spot_img

ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿ ಆಘಾತಕಾರಿ ಘಟನೆ: ಸಾಫ್ಟ್‌ವೇರ್ ಎಂಜಿನಿಯರ್ ಮಗಳು, ತಾಯಿ ನೇಣಿಗೆ ಶರಣು

Date:

spot_img

ಬೆಂಗಳೂರು : ರಾಜಧಾನಿಯ ವೈಟ್‌ಫೀಲ್ಡ್ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ ಆಘಾತಕಾರಿ ಘಟನೆ ನಡೆದಿದ್ದು, ಸಾಫ್ಟ್‌ವೇರ್ ಎಂಜಿನಿಯರ್‌ ಮಗಳು ಮತ್ತು ಅವರ ತಾಯಿ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾವಿಗೂ ಮುನ್ನ ತಂದೆಗೆ ಕೊನೆಯ ಕರೆ ಮಾಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ನಾಗೊಂಡನಹಳ್ಳಿ ನಿವಾಸಿಗಳಾದ ಶ್ರೀಜಾ ರೆಡ್ಡಿ (25) ಮತ್ತು ಅವರ ತಾಯಿ ರಚಿತಾ ರೆಡ್ಡಿ (48) ಆತ್ಮಹತ್ಯೆ ಮಾಡಿಕೊಂಡವರು.

ಖಾಸಗಿ ಕಂಪನಿಯಲ್ಲಿ ಎಂಜಿನಿಯರ್ ಆಗಿರುವ ಶ್ರೀಧರ್ ರೆಡ್ಡಿ ಅವರು ಪತ್ನಿ ರಚಿತಾ ರೆಡ್ಡಿ ಮತ್ತು ಪುತ್ರಿ ಶ್ರೀಜಾ ರೆಡ್ಡಿ ಅವರೊಂದಿಗೆ ನಾಗೊಂಡನಹಳ್ಳಿಯ ಸ್ವಂತ ಮನೆಯಲ್ಲಿ ವಾಸಿಸುತ್ತಿದ್ದರು. ಎಂಜಿನಿಯರಿಂಗ್ ಪದವೀಧರೆಯಾಗಿರುವ ಶ್ರೀಜಾ, ಖಾಸಗಿ ಕಂಪನಿಯೊಂದರಲ್ಲಿ ಡೇಟಾ ಅನಲಿಸ್ಟ್ (ಟೆಕ್ಕಿ) ಆಗಿ ಕಾರ್ಯನಿರ್ವಹಿಸುತ್ತಿದ್ದರು. ರಚಿತಾ ಗೃಹಿಣಿಯಾಗಿದ್ದರು.

ಸೋಮವಾರ ಬೆಳಗ್ಗೆ ಶ್ರೀಧರ್ ರೆಡ್ಡಿ ಎಂದಿನಂತೆ ಕೆಲಸಕ್ಕೆ ತೆರಳಿದ್ದರು. ಮಧ್ಯಾಹ್ನ 12 ಗಂಟೆ ಸುಮಾರಿಗೆ ಪತ್ನಿ ಮತ್ತು ಮಗಳು ಕರೆ ಸ್ವೀಕರಿಸದಿದ್ದಾಗ ಆತಂಕಗೊಂಡ ಶ್ರೀಧರ್ ರೆಡ್ಡಿ ಕೂಡಲೇ ಮನೆಗೆ ಧಾವಿಸಿದ್ದಾರೆ. ಮನೆಯ ಬಾಗಿಲು ಒಡೆದು ಒಳಪ್ರವೇಶಿಸಿದಾಗ, ಕೊಠಡಿಯೊಳಗೆ ತಾಯಿ ಮತ್ತು ಮಗಳು ಇಬ್ಬರೂ ಪ್ರತ್ಯೇಕವಾಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡುಬಂದಿದೆ ಎಂದು ವೈಟ್‌ಫೀಲ್ಡ್ ಠಾಣಾ ಪೊಲೀಸರು ತಿಳಿಸಿದ್ದಾರೆ. ಡೆತ್‌ನೋಟ್ ಪತ್ತೆಯಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆದಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ರಕ್ತನಿಧಿ ಘಟಕಗಳಲ್ಲಿ ಆತಂಕಕಾರಿ ಬೆಳವಣಿಗೆ; ಸೋಂಕಿತ ರಕ್ತ ಪತ್ತೆ!

