spot_img

ದಿಲ್ಲಿಗೆ ಭೇಟಿ ನೀಡಲಿರುವ ಸಿದ್ದರಾಮಯ್ಯ: ರಾಜಕೀಯ ಚಟುವಟಿಕೆ ಗರಿಗೆದರಲಿದೆಯೇ?

Date:

ಬೆಂಗಳೂರು: ಯುಗಾದಿ ಮುಗಿಯುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಿಲ್ಲಿಗೆ ತೆರಳಲಿದ್ದಾರೆ. ಈ ಭೇಟಿಯು ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯಾಗಿ ಪರಿಗಣಿಸಲ್ಪಡುತ್ತಿದೆ. ಕಾಂಗ್ರೆಸ್ ಪಕ್ಷದಲ್ಲಿ ಮುಂದಿನ ದಿನಗಳಲ್ಲಿ ರಾಜಕೀಯ ಚಟುವಟಿಕೆಗಳು ತೀವ್ರಗೊಳ್ಳಲಿವೆ ಎಂಬ ಸೂಚನೆಗಳು ಲಭ್ಯವಾಗುತ್ತಿವೆ.

ಸಚಿವ ಸಂಪುಟ ಪುನರ್ ರಚನೆ ಅಥವಾ ವಿಸ್ತರಣೆ ಕುರಿತು ಸಿಎಂ ಅವರ ದಿಲ್ಲಿ ಭೇಟಿಯ ವೇಳೆ ಚರ್ಚೆ ನಡೆಯುವ ಸಾಧ್ಯತೆ ಇದೆ. ಸಚಿವರ ಕಾರ್ಯವೈಖರಿಯ ಮೌಲ್ಯಮಾಪನದ ವರದಿ ಈಗಾಗಲೇ ಹೈಕಮಾಂಡ್‌ ಗೆ ಸಲ್ಲಿಸಲಾಯಿತೆಂಬ ಮಾಹಿತಿ ಲಭ್ಯವಿದ್ದು,ಆ ವರದಿಯ ಆಧಾರದ ಮೇಲೆ ಆರು-ಎಂಟು ಸಚಿವರನ್ನು ಬದಲಾಯಿಸುವ ತೀರ್ಮಾನ ಕೈಗೊಳ್ಳಬಹುದು. ಈ ಕ್ರಮದಿಂದ ಹೊಸ ಮುಖಗಳಿಗೆ ಸಂಪುಟದಲ್ಲಿ ಅವಕಾಶ ಸಿಗುವ ನಿರೀಕ್ಷೆಯಿದೆ.

ಹೈಕಮಾಂಡ್ ಭೇಟಿಯ ರಾಜಕೀಯ ಲೆಕ್ಕಾಚಾರ
ಈಗಾಗಲೇ ಸತೀಶ್ ಜಾರಕಿಹೊಳಿ, ಎಂ.ಬಿ. ಪಾಟೀಲ್ ಮತ್ತು ಡಿಕೆ ಶಿವಕುಮಾರ್ ಪ್ರತ್ಯೇಕವಾಗಿ ದಿಲ್ಲಿಗೆ ಭೇಟಿ ನೀಡಿದ ಬೆನ್ನಲ್ಲೇ ಸಿದ್ದರಾಮಯ್ಯ ಅವರ ಭೇಟಿ ರಾಜಕೀಯ ಲೆಕ್ಕಾಚಾರಗಳಿಗೆ ಕಾರಣವಾಗಿದೆ. ಮುಖ್ಯವಾಗಿ, ಖಾಲಿ ಇರುವ ವಿಧಾನ ಪರಿಷತ್ ಸ್ಥಾನಗಳಿಗೆ ನಾಮನಿರ್ದೇಶನ ಬಗ್ಗೆ ಅಂತಿಮ ತೀರ್ಮಾನ ಈ ಭೇಟಿಯ ವೇಳೆ ಕೈಗೊಳ್ಳುವ ಸಾಧ್ಯತೆ ಇದೆ. ಆಕಾಂಕ್ಷಿಗಳ ಪಟ್ಟಿಯಲ್ಲಿ ಬಿ.ಎಲ್. ಶಂಕರ್, ವಿ.ಎಸ್. ಉಗ್ರಪ್ಪ ಮುಂತಾದವರು ಮುಂಚೂಣಿಯಲ್ಲಿದ್ದಾರೆ.

