ಸ್ಪೇಸ್‌ಎಕ್ಸ್ ಉಡಾವಣೆ ವಿಫಲ: ಸುನೀತಾ ವಿಲಿಯಮ್ಸ್ ಮತ್ತು ಬುಷ್ ವಿಲ್ಮೋರ್‌ಗೆ ಭೂಮಿಗೆ ಮರಳಲು ಇನ್ನೂ ಕಾತರ

Date:

spot_img

ಹೊಸದಿಲ್ಲಿ: ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ಐಎಸ್‌ಎಸ್) ಸಿಲುಕಿರುವ ಭಾರತೀಯ ಮೂಲದ ಗಗನಯಾತ್ರಿಗಳಾದ ಸುನೀತಾ ವಿಲಿಯಮ್ಸ್ ಮತ್ತು ಬುಷ್ ವಿಲ್ಮೋರ್ ಅವರು ಭೂಮಿಗೆ ಮರಳುವ ಪ್ರಕ್ರಿಯೆ ಮತ್ತೊಮ್ಮೆ ವಿಳಂಬವಾಗಲಿದೆ ಎಂದು ತಿಳಿದುಬಂದಿದೆ. ಇದಕ್ಕೆ ಕಾರಣ, ನಾಸಾದ ಕ್ರೂ-10 ಮಿಷನ್‌ನ ಉಡಾವಣೆಯನ್ನು ಕೊನೆಯ ಕ್ಷಣದಲ್ಲಿ ತಾಂತ್ರಿಕ ಸಮಸ್ಯೆಯಿಂದಾಗಿ ಮುಂದೂಡಲಾಗಿದೆ.

ನಾಸಾ ಪ್ರಕಾರ, ಕ್ರೂ-10 ಮಿಷನ್‌ನ ಉಡಾವಣೆಗೆ ಸಿದ್ಧತೆ ನಡೆದಿದ್ದರೂ, ಹೈಡ್ರಾಲಿಕ್ ವ್ಯವಸ್ಥೆಯಲ್ಲಿ ಉಂಟಾದ ತಾಂತ್ರಿಕ ದೋಷದ ಕಾರಣದಿಂದಾಗಿ ಉಡಾವಣೆಯನ್ನು ಮುಂದಿನ ಸೂಕ್ತ ಸಮಯಕ್ಕೆ ಮುಂದೂಡಲಾಗಿದೆ. ಕ್ರೂ-10 ಮಿಷನ್‌ನ ಉಡಾವಣೆಯಾದ ನಂತರವೇ, ಪ್ರಸ್ತುತ ಐಎಸ್‌ಎಸ್‌ನಲ್ಲಿರುವ ಕ್ರೂ-9 ತಂಡದ ಸದಸ್ಯರಾದ ಸುನೀತಾ ವಿಲಿಯಮ್ಸ್ ಮತ್ತು ಬುಷ್ ವಿಲ್ಮೋರ್ ಅವರು ಭೂಮಿಗೆ ಮರಳಲು ಸಾಧ್ಯವಾಗುತ್ತದೆ ಎಂದು ನಾಸಾ ಹಿಂದೆಯೇ ತಿಳಿಸಿತ್ತು.

ಇತ್ತ, ಈ ಸಮಸ್ಯೆಯ ನಡುವೆಯೂ ಗಗನಯಾತ್ರಿಗಳನ್ನು ಸುರಕ್ಷಿತವಾಗಿ ಭೂಮಿಗೆ ಮರಳಿಸುವ ಬಗ್ಗೆ ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಕ್ರಿಯ ಆಸಕ್ತಿ ತೋರಿಸಿದ್ದಾರೆ. ಅವರು ಈ ಕಾರ್ಯವನ್ನು ಸ್ಪೇಸ್‌ಎಕ್ಸ್‌ನ ಸಿಇಒ ಎಲೋನ್ ಮಸ್ಕ್‌ಗೆ ವಹಿಸಿದ್ದರು. ಮಸ್ಕ್‌ ಅವರು ಈ ಜವಾಬ್ದಾರಿಯನ್ನು ಸ್ವೀಕರಿಸಿದ್ದರಿಂದಾಗಿ, ಸ್ಪೇಸ್‌ಎಕ್ಸ್ ತಂಡವು ಗಗನಯಾತ್ರಿಗಳನ್ನು ಮರಳಿ ಕರೆತರುವ ಕಾರ್ಯವನ್ನು ಆರಂಭಿಸಿತ್ತು. ಇಂದು ಬೆಳಗ್ಗೆ ಭಾರತೀಯ ಕಾಲಮಾನ 5.18ಕ್ಕೆ ಉಡಾವಣೆಗೆ ನಿಗದಿಯಾಗಿತ್ತು. ಆದರೆ, ಉಡಾವಣೆ ಮಂಡಳದಲ್ಲಿ (ಲಾಂಚ್ ಪ್ಯಾಡ್) ಕೊನೆಯ ಕ್ಷಣದಲ್ಲಿ ತಾಂತ್ರಿಕ ದೋಷ ಕಂಡುಬಂದ ಕಾರಣದಿಂದಾಗಿ ಉಡಾವಣೆಯನ್ನು ಮುಂದೂಡಲಾಗಿದೆ ಎಂದು ಸ್ಪೇಸ್‌ಎಕ್ಸ್ ತಿಳಿಸಿದೆ.

