಾಗಿ ಮಾನಸಿಕ ಒತ್ತಡಕ್ಕೆ ಕಾರಣವಾಗುತ್ತದೆ.

ತಮಿಳುನಾಡು ವಿಧಾನಸಭಾ ಚುನಾವಣೆ: ಅಣ್ಣಾಮಲೈ ಸ್ಪರ್ಧೆ ಅನುಮಾನ, ರಾಷ್ಟ್ರಮಟ್ಟದ ಜವಾಬ್ದಾರಿಗೆ ಸಿದ್ಧತೆ?

ತಮಿಳುನಾಡು ಬಿಜೆಪಿ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರು ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆ ಕಡಿಮೆ ಎಂದು ಬುಧವಾರ ಮೂಲಗಳು ತಿಳಿಸಿವೆ.

ಕೆಂಪುಕಲ್ಲು-ಮರಳು ಸಮಸ್ಯೆ: ಕರಾವಳಿ ಬಿಜೆಪಿ ನಿಯೋಗದಿಂದ ಸಿಎಂಗೆ ಮನವಿ ಸಲ್ಲಿಕೆ!

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ತೀವ್ರ ಸಮಸ್ಯೆಯಾಗಿರುವ ಕೆಂಪುಕಲ್ಲು ಮತ್ತು ಮರಳಿನ ಕೊರತೆ ನೀಗಿಸಲು ಜಿಲ್ಲೆಯ ಸಂಸದರು, ಶಾಸಕರು, ಬಿಜೆಪಿ ಜಿಲ್ಲಾಧ್ಯಕ್ಷರು ಮತ್ತು ಪದಾಧಿಕಾರಿಗಳ ನಿಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು.

ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ: ಆರು IAS, ನಾಲ್ಕು IFS, ಓರ್ವ IPS ಅಧಿಕಾರಿಗಳ ವರ್ಗಾವಣೆ!

ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದ್ದು, ಆರು ಮಂದಿ ಐಎಎಸ್ ಅಧಿಕಾರಿಗಳು, ನಾಲ್ಕು ಐಎಫ್‌ಎಸ್ ಅಧಿಕಾರಿಗಳು ಹಾಗೂ ಓರ್ವ ಐಪಿಎಸ್ ಅಧಿಕಾರಿ ಸೇರಿದಂತೆ ಒಟ್ಟು 11 ಹಿರಿಯ ಅಧಿಕಾರಿಗಳನ್ನು ವರ್ಗಾವಣೆ ಮಾಡಿ, ತಕ್ಷಣದಿಂದ ಜಾರಿಗೆ ಬರುವಂತೆ ಹೊಸ ಹುದ್ದೆಗಳನ್ನು ನಿಯೋಜಿಸಿದೆ.