
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ಉಡುಪಿ ತಾಲೂಕು, ರೋಟರಿ ಕ್ಲಬ್ ಮಣಿಪಾಲ, ಗ್ರಾಮ ಪಂಚಾಯತ್ ಹಾವಂಜೆ, ಗ್ರಾಮ ವಿಕಾಸ ಸಮಿತಿ ಹಾವಂಜೆ, ಸಾಮಾಜಿಕ ಅರಣ್ಯ ಯೋಜನೆ ಉಡುಪಿ ಜಿಲ್ಲೆ ಇದರ ಸಂಯುಕ್ತ ಆಶ್ರಯದಲ್ಲಿ ಸಾಮಾಜಿಕ ಆರಣಿಕರಣ ಉದ್ಘಾಟನಾ ಕಾರ್ಯಕ್ರಮವನ್ನು ಶ್ರೀ ಮಂಜುನಾಥ ಸಭಾಭವನ ಹಾವಂಜೆ ಇಲ್ಲಿ ನೆರವೇರಿಸಲಾಯಿತು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋ. ಶಶಿಕಲಾ ರಾಜವರ್ಮ ಅಧ್ಯಕ್ಷರು ರೋಟರಿ ಕ್ಲಬ್ ಮಣಿಪಾಲ ಇವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಸಸ್ಯಾರೋಹಣ ರೋ. ಅಮಿತ್ ಅರವಿಂದ್ ಸಹಾಯಕ ಗವರ್ನರ್. ವಲಯ ನಾಲ್ಕು ರೋಟರಿ ಜಿಲ್ಲೆ 3182 ಇವರು ನೆರವೇರಿಸಿದರು.

ಕಾರ್ಯಕ್ರಮದ ಉದ್ಘಾಟನೆಯನ್ನು ಉಪ ಅರಣ್ಯ ಸಂರಕ್ಷಣಾಧಿಕಾರಿ ಸಾಮಾಜಿಕ ಅರಣ್ಯ ಯೋಜನೆ ಉಡುಪಿ ಜಿಲ್ಲೆ ಶ್ರೀ ರವೀಂದ್ರ ಕುಮಾರ್ ಡಿ ಎನ್ ಇವರು ನೆರವೇರಿಸಿದರು. ಕಾರ್ಯಕ್ರಮದಲ್ಲಿ ಉಪಸ್ಥಿರುವ ಎಲ್ಲರನ್ನು ರೋ. ರಾಜವರ್ಮ ಅರಿಗರವರು ಸ್ವಾಗತಿಸಿದರು. ಈ ಕಾರ್ಯಕ್ರಮದಲ್ಲಿ ಶ್ರೀಮತಿ ಆಶಾ ಡಿ ಪೂಜಾರಿ ಅಧ್ಯಕ್ಷರು ಗ್ರಾಮ ಪಂಚಾಯತ್ ಹಾವಂಜೆ, ರೋ.ರತ್ನಾಕರ್ ಎ ಶೆಟ್ಟಿ ನಿವೃತ್ತ ಉಪ ಅರಣ್ಯ ಸಂರಕ್ಷಣಾಧಿಕಾರಿ ಉಡುಪಿ ಜಿಲ್ಲೆ, ಶ್ರೀ ಸುರೇಂದ್ರ ನಾಯ್ಕ್ ಕ್ಷೇತ್ರ ಯೋಜನಾಧಿಕಾರಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ರಿಜಿಸ್ಟರ್ ಉಡುಪಿ ತಾಲೂಕು, ಶ್ರೀ ಅಜಿತ್ ಕಾರ್ತಿ ಬೈಲು ಅಧ್ಯಕ್ಷರು ಹಾವಂಜೆ ಗ್ರಾಮ ವಿಕಾಸ ಸಮಿತಿ, ಶ್ರೀ ಕೃಷ್ಣ ವಲಯ್ಯಾಧ್ಯಕ್ಷರು ಹೃತ್ಪೂರ್ವ ವಲಯ, ಶ್ರೀ ಹರೀಶ್ ಎಂ ದೇವಾಡಿಗ ಮಾಸ್ಟರ್ ಶೌರ್ಯ ವಿಪತ್ತು ನಿರ್ವಹಣಾ ಘಟಕ ಉಡುಪಿ ತಾಲೂಕು ಇವರುಗಳು ಉಪಸ್ಥಿತರಿದ್ದರು.

ಈ ಕಾರ್ಯಕ್ರಮದ ಪ್ರಸ್ತಾವನೆಯನ್ನು ತಾಲೂಕು ಕೃಷಿ ಮೇಲ್ವಿಚಾರಕ ಮಂಜುನಾಥ್ ನಿರ್ವಹಿಸಿದರು. ಕಾರ್ಯಕ್ರಮದಲ್ಲಿ ವಿವಿಧ ಶಾಲಾ ಮಕ್ಕಳಿಗೆ ಸ್ಪರ್ಧೆಗಳನ್ನು ಏರ್ಪಡಿಸಿದ್ದು ಬಹುಮಾನಗಳನ್ನು ವಿತರಿಸಲಾಯಿತು. ಈ ಕಾರ್ಯಕ್ರಮದಲ್ಲಿ ವಲಯದ ಮೇಲ್ವಿಚಾರಕರಾದ ನಾಗರತ್ನ, ವಲಯದ ಸೇವಾ ಪ್ರತಿನಿಧಿಯವರು , ಒಕ್ಕೂಟ ಪದಾಧಿಕಾರಿಯವರು, ಗ್ರಾಮ ವಿಕಾಸ ಸಮಿತಿಯ ಸರ್ವ ಸದಸ್ಯರು ಹಾಗೂ ರೋಟರಿ ಕ್ಲಬಿನ ಸದಸ್ಯರು ಭಾಗವಹಿಸಿದ್ದರು. ಈ ಕಾರ್ಯಕ್ರಮ ನಿರೂಪಣೆಯನ್ನು ರೋ. ಜಗಧೀಶ್ ಪೈ ನಿರ್ವಹಿಸಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿರುವ ಎಲ್ಲರಿಗೂ ರೋ. ವಾಣಿಶ್ರೀ ರಾವ್ ರವರು ಧನ್ಯವಾದಗಳನ್ನು ಸಮರ್ಪಿಸಿದರು.

































