spot_img

ಮಹದಾಯಿ ವಿಚಾರದಲ್ಲಿ ಶೂನ್ಯ ಸಾಧನೆ ಮುಚ್ಚಿ ಹಾಕಲು ಸಿದ್ದರಾಮಯ್ಯ ಯತ್ನ: ಪ್ರಹ್ಲಾದ ಜೋಶಿ ವಾಗ್ದಾಳಿ

Date:

spot_img

ಹುಬ್ಬಳ್ಳಿ: ಮಹದಾಯಿ ವಿಚಾರವನ್ನು ಮುಂದೆ ತಳ್ಳುವ ಮೂಲಕ ತನ್ನ ಶೂನ್ಯ ಸಾಧನೆ ಮುಚ್ಚಿಹಾಕಲು ಸಿದ್ದರಾಮಯ್ಯ ಯತ್ನಿಸುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಗಂಭೀರ ಆರೋಪ ಮಾಡಿದ್ದಾರೆ. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮಹದಾಯಿ ಯೋಜನೆಗೆ ಡಿಪಿಆರ್ ಮಂಜೂರಾತಿ ನೀಡಿದ್ದು ಬಿಜೆಪಿ ಸರ್ಕಾರ. ಆದರೆ ಕಾಂಗ್ರೆಸ್ ಸರ್ಕಾರ ಗೋವಾ ವಿರುದ್ಧ ನ್ಯಾಯಾಲಯಕ್ಕೆ ಹೋಗಿದ್ದು ನೀರಿನ ಸಮಸ್ಯೆ ಪರಿಹಾರಕ್ಕೆಲ್ಲಾ ತೊಂದರೆಯಾಗಿದೆ,” ಎಂದು ಕಿಡಿಕಾರಿದರು.

ಕೆಪಿಎಸ್‌ಸಿ ಪ್ರಾಥಮಿಕ ಪರೀಕ್ಷೆಯಲ್ಲಿ 200 ಪ್ರಶ್ನೆಗಳಲ್ಲಿ 80 ತಪ್ಪುಗಳಿರುವುದಾಗಿ ದೂರಿದ್ದು, “ಅದರ ಬಗ್ಗೆ ಉತ್ತರ ಕೊಡಲಿ ಸಿದ್ದರಾಮಯ್ಯ. ಅವರ ಮಾತುಗಳು ಶುದ್ಧ ಅಯೋಗ್ಯತನ, ನಾಚಿಕೆಯಿಂದ ಹೊರಗಿನ ವ್ಯಾಖ್ಯಾನ,” ಎಂದರು.

“ಪಾಕಿಸ್ತಾನ ಜಿಂದಾಬಾದ್ ಎಂದು ಹೇಳಲು ನೂರಾರು ಕಾರಣಗಳಿವೆ ಎನ್ನುವವರಿಂದ ಜನತೆ ಏನು ನಿರೀಕ್ಷಿಸಬೇಕು? ದೇಶದ ಭದ್ರತೆ ಕುರಿತು ಕೇಂದ್ರ ಸರ್ಕಾರವು ಈಗಾಗಲೇ ರಾಜತಾಂತ್ರಿಕ ಕ್ರಮ ಕೈಗೊಂಡಿದೆ. ಶಾಂತಿಯುತವಾಗಿ ಸಾಗಿದರೆ ದೇಶ ಸುಖವಾಗಿರುತ್ತದೆ,” ಎಂದು ಹೇಳಿದರು.

ಸಚಿವ ಜಮೀರ್ ಅಹ್ಮದ್ ಕುರಿತು ಮಾತನಾಡಿದ ಅವರು, “ಬಾಂಬ್ ಕಟ್ಟಿಕೊಂಡು ಪಾಕಿಸ್ತಾನದ ಮೇಲೆ ದಾಳಿ ಮಾಡುವ ಅವಶ್ಯಕತೆ ಇಲ್ಲ. ಭಾರತದ ಸೈನಿಕರ ಮೇಲೆ ನಂಬಿಕೆ ಇರಲಿ, ಇಂತಹ ಬಾಲಿಶ ಹೇಳಿಕೆಗಳು ಬೇಡ,” ಎಂದು ವ್ಯಂಗ್ಯವಾಡಿದರು.

ಜನಿವಾರ ಕುರಿತ ಘಟನೆಯ ಕುರಿತು ಪ್ರತಿಕ್ರಿಯಿಸುತ್ತಾ, “ಎಲ್ಲಾ ಜನಾಂಗದವರು ಜನಿವಾರ ಹಾಕುತ್ತಾರೆ. ಅದನ್ನು ಬಲವಂತವಾಗಿ ತೆಗೆಸುವುದು ತಪ್ಪು. ಸೂಕ್ತ ತನಿಖೆ ನಡೆಸಲಿ ಸರ್ಕಾರ,” ಎಂದು ಸಲಹೆ ನೀಡಿದರು.