ಹನಿಟ್ರ್ಯಾಪ್ ವಿವಾದ: ಹೈಕಮಾಂಡ್‌ ನಲ್ಲಿ ಚರ್ಚೆ
ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಸಚಿವ ಕೆ.ಎನ್. ರಾಜಣ್ಣ ವಿರುದ್ಧದ ಹನಿಟ್ರ್ಯಾಪ್ ಯತ್ನ ಪ್ರಕರಣದ ಬಗ್ಗೆ ಸಿಎಂ ಅವರು ಹೈಕಮಾಂಡ್‌ ಗೆ ವಿವರ ನೀಡುವ ಸಾಧ್ಯತೆ ಇದೆ. ಇತ್ತೀಚೆಗೆ ಸಚಿವ ಸತೀಶ್ ಜಾರಕಿಹೊಳಿ ಈ ವಿಚಾರದಲ್ಲಿ ಹೈಕಮಾಂಡ್ ಗಮನ ಸೆಳೆದಿದ್ದರು. ಪಕ್ಷದ ಒಳಗಡೆ ಚರ್ಚಿಸಬೇಕಾದ ವಿಷಯವನ್ನು ವಿಧಾನಸಭೆಯಲ್ಲಿ ಪ್ರಸ್ತಾಪಿಸಿರುವುದಕ್ಕೆ ಹೈಕಮಾಂಡ್ ಅಸಮಾಧಾನ ವ್ಯಕ್ತಪಡಿಸಿವೆ ಎಂದು ಮೂಲಗಳು ತಿಳಿಸಿವೆ.

ಸಚಿವ ಸಂಪುಟ ಪುನರ್ ರಚನೆ : ಸಿಎಂ ಭವಿಷ್ಯ ನಿಗದಿಯಾಗಬಹುದಾ?
ಮೇ 20ರಂದು ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರಕ್ಕೆ ಎರಡು ವರ್ಷ ತುಂಬಲಿದ್ದು, ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆ ಸಾಧ್ಯತೆ ಇದೆ. ಹೈಕಮಾಂಡ್‌ ಈ ನಿರ್ಧಾರಕ್ಕೆ ಒಪ್ಪಿಕೊಂಡರೆ, ಸಿದ್ದರಾಮಯ್ಯ ಅವರ ಮುಂದಿನ ಅಧಿಕಾರ ಗದ್ದುಗೆ ಗಟ್ಟಿ ಎನ್ನಬಹುದು. ಇಲ್ಲವಾದರೆ, “ಅಧಿಕಾರ ಹಸ್ತಾಂತರ” ಚರ್ಚೆಗೆ ಪುನರ್ಜೀವ ಸಿಗಲಿದೆ, ಇದು ಡಿಕೆಶಿ ಬಣಕ್ಕೆ ಬಲ ನೀಡುವ ಸಾಧ್ಯತೆ ಇದೆ.

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಚರ್ಚೆ ಮತ್ತೆ ಜೀವಂತ?
ಸಿಎಂ ಬಣದಿಂದ ನಿರಂತರ ಕೇಳಿಬರುತ್ತಿರುವ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಪ್ರಸ್ತಾಪ, ಸಿದ್ದರಾಮಯ್ಯ ಅವರ ದಿಲ್ಲಿ ಭೇಟಿಯಿಂದ ಮತ್ತಷ್ಟು ಗಟ್ಟಿ ಆಗುವ ಸಾಧ್ಯತೆ ಇದೆ. ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ, ಸಿಎಂ ಹೈಕಮಾಂಡ್ ಮುಂದೆ ಈ ಪ್ರಸ್ತಾಪವನ್ನು ಇಡಲಿದ್ದಾರೆ ಎನ್ನಲಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

