spot_img

ಪಂಚ ಗ್ಯಾರಂಟಿ ಯೋಜನಾ ಸಮಿತಿಯ ಅಧ್ಯಕ್ಷ ಸ್ಥಾನದ ಕುರಿತು ಸುನಿಲ್ ಕುಮಾರ್ ನೀಡಿದ ಹೇಳಿಕೆಯನ್ನು ಖಂಡಿಸಿದ ಶುಭದ ರಾವ್

Date:

ವಿಧಾನಸಭೆಯ ಅಧಿವೇಶನದಲ್ಲಿ ಶಾಸಕ ಸುನೀಲ್ ಕುಮಾರ್‌ ಶಾಸಕರನ್ನೇ ಗ್ಯಾರಂಟಿ ಯೋಜನಾ ಸಮಿತಿಯ ಅದ್ಯಕ್ಷರನ್ನಾಗಿ ಮಾಡಬೇಕು ಎಂದು ಅಂಗಲಾಚುವುದನ್ನು ನೋಡಿದರೆ ಅಯ್ಯೋ ಪಾಪ ಎನಿಸುತ್ತದೆ, ಮತ್ತು ರಾಜ್ಯದಲ್ಲಿ ಗ್ಯಾರಂಟಿ ಯೋಜ‌ನೆ ಎಷ್ಟು ಪ್ರಭಾವ ಬೀರುತ್ತಿದೆ ಎಂದು ಸ್ಪಷ್ಟವಾಗುತ್ತದೆ. ಮೊದಲಿನಿಂದಲೂ ಅಪಹಾಸ್ಯ ಮಾಡುತ್ತಿದ್ದ ಶಾಸಕರಿಗೆ ಈಗ ಜ್ಞಾನೋದಯವಾದಂತೆ ಕಾಣುತ್ತದೆ. ನಮ್ಮ ಶಾಸಕರಿಗೆ ಇಂತಹ ದುರ್ಗತಿ ಬರಬಾರದಿತ್ತು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದರಾವ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚುನಾವಣೆಯ ಮೊದಲು ಕಾಂಗ್ರೆಸ್ ನೀಡಿದ ಪಂಚ ಗ್ಯಾರಂಟಿ ಭರವಸೆ ಯನ್ನು ಜನರಿಗೆ ತಲುಪಿಸಲು ಸಾಧ್ಯವೇ ಇಲ್ಲ ಎಂದು ಗೇಲಿ ಮಾಡಿದರು.
ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೊದಲ ದಿನವೇ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿದಾಗ ಗ್ಯಾರಂಟಿ ಯೋಜನೆಗಳು ಬಿಟ್ಟಿ ಭಾಗ್ಯ ಎಂದು ಅಪಹಾಸ್ಯ ಮಾಡಿದರು. ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳು ಕರ್ನಾಟಕ ರಾಜ್ಯವ್ಯಾಪಿ ಯಶಸ್ವಿಯಾಗಿ ಪ್ರಚಾರ ಪಡೆದಾಗ ಅದೇ ಯೋಜನೆಗಳನ್ನು ಇತರ ರಾಜ್ಯಗಳಲ್ಲಿ ಬಿಜೆಪಿಯು ನಕಲು ಮಾಡಿ ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದರು.

ಇಷ್ಟೆಲ್ಲಾ ಆದ ಬಳಿಕ ಈಗ ಅಂದು ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳು ಬಿಟ್ಟಿ ಭಾಗ್ಯಗಳು ಎಂದು ಬಡವರನ್ನು ಗೇಲಿ ಮಾಡಿದ ಸುನೀಲ್ ಕುಮಾರ್ ಸಹಿತ ಬಿಜೆಪಿ ನಾಯಕರುಗಳು ಇಂದು ಅದೇ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿಗೆ ನಮನ್ನು ಅಧ್ಯಕ್ಷರನ್ನಾಗಿ ಸೇರಿಸಿಕೊಳ್ಳಿ ಎಂದು ಅಂಗಾಲಾಚುತ್ತಿದ್ದಾರೆ. ಇವರಿಗೆ ಇಂತಹ ದುರ್ಗತಿ ಬೇಕಿತ್ತಾ, ಇನ್ನಾದರೂ ಮೊದಲು ಆಡಿದ ಮಾತಿಗೆ ಕ್ಷಮೆ ಕೇಳಿ ಪ್ರಾಯಶ್ಚಿತ್ತ ಮಾಡಿಕೊಳ್ಳಲಿ ಎಂದು ಶುಭದರಾವ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಸುದ್ದಿ ವಾಹಿನಿಯ ಕ್ಯಾಮರಾ ಮ್ಯಾನ್ ಸಂದೀಪ್ ಪೂಜಾರಿ ನಿಧನ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ ಮತ್ತು ಈಟಿವಿ ಭಾರತ್‌ನ ಜಿಲ್ಲಾ ವರದಿಗಾರರಾದ ಸಂದೀಪ್ ಪೂಜಾರಿ (37) ಅವರು ಏಪ್ರಿಲ್ 20ರಂದು ಬೆಳಗ್ಗೆ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ನಿಧನರಾದರು.

ಹವಾಮಾನ ವೈಪರೀತ್ಯದಿಂದ ಕರಿಮೆಣಸಿನ ಬೆಲೆ ಗಗನಕ್ಕೆ! ಕೆಜಿಗೆ ₹1100 ತಲುಪುವ ಅಂದಾಜು!

ಕರಿಮೆಣಸು (Black Pepper) ದರ ಕಳೆದ ಎರಡು ವರ್ಷಗಳಲ್ಲಿ ಶೇ. 40ರಷ್ಟು ಏರಿಕೆಯಾಗಿದೆ. ಪೂರೈಕೆ ಕೊರತೆ ಹಾಗೂ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂದೆ ಇದರ ದರ ಮತ್ತಷ್ಟು ಏರಬಹುದು ಎಂದು ವರದಿಯಾಗಿದೆ.

ಹಿಂದೂಗಳೇ “ಒಂದೇ ದೇಗುಲ, ಒಂದೇ ಬಾವಿ, ಒಂದೇ ಸ್ಮಶಾನ” ತತ್ವದೊಂದಿಗೆ ಜಾತಿ ಭೇದಕ್ಕೆ ತೆರೆ ಹಾಕೋಣ: ಭಾಗವತ್ ಕರೆ

ಅಲಿಗಢದಲ್ಲಿ ಮೋಹನ್ ಭಾಗವತ್ ರವರು , “ಒಂದೇ ದೇಗುಲ, ಒಂದೇ ಬಾವಿ, ಒಂದೇ ಸ್ಮಶಾನ” ತತ್ವದಿಂದ ಜಾತಿ ಭೇದ ನಿವಾರಿಸೋಣ” ಎಂದರು.

“ಮುಂದಿನ ಚುನಾವಣೆಯಲ್ಲಿ ತುಳುನಾಡಿನಿಂದ ಕನಿಷ್ಠ ಹತ್ತು ಕಾಂಗ್ರೆಸ್ ಶಾಸಕರು ಆಯ್ಕೆಯಾಗಲಿದ್ದಾರೆ.” : ಡಿಕೆ ಶಿವಕುಮಾರ್

ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯಲ್ಲಿ ಭಾನುವಾರ ನಡೆದ "ಸರಕಾರದ ನಡೆ, ಕಾರ್ಯಕರ್ತರ ಕಡೆ" ಎಂಬ ಕಾರ್ಯಕರ್ತರ ಸಮಾವೇಶದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾತನಾಡಿದರು.