spot_img

ಹೃದಯಾಘಾತ ಪ್ರಕರಣಗಳ ಏರಿಕೆಗೆ ಧೂಮಪಾನವೇ ಪ್ರಮುಖ ಕಾರಣ – ತಜ್ಞರ ಅಧ್ಯಯನ ವರದಿ!

Date:

ಬೆಂಗಳೂರು : ರಾಜ್ಯದಲ್ಲಿ ಇತ್ತೀಚೆಗೆ ಹೆಚ್ಚುತ್ತಿರುವ ಹಠಾತ್ ಹೃದಯಾಘಾತ ಪ್ರಕರಣಗಳ ಕುರಿತು ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ. ಕೆ.ಎಸ್. ರವೀಂದ್ರನಾಥ್ ನೇತೃತ್ವದ 12 ತಜ್ಞರ ತಂಡವು ನಡೆಸಿದ ಅಧ್ಯಯನ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ. ಈ ವರದಿಯ ಪ್ರಮುಖ ಅಂಶವೆಂದರೆ, ಶೇ. 50ಕ್ಕಿಂತ ಹೆಚ್ಚು ಹೃದಯಾಘಾತ ಪ್ರಕರಣಗಳು ಧೂಮಪಾನಿಗಳಲ್ಲಿ ಕಂಡುಬಂದಿರುವುದು.

ತಜ್ಞರ ವರದಿಯ ಪ್ರಕಾರ, ಯುವಕರಲ್ಲಿ ಹೃದಯಾಘಾತಕ್ಕೆ ಧೂಮಪಾನವೇ ಪ್ರಮುಖ ಕಾರಣ ಎಂದು ಸ್ಪಷ್ಟವಾಗಿ ಗುರುತಿಸಲಾಗಿದೆ. ಈ ಹಿನ್ನೆಲೆಯಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ನಿಷೇಧದ ಕಾನೂನನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ.

ಡಾ. ರವೀಂದ್ರನಾಥ್ ಅವರು, 250 ಜನರ ಮೇಲೆ ನಡೆಸಿದ ಅಧ್ಯಯನದ ಕುರಿತು ಪ್ರತಿಕ್ರಿಯೆ ನೀಡಿದ್ದು, ಅಧ್ಯಯನಕ್ಕೆ ಒಳಪಟ್ಟವರಲ್ಲಿ ಶೇ. 98ರಷ್ಟು ಮಂದಿ ಕೋವಿಡ್ ಲಸಿಕೆ ಪಡೆದಿದ್ದರು. ಆದರೆ, ಮಧುಮೇಹ, ಒತ್ತಡ, ಧೂಮಪಾನ ಮತ್ತು ಬೊಜ್ಜು (ಒಬೆಸಿಟಿ) ನಂತಹ ಜೀವನಶೈಲಿ ಸಂಬಂಧಿ ಕಾರಣಗಳು ಹೃದಯಾಘಾತಕ್ಕೆ ಮುಖ್ಯವಾಗಿವೆ. ಕೋವಿಡ್ ಲಸಿಕೆಗೂ ಹೃದಯಾಘಾತಕ್ಕೂ ಯಾವುದೇ ನೇರ ಸಂಬಂಧವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಒಟ್ಟು 251 ರೋಗಿಗಳ ಆರೋಗ್ಯ ತಪಾಸಣೆಯಲ್ಲಿ, 218 ಪುರುಷರು ಮತ್ತು 33 ಮಹಿಳೆಯರು ಸೇರಿದ್ದರು. ಇವರಲ್ಲಿ 87 ಮಂದಿಗೆ ಮಧುಮೇಹ, 102 ಮಂದಿಗೆ ರಕ್ತದೊತ್ತಡ, 35 ಮಂದಿಗೆ ಸಕ್ಕರೆ ಕಾಯಿಲೆ, 40 ಮಂದಿಗೆ ಹೃದಯ ಸಂಬಂಧಿ ಸಮಸ್ಯೆಗಳು, ಮತ್ತು 111 ಮಂದಿ ಧೂಮಪಾನಿಗಳಾಗಿದ್ದರು. 19 ಮಂದಿಗೆ ಕೋವಿಡ್ ಸೋಂಕಿನ ಇತಿಹಾಸವಿದ್ದರೂ, 77 ಮಂದಿಗೆ ಯಾವುದೇ ರೋಗಗಳು ಇರಲಿಲ್ಲ ಎಂಬುದು ವರದಿಯಲ್ಲಿ ಉಲ್ಲೇಖವಾಗಿದೆ.

ಪ್ರಸ್ತುತ, ನರವೈಜ್ಞಾನಿಕ (ನ್ಯೂರಾಲಜಿಕಲ್) ಸಮಸ್ಯೆಗಳ ಕುರಿತ ಅಧ್ಯಯನವು ನಿಮಾನ್ಸ್ (NIMHANS) ತಜ್ಞರಿಂದ ನಡೆಯುತ್ತಿದ್ದು, ಅವರ ವರದಿ ಬಂದ ಬಳಿಕ ಹೃದಯಾಘಾತಗಳ ಕುರಿತಾದ ಅಂತಿಮ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

ಅಧ್ಯಯನದ ಪ್ರಕಾರ ಹೃದಯಾಘಾತಕ್ಕೆ ಪ್ರಮುಖ ಕಾರಣಗಳು:

  • ಅತಿಯಾದ ಮೊಬೈಲ್ ಬಳಕೆ (ಪರೋಕ್ಷ ಸಂಬಂಧವಿರಬಹುದು)
  • ಧೂಮಪಾನ
  • ಮಧುಮೇಹ
  • ಅತಿಯಾದ ಬೊಜ್ಜು (ಒಬೆಸಿಟಿ)
  • ಹೆಚ್ಚಿದ ತೂಕ
  • ರಕ್ತದೊತ್ತಡ
  • ಒತ್ತಡಯುಕ್ತ ಜೀವನಶೈಲಿ
  • ಕೋವಿಡ್ ಸಂದರ್ಭದ ಔಷಧ ಬಳಕೆ (ಇದು ಅಡ್ಡ ಪರಿಣಾಮಗಳಿಗೆ ಕಾರಣವಾಗಬಹುದು ಹೊರತು ಲಸಿಕೆ ಅಲ್ಲ)
share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಫುಟ್‌ಬಾಲ್ : ಕಾರ್ಕಳ ಜ್ಞಾನಸುಧಾ ತಂಡ ಜಿಲ್ಲಾಮಟ್ಟಕ್ಕೆ

ಪದವಿಪೂರ್ವ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ತಾಲೂಕು ಮಟ್ಟದ ಫುಟ್‌ಬಾಲ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ.

‘ಸೇವಾ ಪಾಕ್ಷಿಕ ಅಭಿಯಾನ’ ಯಶಸ್ವಿಗೊಳಿಸಲು ಕುತ್ಯಾರು ನವೀನ್ ಶೆಟ್ಟಿ ಕರೆ

ಜಿಲ್ಲೆಯಾದ್ಯಂತ ನಡೆಯಲಿರುವ ಸೇವಾ ಪಾಕ್ಷಿಕ ಅಭಿಯಾನವನ್ನು ಪಕ್ಷದ ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಸಂಘಟಿತ ಪರಿಶ್ರಮದ ಮೂಲಕ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಕರೆ ನೀಡಿದರು.

ಕ್ರಿಯೇಟಿವ್ ಕಾಲೇಜಿನಲ್ಲಿ ಗುರುದೇವೋಭವ ಕಾರ್ಯಕ್ರಮ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸಪ್ತಸ್ವರ ಸಭಾಂಗಣದಲ್ಲಿ, 'ಕ್ರಿಯೇಟಿವ್ ಗುರುದೇವೋಭವ' ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಜ್ಞಾನ ಜ್ಯೋತಿಯನ್ನು ಬೆಳಗಿ, ಡಾ. ರಾಧಾಕೃಷ್ಣನ್ ರವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆಯನ್ನು ನೀಡಲಾಯಿತು.

ಕಾರ್ಕಳ ಜ್ಞಾನಸುಧಾ – ಶಿಕ್ಷಕರ ದಿನಾಚರಣೆಸಾವಧಾನದ ಮನಸ್ಥಿತಿ ಗೌರವದ ಉಪಸ್ಥಿತಿ : ವಸಂತ್ ಆಚಾರ್

ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ನಡೆದ ಶಿಕ್ಷಕರ ದಿನಾಚರಣೆಯ ಸಂದರ್ಭ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲಾ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿ ಮಾತನಾಡಿದರು.