ಇತ್ತೀಚೆಗೆ, ರಕ್ತ ನಿಧಿ ಘಟಕಗಳಲ್ಲಿ ಸ್ವಚ್ಛತೆಯ ಕೊರತೆ, ರಕ್ತ ಸಂಗ್ರಹ ಘಟಕದಲ್ಲಿ ನಿಯಮಗಳ ಉಲ್ಲಂಘನೆ ಮತ್ತು ಅವ್ಯವಹಾರಗಳ ಕುರಿತು ದೂರುಗಳು ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯು ರಕ್ತ ಸಂಗ್ರಹ ಘಟಕಗಳ ತಪಾಸಣೆಯನ್ನು ತೀವ್ರಗೊಳಿಸಿದೆ.

‘ಮದ್ಯ ಪ್ರಿಯರಿಗೆ’ ಭರ್ಜರಿ ಗುಡ್ ನ್ಯೂಸ್ – ಪ್ರತೀ ಬಾಟೆಲ್ ಮೇಲೆ 10 ರಿಂದ 100 ರೂ ಕಡಿತ!!

ನಮ್ಮ ನೆರೆಯ ರಾಜ್ಯ ಆಂಧ್ರಪ್ರದೇಶದಲ್ಲಿ ಮದ್ಯದ ಬೆಲೆಗಳನ್ನು ಭರ್ಜರಿಯಾಗಿ ಕಡಿತಗೊಳಿಸಲಾಗಿದೆ. ಪ್ರತಿ ಬಾಟಲಿಯ ಮೇಲೆ ₹10 ರಿಂದ ₹100 ವರೆಗೆ ಬೆಲೆ ಇಳಿಕೆ ಮಾಡಲಾಗಿದ್ದು, ಇದರಿಂದ ಗ್ರಾಹಕರಿಗೆ ಮಾಸಿಕ ₹116 ಕೋಟಿಗಳಷ್ಟು ಉಳಿತಾಯವಾಗಲಿದೆ ಎಂದು ಅಂದಾಜಿಸಲಾಗಿದೆ.

ಜಿಮೇಲ್‌ನಲ್ಲಿ ಜೆಮಿನಿ AI ಭದ್ರತಾ ಲೋಪ: ಫಿಶಿಂಗ್ ದಾಳಿಗೆ ಹೊಸ ದಾರಿ, ಸಂಶೋಧಕರಿಂದ ಪ್ರಾಂಪ್ಟ್ ಇಂಜೆಕ್ಷನ್ ಪ್ರದರ್ಶನ!

ಗೂಗಲ್‌ನ ಜಿಮೇಲ್‌ನಲ್ಲಿರುವ ಜೆಮಿನಿ ಕೃತಕ ಬುದ್ಧಿಮತ್ತೆ (AI) ಚಾಟ್‌ಬಾಟ್, ಪ್ರಾಂಪ್ಟ್ ಇಂಜೆಕ್ಷನ್ ಆಧಾರಿತ ಫಿಶಿಂಗ್ ದಾಳಿಗೆ ಗುರಿಯಾಗಬಹುದು ಎಂದು ಸಂಶೋಧಕರೊಬ್ಬರು ಪ್ರದರ್ಶಿಸಿದ್ದಾರೆ.

ಕೊಳಕೆ ಇರ್ವತ್ತೂರು ಶಾಲೆಯಲ್ಲಿ ಯಕ್ಷಗಾನ ತರಬೇತಿ ಶಿಬಿರ ಉದ್ಘಾಟನೆ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಳಕೆ ಇರ್ವತ್ತೂರಿನಲ್ಲಿ ವಿದ್ಯಾರ್ಥಿಗಳಿಗೆ ಯಕ್ಷಗಾನ ಕಲೆಯನ್ನು ಪರಿಚಯಿಸುವ ಉದ್ದೇಶದಿಂದ ಯಕ್ಷ ಕಲಾರಂಗ (ರಿ) ಕಾರ್ಕಳ ಮತ್ತು ಯಕ್ಷಧ್ರುವ ಪಟ್ಲ ಫೌಂಡೇಶನ್ (ರಿ) ಮಂಗಳೂರು ಇವರ ವತಿಯಿಂದ ಯಕ್ಷಗಾನ ತರಬೇತಿ ಶಿಬಿರಕ್ಕೆ ವಿಧ್ಯುಕ್ತವಾಗಿ ಚಾಲನೆ ನೀಡಲಾಯಿತು.