
ಉಡುಪಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ), ಉಡುಪಿ ತಾಲೂಕಿನ ಜ್ಞಾನ ವಿಕಾಸ ಯೋಜನೆಯ ‘ವಾತ್ಸಲ್ಯ’ ಕಾರ್ಯಕ್ರಮದಡಿಯಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ ಕಿಟ್ ವಿತರಣಾ ಕಾರ್ಯಕ್ರಮ ನಡೆಯಿತು.
ತಾಲೂಕಿನ ಒಟ್ಟು 8 ವಾತ್ಸಲ್ಯ ಫಲಾನುಭವಿಗಳಿಗೆ ದಿನಬಳಕೆಯ ಅಗತ್ಯ ವಸ್ತುಗಳನ್ನೊಳಗೊಂಡ ಕಿಟ್ ಮಂಜೂರಾಗಿದ್ದು, ಅಂಬಲಪಾಡಿಯ ನಿವಾಸಿ ಗಂಗಾ ಆಚಾರ್ತಿಯವರಿಗೆ ತಾಲೂಕು ಯೋಜನಾಧಿಕಾರಿ ಸುರೇಂದ್ರ ನಾಯ್ಕ್ ಅವರು ಕಿಟ್ಟನ್ನು ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಒಕ್ಕೂಟದ ಕೇಂದ್ರ ಸಮಿತಿಯ ಅಧ್ಯಕ್ಷರಾದ ಸುಂದರ ಜೆ. ಕಲ್ಮಾಡಿ, ಜ್ಞಾನವಿಕಾಸ ಸಮನ್ವಯಾಧಿಕಾರಿ ಪೂರ್ಣಿಮಾ, ವಲಯ ಮೇಲ್ವಿಚಾರಕಿ ಪ್ರೇಮ ಹಾಗೂ ಸೇವಾ ಪ್ರತಿನಿಧಿ ಉಷಾ ಉಪಸ್ಥಿತರಿದ್ದು, ಯೋಜನೆಯ ಸದುಪಯೋಗದ ಕುರಿತು ಮಾಹಿತಿ ನೀಡಿದರು.






