ಸ್ಪೇಸ್‌ಎಕ್ಸ್‌ನ ಡ್ರ್ಯಾಗನ್ ಕ್ಯಾಪ್ಸುಲ್‌ನಲ್ಲಿ ನಾಲ್ವರು ಗಗನಯಾತ್ರಿಗಳು ಬಾಹ್ಯಾಕಾಶಕ್ಕೆ ಹೋಗಬೇಕಿತ್ತು. ಆದರೆ, ಈಗ ಉಡಾವಣೆಯನ್ನು ಮುಂದಿನ ತಾಂತ್ರಿಕ ಪರಿಶೀಲನೆಗಳ ನಂತರ ಮಾಡಲಾಗುವುದು ಎಂದು ಸ್ಪೇಸ್‌ಎಕ್ಸ್ ತಿಳಿಸಿದೆ. ಗಗನಯಾತ್ರಿಗಳ ಸುರಕ್ಷಿತ ಮರಳುವಿಕೆಗೆ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ನಾಸಾ ಮತ್ತು ಸ್ಪೇಸ್‌ಎಕ್ಸ್ ಭರವಸೆ ನೀಡಿವೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತದ ಮಾರುಕಟ್ಟೆಗೆ ಕಾಲಿಟ್ಟ ಬೋಟ್‌ನ ಹೊಸ ಪ್ರೀಮಿಯಂ ಹೆಡ್‌ಫೋನ್

ಬೋಟ್ ಕಂಪನಿಯು 80 ಗಂಟೆಗಳ ಬ್ಯಾಟರಿ ಹಾಗೂ 45dB ಹೈಬ್ರಿಡ್ ANC ಬೆಂಬಲಿಸುವ ಪ್ರೀಮಿಯಂ ನಿರ್ವಾಣ ಯುಟೋಪಿಯಾ 2 ಹೆಡ್‌ಫೋನ್ ಭಾರತದಲ್ಲಿ ಬಿಡುಗಡೆ ಮಾಡಿದೆ.

ದಿನ ವಿಶೇಷ – ಆದಾಯ ತೆರಿಗೆ ದಿನ

ಭಾರತದಲ್ಲಿ ಪ್ರತಿ ವರ್ಷ ಜುಲೈ 24 ರಂದು ಆದಾಯ ತೆರಿಗೆ ದಿನವನ್ನು ಆಚರಿಸಲಾಗುತ್ತದೆ. ಇದರ ಇತಿಹಾಸ, ಪ್ರಾಮುಖ್ಯತೆ ಮತ್ತು ITR ಸಲ್ಲಿಕೆಯ ಕುರಿತು ವಿವರ ಇಲ್ಲಿದೆ.

ನಿಮ್ಮ ಅಡುಗೆಮನೆಯಲ್ಲಿರುವ ಈ ಒಂದು ಎಣ್ಣೆ ನೂರಾರು ಕಾಯಿಲೆಗಳಿಗೆ ಮನೆಮದ್ದು: ಕ್ಯಾಸ್ಟರ್ ಆಯಿಲ್ ಬಳಸುವ ಸರಿಯಾದ ವಿಧಾನ ಇಲ್ಲಿದೆ.

ಹರಳೆಣ್ಣೆಯ ಆರೋಗ್ಯಕರ ಪ್ರಯೋಜನಗಳು, ಕೂದಲ ರಕ್ಷಣೆ ಮತ್ತು ಮಲಬದ್ಧತೆಗೆ ಇದನ್ನು ಬಳಸುವ ಸರಿಯಾದ ವಿಧಾನಗಳ ಕುರಿತು ಇಲ್ಲಿದೆ ಪೂರ್ಣ ಮಾಹಿತಿ.

ಉದ್ಯಮಿ ಸಂಪತ್‌ ಶೆಟ್ಟಿಗೆ ಪ್ರತಿಷ್ಠಿತ ಧರ್ಮಯೋಗಿ ಪುರಸ್ಕಾರ

ಗ್ರಾಮೀಣ ಉದ್ಯಮಿ ಮಂದಾರ್ತಿ ಸಂಪತ್ ಶೆಟ್ಟಿ ಅವರಿಗೆ ಮುದ್ರಾಡಿಯಲ್ಲಿ ಧರ್ಮಯೋಗಿ ಸನ್ಮಾನ ಪ್ರಶಸ್ತಿ ಘೋಷಣೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