ಇದೆಲ್ಲವನ್ನೂ ಒಂದೆಡೆ ಸೇರಿಸಿ, ಅವರು ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹಿಂದೂ ಸಂಘಟನೆಗಳ ಮೇಲೆ ದೌರ್ಜನ್ಯ ನಡೆಯುವುದು ಸಾಮಾನ್ಯವೆಂದು ಆಕ್ರೋಶ ವ್ಯಕ್ತಪಡಿಸಿದರು. “ಹಳೇ ಹುಬ್ಬಳ್ಳಿಯ ಗಲಭೆಯಲ್ಲಿ ಗಲಭೆಕೋರರನ್ನು ಅಮಾಯಕರೆಂದು ಕೇಸ್ ಹಿಂಪಡೆದಿದೆ . ಹೀಗಾದರೆ ಗಲಭೆ ಕೋರರಿಗೆ ಭಯವೆಲ್ಲಿಂದ ಹುಟ್ಟಬೇಕು?” ಎಂದು ಅವರು ಕಿಡಿಕಾರಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಇನ್ನೋನೆಕ್ಸ್ಟ್ ಏರಿಯನ್ ಭಾರತ್ ಅಸ್ಟ್ರಾನೋಮಿ ಎಕ್ಸ್‌ಪೋ 1.0ಬಾಹ್ಯಾಕಾಶದ ಕೌತುಕ ಕಂಡು ಬೆರಗಾದ ವಿದ್ಯಾರ್ಥಿಗಳು

ಇನ್ನೋನೆಕ್ಸ್ಟ್ ಮೈಂಡ್ ಪ್ರೈವೇಟ್ ಲಿಮಿಟೆಡ್ (ಏರಿಯನ್ ಭಾರತ್) ಆಶ್ರಯದಲ್ಲಿ ಗುರುವಾರ ನಡೆದ ಆಸ್ಟ್ರಾನೊಮಿ ಎಕ್ಸ್‌ಪೋ 1.0ರ ಆವೃತ್ತಿ ನಗರದ ಮಂತ್ರಿ ಮಾಲ್‌ನ ಐನಾಕ್ಸ್‌ ಚಿತ್ರಮಂದಿರಲ್ಲಿ ಗುರುವಾರ ಉದ್ಘಾಟನೆಗೊಂಡಿತು.

ರೋಬೋಟ್ ‘ಶುವಾಂಗ್ ಶುವಾಂಗ್’ ಪದವಿ ಪಡೆದ ವಿಚಿತ್ರ ಘಟನೆ: ಚೀನಾದಲ್ಲಿ ತಾಂತ್ರಿಕ ಕ್ರಾಂತಿ!

ಚೀನಾದ ಫುಜಿಯನ್ ಪ್ರಾಂತ್ಯದ ಶುವಾನ್ಶಿ ಹೈಸ್ಕೂಲ್‌ನಲ್ಲಿ ನಡೆದ ಪದವಿ ಪ್ರದಾನ ಸಮಾರಂಭವೊಂದು ವಿಶಿಷ್ಟ ಘಟನೆಗೆ ಸಾಕ್ಷಿಯಾಗಿದೆ. "ಶುವಾಂಗ್ ಶುವಾಂಗ್" ಹೆಸರಿನ ಮಾನವಾಕಾರದ ರೋಬೋಟ್ ಒಂದು ಸಮಾರಂಭದಲ್ಲಿ ಭಾಗವಹಿಸಿ, ವೇದಿಕೆಗೆ ನಡೆದು, ಶಿಕ್ಷಕರಿಂದ ಕೈಚಲಾವಣೆ ಮೂಲಕ ಪ್ರಮಾಣಪತ್ರ ಸ್ವೀಕರಿಸಿತು.

ಹಲಸಿನ ಹಣ್ಣು ತಿಂದು ಬ್ರೀಥಲೈಸರ್‌ನಲ್ಲಿ ಫೇಲ್: ಕೇರಳದಲ್ಲಿ ಅಚ್ಚರಿಯ ಘಟನೆ!

ಮದ್ಯಪಾನ ಮಾಡದಿದ್ದರೂ, ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್‌ಆರ್‌ಟಿಸಿ) ಮೂವರು ಬಸ್ ಚಾಲಕರು ಬ್ರೀಥಲೈಸರ್ ಪರೀಕ್ಷೆಯಲ್ಲಿ ವಿಫಲರಾಗಿ, ಕುಡಿದು ವಾಹನ ಚಲಾಯಿಸಿದ್ದಕ್ಕಾಗಿ ಪ್ರಕರಣ ದಾಖಲಾಗಿರುವ ವಿಚಿತ್ರ ಘಟನೆ ವರದಿಯಾಗಿದೆ.

ದಿನ ವಿಶೇಷ – ವಿಶ್ವ ಐವಿಎಫ್ ದಿನ

ಈ ದಿನವು ಸಂತಾನೋತ್ಪತ್ತಿ ವಿಜ್ಞಾನದಲ್ಲಿನ ಮಹತ್ವದ ಮೈಲಿಗಲ್ಲನ್ನು ಗುರುತಿಸುತ್ತದೆ ಮತ್ತು ಬಂಜೆತನದಿಂದ ಬಳಲುತ್ತಿರುವ ಅಸಂಖ್ಯಾತ ದಂಪತಿಗಳಿಗೆ ಆಶಯದ ದಾರಿಯನ್ನು ತೆರೆದ ಐವಿಎಫ್ ತಂತ್ರಜ್ಞಾನದ ಪ್ರಗತಿಯನ್ನು ಸ್ಮರಿಸುತ್ತದೆ