ಸಿದ್ದರಾಮಯ್ಯ ಹೇಳಿಕೆಗೆ ಪಾಕಿಸ್ತಾನದ ಮಾಧ್ಯಮಗಳಲ್ಲಿ ಚರ್ಚೆ: ಯಡಿಯೂರಪ್ಪ, ವಿಜಯೇಂದ್ರ ಆಕ್ರೋಶ

Date:

spot_img

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ “ಪಾಕಿಸ್ತಾನದ ವಿರುದ್ಧ ಯುದ್ಧ ಬೇಡ” ಎಂಬ ಹೇಳಿಕೆ ಪಾಕಿಸ್ತಾನದ ಮಾಧ್ಯಮಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಈ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, “ಕಾಶ್ಮೀರದಲ್ಲಿ ಭಯೋತ್ಪಾದಕರ ದಾಳಿ ನಡೆದಿರುವ ಈ ಸಮಯದಲ್ಲಿ ಎಲ್ಲರೂ ಒಗ್ಗಟ್ಟಾಗಿ ನಿಲ್ಲಬೇಕಿತ್ತು. ಸಿದ್ದರಾಮಯ್ಯನವರ ಬಾಲಿಶ ಹೇಳಿಕೆ ಖಂಡನೀಯ. ದೇಶದ ಜನರ ಕ್ಷಮೆ ಕೇಳಿ, ತಮ್ಮ ನಡವಳಿಕೆಯನ್ನು ತಿದ್ದಿಕೊಳ್ಳಬೇಕು,” ಎಂದು ಹೇಳಿದ್ದಾರೆ.

ವಿಜಯೇಂದ್ರ ಕೂಡ ಸಿದ್ದರಾಮಯ್ಯನವರನ್ನು ಆಕ್ರೋಶಭರಿತವಾಗಿ ಟೀಕಿಸಿ, “ಅಲ್ಪಸಂಖ್ಯಾತರ ಓಲೈಕೆಗಾಗಿ ಸಿದ್ದರಾಮಯ್ಯ ಈ ಮಟ್ಟಕ್ಕೂ ಇಳಿದಿದ್ದಾರೆ. ಪಾಕಿಸ್ತಾನದ ಪರವಾಗಿ ಮಾತನಾಡುತ್ತಿರುವ ರೀತಿಯಿಂದ ಪಾಕಿಸ್ತಾನದಲ್ಲಿ ಇವರ ಹೆಸರಿನಲ್ಲಿ ಮಸೀದಿ ಕಟ್ಟಿದರೆ ಆಶ್ಚರ್ಯವಿಲ್ಲ,” ಎಂದು ಹರಿಹಾಯ್ದಿದ್ದಾರೆ.

ಅವರು ಮುಂದುವರೆದು, “ಕಾಶ್ಮೀರದಲ್ಲಿ ಭಯೋತ್ಪಾದಕರ ದಾಳಿಯನ್ನು ಜಗತ್ತೇ ಖಂಡಿಸುತ್ತಿದೆ. ಈ ಸಂದರ್ಭದಲ್ಲಿ ಪಾಕಿಸ್ತಾನದ ಪರವಾಗಿ ನಿಲ್ಲುವುದು ರಾಷ್ಟ್ರದ್ರೋಹಕ್ಕೆ ಸಮಾನ. ಸಿದ್ದರಾಮಯ್ಯ ತಕ್ಷಣ ಕ್ಷಮೆ ಕೇಳಬೇಕು,” ಎಂದು ಆಗ್ರಹಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.