spot_img

ಉಡುಪಿ ಶ್ರೀ ಕೃಷ್ಣಮಠದಲ್ಲಿ ಚಾಂದ್ರ ಶ್ರೀಕೃಷ್ಣಾಷ್ಟಮಿ ಸರಳ ಆಚರಣೆ

Date:

spot_img

ಉಡುಪಿ : ಚಾಂದ್ರ ಶ್ರೀಕೃಷ್ಣಾಷ್ಟಮಿಯ ಅಂಗವಾಗಿ ಇಂದು ಉಡುಪಿಯ ಶ್ರೀ ಕೃಷ್ಣಮಠದಲ್ಲಿ ಸಾಮೂಹಿಕವಾಗಿ ಶ್ರೀ ಕೃಷ್ಣ ಮಂತ್ರ ಜಪ ಪಠನ ಹಾಗೂ ಭೋಜನ ಪ್ರಸಾದ ವಿತರಣೆಯು ಸರಳವಾಗಿ ನಡೆಯಲಿದೆ.

ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು, ಕಿರಿಯ ಯತಿ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು, ಮತ್ತು ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ಖಜಾಂಚಿ ಶ್ರೀ ಸ್ವಾಮಿ ಗೋವಿಂದದೇವ್ ಗಿರಿ ಮಹಾರಾಜ್ ಅವರ ಉಪಸ್ಥಿತಿಯಲ್ಲಿ ಆ.15ರಂದು ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಬೆಳಗ್ಗೆ 11.15ರಿಂದ ಮಧ್ಯಾಹ್ನ 12.15ರವರೆಗೆ ಸಾಮೂಹಿಕ 1008 ಬಾರಿ ಶ್ರೀ ಕೃಷ್ಣ ಮಂತ್ರ ಜಪ ಪಠನ ಹಾಗೂ ಭೋಜನ ಪ್ರಸಾದ ವಿತರಣೆ ನಡೆಯಲಿದೆ. 

ಇದೇ ವೇಳೆ, ಪರಂಪರೆಯಂತೆ ಸೌರಮಾನ ಪದ್ಧತಿಯ ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಲೀಲೋತ್ಸವ (ವಿಟ್ಲಪಿಂಡಿ ಉತ್ಸವ)ವು ಸೆಪ್ಟೆಂಬರ್ 14 ಮತ್ತು 15 ರಂದು ನಡೆಯಲಿದೆ. ಈ ಸಂದರ್ಭದಲ್ಲಿ ಹುಲಿವೇಷ ಮತ್ತು ಮೊಸರು ಕುಡಿಕೆ ಸೇರಿದಂತೆ ವಿವಿಧ ಧಾರ್ಮಿಕ ಆಚರಣೆಗಳೊಂದಿಗೆ ವಿಜೃಂಭಣೆಯಿಂದ ಉತ್ಸವವನ್ನು ಆಚರಿಸಲಾಗುವುದು ಎಂದು ಶ್ರೀ ಮಠದ ಪ್ರಕಟಣೆ ತಿಳಿಸಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಧರ್ಮಸ್ಥಳ ಪ್ರಕರಣ : ರಾಜ್ಯ ಮಹಿಳಾ ಆಯೋಗದಿಂದ ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ಕಮಿಷನರ್ ಗೆ ಪತ್ರ

ರಾಜ್ಯಾದ್ಯಂತ ಗಮನ ಸೆಳೆದಿದ್ದ ಧರ್ಮಸ್ಥಳದಲ್ಲಿ ಶವಗಳನ್ನು ಹೂತಿರುವ ಪ್ರಕರಣದ ತನಿಖೆ ಅಂತಿಮ ಹಂತದಲ್ಲಿರುವಾಗಲೇ, ರಾಜ್ಯ ಮಹಿಳಾ ಆಯೋಗವು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಕಮಿಷನರ್ ಅವರಿಗೆ ಪತ್ರ ಬರೆದಿದೆ.

ಬೆಳ್ತಂಗಡಿ: ನಕಲಿ ನಂಬರ್ ಪ್ಲೇಟ್ ಕಾರಿನಲ್ಲಿ ಅಕ್ರಮ ಗೋ ಸಾಗಾಟ; ಓರ್ವನ ಬಂಧನ

ನಕಲಿ ನಂಬರ್ ಪ್ಲೇಟ್ ಅಳವಡಿಸಿದ ಕಾರಿನಲ್ಲಿ ಮೂರು ದನಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಪ್ರಕರಣ ಗುರುವಾಯನಕೆರೆಯಲ್ಲಿ ಬೆಳಕಿಗೆ ಬಂದಿದೆ.

ಮೂಡಬಿದ್ರೆಯ ಬಸ್ಸಿನಲ್ಲಿ ಕಾಮುಕನಿಂದ ಹೆಣ್ಣು ಮಕ್ಕಳಿಗೆ ಕಿರುಕುಳ ಸುಮೋಟ ಕೇಸು ದಾಖಲಿಸುವಂತೆ ಆಗ್ರಹ : ಶ್ರೀಮತಿ ರಮಿತಾ ಶೈಲೇಂದ್ರ

ಮೂಡಬಿದ್ರೆಯ ಬಸ್ಸಿನಲ್ಲಿ ಕಾಮುಕನಿಂದ ಹೆಣ್ಣು ಮಕ್ಕಳಿಗೆ ಕಿರುಕುಳ ಸುಮೋಟ ಕೇಸು ದಾಖಲಿಸುವಂತೆ ಶ್ರೀಮತಿ ರಮಿತಾ ಶೈಲೇಂದ್ರ ಆಗ್ರಹಿಸಿದ್ದಾರೆ.

‘ಹರ್ ಘರ್ ತಿರಂಗಾ’ ಅಭಿಯಾನ: ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದಿಂದ ‘ತಿರಂಗಾ ದ್ವಿಚಕ್ರ ವಾಹನ ಜಾಥಾ’

79ನೇ ಸ್ವಾತಂತ್ರ್ಯ ದಿನಾಚರಣೆಯ 'ಹರ್ ಘರ್ ತಿರಂಗಾ' ಅಭಿಯಾನದ ಅಂಗವಾಗಿ ಆ.14ರಂದು ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ 'ತಿರಂಗಾ ದ್ವಿಚಕ್ರ ವಾಹನ ಜಾಥಾ' ನಡೆಯಿತು.