
ಹಿರ್ಗಾನ ಗ್ರಾಮದ ಚಿಕ್ಕಲ್ ಬೆಟ್ಟು ಗುತ್ತು ಶ್ರೀಯುತ ಜಗತ್ಪಾಲ ಅತಿಕಾರಿ(70) ಯವರು ದಿನಾಂಕ 20-02-2025 ರಂದು ದೈವಾಧೀನರಾದರು .ಇವರು ಭೂ ಅಭಿವೃದ್ಧಿ ಬ್ಯಾಂಕ್ ಕಾರ್ಕಳದಲ್ಲಿ ಹಲವಾರು ವರ್ಷ ಸೇವೆ ಸಲ್ಲಿಸಿ ,40 ವರ್ಷಗಳಿಂದ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಉಪಾಧ್ಯಕ್ಷರಾಗಿ , ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಭಜನಾ ಮಂಡಳಿಯ ಅಧ್ಯಕ್ಷರು ಹಾಗೂ ಗೌರವಾಧ್ಯಕ್ಷರಾಗಿ , ವ್ಯಾಘ್ರ ಚಾಮುಂಡಿ ದೈವಸ್ಥಾನದ ಅಧ್ಯಕ್ಷರಾಗಿ , ಚಿಕ್ಕಲ್ ಬೆಟ್ಟು ಶಾಲೆಯ ಹಳೆ ವಿದ್ಯಾರ್ಥಿ ಸಂಘದಲ್ಲಿ ಹಾಗೂ ಗ್ರಾಮದ ಎಲ್ಲಾ ಧಾರ್ಮಿಕ ಕ್ಷೇತ್ರ ಗಳಲ್ಲಿ ಸೇವೆ ಸಲ್ಲಿಸಿದ್ದರು ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇವೆ.