spot_img

ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿ ಆಘಾತಕಾರಿ ಘಟನೆ: ಸಾಫ್ಟ್‌ವೇರ್ ಎಂಜಿನಿಯರ್ ಮಗಳು, ತಾಯಿ ನೇಣಿಗೆ ಶರಣು

Date:

ಬೆಂಗಳೂರು : ರಾಜಧಾನಿಯ ವೈಟ್‌ಫೀಲ್ಡ್ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ ಆಘಾತಕಾರಿ ಘಟನೆ ನಡೆದಿದ್ದು, ಸಾಫ್ಟ್‌ವೇರ್ ಎಂಜಿನಿಯರ್‌ ಮಗಳು ಮತ್ತು ಅವರ ತಾಯಿ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾವಿಗೂ ಮುನ್ನ ತಂದೆಗೆ ಕೊನೆಯ ಕರೆ ಮಾಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ನಾಗೊಂಡನಹಳ್ಳಿ ನಿವಾಸಿಗಳಾದ ಶ್ರೀಜಾ ರೆಡ್ಡಿ (25) ಮತ್ತು ಅವರ ತಾಯಿ ರಚಿತಾ ರೆಡ್ಡಿ (48) ಆತ್ಮಹತ್ಯೆ ಮಾಡಿಕೊಂಡವರು.

ಖಾಸಗಿ ಕಂಪನಿಯಲ್ಲಿ ಎಂಜಿನಿಯರ್ ಆಗಿರುವ ಶ್ರೀಧರ್ ರೆಡ್ಡಿ ಅವರು ಪತ್ನಿ ರಚಿತಾ ರೆಡ್ಡಿ ಮತ್ತು ಪುತ್ರಿ ಶ್ರೀಜಾ ರೆಡ್ಡಿ ಅವರೊಂದಿಗೆ ನಾಗೊಂಡನಹಳ್ಳಿಯ ಸ್ವಂತ ಮನೆಯಲ್ಲಿ ವಾಸಿಸುತ್ತಿದ್ದರು. ಎಂಜಿನಿಯರಿಂಗ್ ಪದವೀಧರೆಯಾಗಿರುವ ಶ್ರೀಜಾ, ಖಾಸಗಿ ಕಂಪನಿಯೊಂದರಲ್ಲಿ ಡೇಟಾ ಅನಲಿಸ್ಟ್ (ಟೆಕ್ಕಿ) ಆಗಿ ಕಾರ್ಯನಿರ್ವಹಿಸುತ್ತಿದ್ದರು. ರಚಿತಾ ಗೃಹಿಣಿಯಾಗಿದ್ದರು.

ಸೋಮವಾರ ಬೆಳಗ್ಗೆ ಶ್ರೀಧರ್ ರೆಡ್ಡಿ ಎಂದಿನಂತೆ ಕೆಲಸಕ್ಕೆ ತೆರಳಿದ್ದರು. ಮಧ್ಯಾಹ್ನ 12 ಗಂಟೆ ಸುಮಾರಿಗೆ ಪತ್ನಿ ಮತ್ತು ಮಗಳು ಕರೆ ಸ್ವೀಕರಿಸದಿದ್ದಾಗ ಆತಂಕಗೊಂಡ ಶ್ರೀಧರ್ ರೆಡ್ಡಿ ಕೂಡಲೇ ಮನೆಗೆ ಧಾವಿಸಿದ್ದಾರೆ. ಮನೆಯ ಬಾಗಿಲು ಒಡೆದು ಒಳಪ್ರವೇಶಿಸಿದಾಗ, ಕೊಠಡಿಯೊಳಗೆ ತಾಯಿ ಮತ್ತು ಮಗಳು ಇಬ್ಬರೂ ಪ್ರತ್ಯೇಕವಾಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡುಬಂದಿದೆ ಎಂದು ವೈಟ್‌ಫೀಲ್ಡ್ ಠಾಣಾ ಪೊಲೀಸರು ತಿಳಿಸಿದ್ದಾರೆ. ಡೆತ್‌ನೋಟ್ ಪತ್ತೆಯಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆದಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಫುಟ್‌ಬಾಲ್ : ಕಾರ್ಕಳ ಜ್ಞಾನಸುಧಾ ತಂಡ ಜಿಲ್ಲಾಮಟ್ಟಕ್ಕೆ

ಪದವಿಪೂರ್ವ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ತಾಲೂಕು ಮಟ್ಟದ ಫುಟ್‌ಬಾಲ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ.

‘ಸೇವಾ ಪಾಕ್ಷಿಕ ಅಭಿಯಾನ’ ಯಶಸ್ವಿಗೊಳಿಸಲು ಕುತ್ಯಾರು ನವೀನ್ ಶೆಟ್ಟಿ ಕರೆ

ಜಿಲ್ಲೆಯಾದ್ಯಂತ ನಡೆಯಲಿರುವ ಸೇವಾ ಪಾಕ್ಷಿಕ ಅಭಿಯಾನವನ್ನು ಪಕ್ಷದ ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಸಂಘಟಿತ ಪರಿಶ್ರಮದ ಮೂಲಕ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಕರೆ ನೀಡಿದರು.

ಕ್ರಿಯೇಟಿವ್ ಕಾಲೇಜಿನಲ್ಲಿ ಗುರುದೇವೋಭವ ಕಾರ್ಯಕ್ರಮ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸಪ್ತಸ್ವರ ಸಭಾಂಗಣದಲ್ಲಿ, 'ಕ್ರಿಯೇಟಿವ್ ಗುರುದೇವೋಭವ' ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಜ್ಞಾನ ಜ್ಯೋತಿಯನ್ನು ಬೆಳಗಿ, ಡಾ. ರಾಧಾಕೃಷ್ಣನ್ ರವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆಯನ್ನು ನೀಡಲಾಯಿತು.

ಕಾರ್ಕಳ ಜ್ಞಾನಸುಧಾ – ಶಿಕ್ಷಕರ ದಿನಾಚರಣೆಸಾವಧಾನದ ಮನಸ್ಥಿತಿ ಗೌರವದ ಉಪಸ್ಥಿತಿ : ವಸಂತ್ ಆಚಾರ್

ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ನಡೆದ ಶಿಕ್ಷಕರ ದಿನಾಚರಣೆಯ ಸಂದರ್ಭ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲಾ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿ ಮಾತನಾಡಿದರು.