spot_img

ಬ್ರಹ್ಮಾವರದ ಹಸುವಿನ ರುಂಡ ಪತ್ತೆ ಪ್ರಕರಣದಲ್ಲಿ ಆರು ಆರೋಪಿಗಳ ಬಂಧನ – ಮತ್ತೊಬ್ಬನಿಗಾಗಿ ಹುಡುಕಾಟ

Date:

spot_img

ಉಡುಪಿ : ಬ್ರಹ್ಮಾವರ ತಾಲೂಕಿನ ಕುಂಜಾಲು ಗ್ರಾಮದಲ್ಲಿ ಶನಿವಾರ ತಡರಾತ್ರಿ ಪತ್ತೆಯಾದ ಹಸುವಿನ ರುಂಡ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿಯನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದು, ಮತ್ತೊಬ್ಬ ಆರೋಪಿ ಪರಾರಿಯಾಗಿದ್ದಾನೆ.

ಬಂಧಿತರು:
ಈ ಪ್ರಕರಣದಲ್ಲಿ ಕೇಶವ್ ರಾಮಣ್ಣ, ನವೀನ್, ಪ್ರಸಾದ್, ರಾಜೇಶ್, ಸಂದೇಶ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ರಾಮಣ್ಣಎಂಬುವವನು ಪ್ರಮುಖ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣದ ಹಿನ್ನೆಲೆ:
ಜೂನ್ 29ರಂದು ರಾತ್ರಿ ಕುಂಜಾಲು ರಾಮ ಮಂದಿರದ ಬಳಿ ಹಸುವಿನ ತಲೆಯ ಭಾಗ (ರುಂಡ) ಪತ್ತೆಯಾದ ನಂತರ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತಕ್ಷಣವೇ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ನೇತೃತ್ವದಲ್ಲಿ ನಾಲ್ಕು ತನಿಖಾ ತಂಡಗಳನ್ನು ರಚಿಸಲಾಯಿತು.

ತೀವ್ರ ತನಿಖೆಯಿಂದ 24 ಗಂಟೆಯೊಳಗೆ ಬಂಧನ:
ಘಟನೆಯ ನಂತರ ಕೇವಲ 24 ಗಂಟೆಯೊಳಗೆ ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸಲಾಗಿದೆ. ಪ್ರಕರಣದ ಪ್ರಾಥಮಿಕ ತನಿಖೆಯಲ್ಲಿ ಸಂಶಯಿತರು ಕ್ಯಾರಿ ಬಳಿಯ ಪ್ರದೇಶದಲ್ಲಿ ಹಸುವನ್ನು ಕಡಿದು, ಅದರ ದೇಹವನ್ನು ಸ್ಕೂಟರ್ ಮತ್ತು ಕಾರುಗಳ ಮೂಲಕ ಸ್ಥಳಾಂತರಿಸುತ್ತಿದ್ದ ಸಂದರ್ಭ ತಲೆಯ ಭಾಗ ರಸ್ತೆಗೆ ಬಿದ್ದಿದೆ ಎಂಬುದು ತಿಳಿದು ಬಂದಿದೆ.

ಸಾಕ್ಷ್ಯ ವಶಕ್ಕೆ:
ಅವರು ಬಳಸಿದ ಸ್ವಿಫ್ಟ್ ಕಾರು ಮತ್ತು ಸ್ಕೂಟರ್‌ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಸು ಸಾಗಾಣಿಕೆಗೆ ಬಳಸಿದ ವಾಹನಗಳ ಮೇಲೆ ತಾಂತ್ರಿಕ ಪರಿಶೀಲನೆ ನಡೆಯುತ್ತಿದೆ.

