ಸೈದ್ಧಾಂತಿಕ ಸಮರ: ಆರ್‌ಎಸ್‌ಎಸ್ ಕಡೆ ತಲೆಹಾಕಿ ಮಲಗಲ್ಲ ಎಂದ ಸಿಎಂ ಸಿದ್ದರಾಮಯ್ಯ!

Date:

spot_img

ರಾಜ್ಯ ರಾಜಕಾರಣದ ಇತಿಹಾಸದಲ್ಲಿ ಸದಾ ಸೈದ್ಧಾಂತಿಕ ಸಂಘರ್ಷಕ್ಕೆ ಹೆಸರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಮತ್ತೊಮ್ಮೆ ಬಿಜೆಪಿ ಹಾಗೂ ಆರ್‌ಎಸ್‌ಎಸ್ ವಿರುದ್ಧ ಗುಡುಗಿದ್ದಾರೆ. ವಿಧಾನ ಪರಿಷತ್ ಕಲಾಪದ ವೇಳೆ ನಡೆದ ಸ್ವಾರಸ್ಯಕರ ಹಾಗೂ ಜಿದ್ದಾಜಿದ್ದಿನ ಚರ್ಚೆಯಲ್ಲಿ, ತಮ್ಮ ರಾಜಕೀಯ ನಿಲುವನ್ನು ಅವರು ಅತ್ಯಂತ ಸ್ಪಷ್ಟವಾಗಿ ಪುನರುಚ್ಚರಿಸಿದ್ದಾರೆ.

ರಾಜ್ಯಪಾಲರ ಭಾಷಣಕ್ಕೆ ವಂದನೆ ಸಲ್ಲಿಸುವ ನಿರ್ಣಯದ ಮೇಲಿನ ಚರ್ಚೆಗೆ ಉತ್ತರ ನೀಡುತ್ತಿದ್ದ ವೇಳೆ, ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹಾಗೂ ಸಿಎಂ ನಡುವೆ ವಾಕ್ಸಮರ ನಡೆಯಿತು. ನಾರಾಯಣಸ್ವಾಮಿ ಅವರು ಸಿಎಂ ಭಾಷಣಕ್ಕೆ ಅಡ್ಡಿಪಡಿಸಿದಾಗ, “ನೀವು ನಮ್ಮ ಕಡೆ ಬನ್ನಿ, ಚರ್ಚಿಸೋಣ” ಎಂದು ಸಿದ್ದರಾಮಯ್ಯ ನಗುತ್ತಲೇ ಆಹ್ವಾನ ನೀಡಿದರು. ಇದಕ್ಕೆ ಪ್ರತಿಯಾಗಿ ನಾರಾಯಣಸ್ವಾಮಿ ಅವರು “ನಾನು ನಿಮ್ಮ ಕಡೆ ಬರುವುದಿಲ್ಲ” ಎಂದು ನಿರಾಕರಿಸಿದರು. ಈ ವೇಳೆ ಮಧ್ಯಪ್ರವೇಶಿಸಿದ ಬಿಜೆಪಿ ಸದಸ್ಯ ಎನ್. ರವಿಕುಮಾರ್, “ನೀವೇ ಬಿಜೆಪಿಗೆ ಬನ್ನಿ, ಅಲ್ಲಿ ನಿಮಗೆ ತೊಂದರೆ ನೀಡುತ್ತಿದ್ದಾರೆ” ಎಂದು ಸಿಎಂಗೆ ಆಹ್ವಾನ ನೀಡಿದರು.

ಈ ಆಹ್ವಾನಕ್ಕೆ ಖಡಕ್ ಆಗಿ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, “ನಾನು ಆರ್‌ಎಸ್‌ಎಸ್ ಮತ್ತು ಬಿಜೆಪಿಯ ತತ್ವ-ಸಿದ್ಧಾಂತಗಳನ್ನು ಮೊದಲಿನಿಂದಲೂ ವಿರೋಧಿಸುತ್ತಾ ಬಂದವನು. ನನ್ನ ಜೀವಮಾನದಲ್ಲಿ ಆ ಕಡೆ ತಲೆಹಾಕಿ ಮಲಗುವ ಪ್ರಶ್ನೆಯೇ ಇಲ್ಲ” ಎಂದು ಸಾರಿದರು. ಬಿಜೆಪಿ ದಲಿತರು, ಮಹಿಳೆಯರು ಮತ್ತು ಹಿಂದುಳಿದ ವರ್ಗಗಳ ವಿರೋಧಿ ಧೋರಣೆ ಹೊಂದಿದೆ ಎಂದು ಆರೋಪಿಸಿದ ಅವರು, ಅಲ್ಲಿ ಸಾಮಾಜಿಕ ನ್ಯಾಯಕ್ಕೆ ಬೆಲೆ ಇಲ್ಲ ಎಂದು ಟೀಕಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

ನೀಟ್ ಹಗರಣ: ಸೋನಂ ವಾಂಗ್ಚುಕ್ ಉಪವಾಸ ಅಂತ್ಯಕ್ಕೆ 3 ಷರತ್ತು

ನೀಟ್ ಪತ್ರಿಕೆ ಸೋರಿಕೆ ಖಂಡಿಸಿ ಉಪವಾಸ ನಿರತರಾಗಿರುವ ಸೋನಂ ವಾಂಗ್ಚುಕ್ ಸತ್ಯಾಗ್ರಹ ಅಂತ್ಯಗೊಳಿಸಲು 3 ಪ್ರಮುಖ ಷರತ್ತು ವಿಧಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಆತ್ರಾಡಿ ಶಾಂಭವಿ ಹೋಟೆಲ್ ಆಟಿ ಆಹಾರ ಉತ್ಸವ

ಉಡುಪಿಯ ಶಾಂಭವಿ ಹೋಟೆಲ್‌ನಲ್ಲಿ ಜುಲೈ 24 ರಿಂದ ಸಾಂಪ್ರದಾಯಿಕ 'ಆಟಿ ದ ಒಂಜಿ ಊಟ' ಆಹಾರ ಉತ್ಸವ ಆರಂಭವಾಗಲಿದ್ದು, ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಪರ್ಕಳ ಶಿಶು ಸ್ಪರ್ಧೆ ಮತ್ತು ತಾಯಿ ಮಗುವಿನ ಆರೋಗ್ಯ ಶಿಬಿರ 2026

ಪರ್ಕಳದಲ್ಲಿ ನಡೆದ ತಾಯಿ-ಮಗುವಿನ ಆರೋಗ್ಯ ಮಾಹಿತಿ ಕಾರ್ಯಕ್ರಮ ಹಾಗೂ ಮಕ್ಕಳ ಶಿಶು ಸ್ಪರ್ಧೆ 2026 ರ ಪೂರ್ಣ ಮಾಹಿತಿ ಇಲ್ಲಿದೆ ಓದಿ.