“ನನಗೆ ಸ್ವಲ್ಪ ವಿಷ ಕೊಡಿ” ಎಂದು ಕೋರ್ಟ್ ನಲ್ಲಿ ಕಣ್ಣೀರಿಟ್ಟ ದರ್ಶನ್

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್, ಮಂಗಳವಾರ ಬೆಂಗಳೂರಿನ ಕೋರ್ಟ್‌ನಲ್ಲಿ ಮನವಿಯೊಂದನ್ನು ಮಾಡಿದ್ದಾರೆ.

‘ಸು ಫ್ರಮ್‌ ಸೋʼ ಚಿತ್ರ ಒಟಿಟಿಗೆ ಲಗ್ಗೆ: 7 ನಿಮಿಷಗಳ ದೃಶ್ಯಕ್ಕೆ ಕತ್ತರಿ?

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಈ ವರ್ಷ ದೊಡ್ಡ ಹಿಟ್ ಆಗಿ ಹೊರಹೊಮ್ಮಿದ ಹಾರರ್-ಕಾಮಿಡಿ ʼಸು ಫ್ರಮ್ ಸೋʼ ಈಗ ಒಟಿಟಿಗೆ ಬಂದಿದೆ. ಥಿಯೇಟರ್‌ಗಳಲ್ಲಿ 45 ದಿನಗಳ ಯಶಸ್ವಿ ಪ್ರದರ್ಶನದ ಬಳಿಕ, ಈ ಚಿತ್ರ ಇಂದು (ಸೆಪ್ಟೆಂಬರ್ 9) ಜಿಯೋ ಸಿನಿಮಾ ಒಟಿಟಿ ಪ್ಲಾಟ್‌ಫಾರ್ಮ್‌ನಲ್ಲಿ ಪ್ರಸಾರ ಆರಂಭಿಸಿದೆ.

ಬಜಗೋಳಿ ವಲಯ ಮಟ್ಟದ ಕ್ರೀಡಾಕೂಟ: ಇರ್ವತ್ತೂರು ಶಾಲೆಗೆ ನಾಲ್ಕು ಪ್ರಥಮ ಪ್ರಶಸ್ತಿಗಳು

ಬಜಗೋಳಿ ವಲಯ ಮಟ್ಟದ 14 ವರ್ಷದೊಳಗಿನ ಬಾಲಕ-ಬಾಲಕಿಯರ ವಾಲಿಬಾಲ್ ಮತ್ತು ತ್ರೋಬಾಲ್ ಪಂದ್ಯಾಟದಲ್ಲಿ ಇರ್ವತ್ತೂರು ಶಾಲೆಯು ಭರ್ಜರಿ ಸಾಧನೆ ಮಾಡಿದೆ. ಸ್ಪರ್ಧಿಸಿದ ನಾಲ್ಕೂ ವಿಭಾಗಗಳಲ್ಲಿ ಪ್ರಥಮ ಪ್ರಶಸ್ತಿಗಳನ್ನು ಗೆಲ್ಲುವ ಮೂಲಕ ಶಾಲೆಯು ಹೊಸ ದಾಖಲೆಯನ್ನು ನಿರ್ಮಿಸಿದೆ.

ದಿನ ವಿಶೇಷ – ಕ್ಯಾಪ್ಟನ್ ವಿಕ್ರಮ್ ಬತ್ರಾ ಜನ್ಮದಿನ

ನಮ್ಮ ದೇಶದ ಇತಿಹಾಸದಲ್ಲಿ ದೇಶಭಕ್ತಿ ಮತ್ತು ಧೈರ್ಯದ ಸಂಕೇತವಾಗಿ ನಿಂತಿರುವ ಹೆಸರುಗಳಲ್ಲಿ ಕ್ಯಾಪ್ಟನ್ ವಿಕ್ರಮ್ ಬತ್ರಾ ಅವರದ್ದು ಅಮರ