ಪೊಲೀಸರ ಎಚ್ಚರಿಕೆ:
ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಕೋಮು ಭಾವನೆ ಉಂಟುಮಾಡುವ ಪೋಸ್ಟ್‌ಗಳನ್ನು ಮಾಡಬಾರದು ಎಂದು ಎಸ್‌ಪಿ ಎಚ್ಚರಿಕೆ ನೀಡಿದ್ದಾರೆ. “ಕರಾವಳಿಯಲ್ಲಿ ಈ ರೀತಿಯ ಘಟನೆಗಳನ್ನು ಕೊಲೆ ಪ್ರಕರಣದಷ್ಟೇ ಗಂಭೀರವಾಗಿ ಪರಿಗಣಿಸುತ್ತೇವೆ,” ಎಂದು ಅವರು ತೀವ್ರ ಸಂದೇಶ ನೀಡಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ಸದ್ಭಾವನಾ ದಿವಸ್

ಇಂದು ದೇಶಾದ್ಯಂತ ಶಾಂತಿ, ಸೌಹಾರ್ದತೆ ಮತ್ತು ರಾಷ್ಟ್ರೀಯ ಏಕತೆಯ ಮಹತ್ವವನ್ನು ಎತ್ತಿ ಹಿಡಿಯುವ ಸದ್ಭಾವನಾ ದಿವಸವನ್ನು ಆಚರಿಸಲಾಗುತ್ತದೆ

1995 ರ ನಂತರದ ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳನ್ನು ಅನುದಾನಕ್ಕೆ ಒಳಪಡಿಸಲು ಗಮನ ಸೆಳೆಯುವ ಸೂಚನೆ ಮಂಡಿಸಿ ಯಶಸ್ವಿಯಾದ ವಿ ಪ ಸದಸ್ಯ ಶಶೀಲ್ ಜಿ ನಮೋಶಿ

1995 ರಿಂದ ಪ್ರಾರಂಭವಾದ ಕನ್ನಡ ಮಾಧ್ಯಮದ ಅನುದಾನ ರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಅನುದಾನ ನೀಡಬೇಕು ಎಂದು ಗಮನ ಸೆಳೆಯುವ ಸೂಚನೆ ಮಂಡಿಸಿ ಶಿಕ್ಷಣ ಸಚಿವ ಮಧು ಬಂಗಾರಪ್ಪನವರಿಂದ ಅನುದಾನ ನೀಡುವ ಭರವಸೆ ಪಡೆಯುವಲ್ಲಿ ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ ನಮೋಶಿ ಯಶಸ್ವಿಯಾದರು.

ಸುಂಟರಗಾಳಿ ಮತ್ತು ಅತಿಯಾದ ಮಳೆಯಿಂದ ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಆದ ಹಾನಿಗೆ ತುರ್ತು ಪರಿಹಾರ ಒದಗಿಸುವಂತೆ ಸರ್ಕಾರಕ್ಕೆ ವಿ ಸುನಿಲ್‌ ಕುಮಾರ್ ಮನವಿ‌

ಸುಂಟರಗಾಳಿ ಮತ್ತು ಅತಿಯಾದ ಮಳೆಯಿಂದ ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಆದ ಹಾನಿಗೆ ತುರ್ತು ಪರಿಹಾರ ಒದಗಿಸುವಂತೆ ಸರ್ಕಾರಕ್ಕೆ ವಿ ಸುನಿಲ್‌ ಕುಮಾರ್ ಮನವಿ‌ ಮಾಡಿದ್ದಾರೆ.

ಹೈಪೊಗ್ಲಿಸಿಮಿಯಾ: ಹಠಾತ್ ರಕ್ತದ ಸಕ್ಕರೆ ಇಳಿಕೆ ಅತ್ಯಂತ ಅಪಾಯಕಾರಿ – ತಜ್ಞರ ಎಚ್ಚರಿಕೆ

ಇದ್ದಕ್ಕಿದ್ದಂತೆ ರಕ್ತದಲ್ಲಿ ಸಕ್ಕರೆಯ ಪ್ರಮಾಣ ನಿಯಮಿತ ಮಟ್ಟಕ್ಕಿಂತಲೂ ಕಡಿಮೆಯಾದರೆ ಅದು ಹೆಚ್ಚು ಅಪಾಯಕಾರಿ ಎನ್ನುತ್ತಾರೆ ಆರೋಗ್ಯ ತಜ್ಞರು.