spot_img

ಮಂಗಳೂರಿನಲ್ಲಿ ಗೃಹ ಸಚಿವ ಜಿ. ಪರಮೇಶ್ವರ್ ರವರಿಂದ ಉದ್ಘಾಟನೆಗೊಂಡ “ವಿಶೇಷ ಕಾರ್ಯಪಡೆ”

Date:

ಮಂಗಳೂರು: ಕರಾವಳಿ ಪ್ರದೇಶದಲ್ಲಿ ಕೋಮು ಸಂಘರ್ಷ ತಡೆಯುವ ಉದ್ದೇಶದಿಂದ ರಚಿಸಲಾದ ವಿಶೇಷ ಕಾರ್ಯಪಡೆ (ಸ್ಪೆಷಲ್ ಆ್ಯಕ್ಷನ್ ಫೋರ್ಸ್)ಗೆ ಜೂನ್ 13 ರಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಅಧಿಕೃತವಾಗಿ ಚಾಲನೆ ನೀಡಿದರು. ಮಂಗಳೂರು ನಗರ ಪೊಲೀಸ್ ಕಮಿಷನರ್ ಕಚೇರಿ ಬಳಿಯ ಗೆಸ್ಟ್ ಹೌಸ್ ಕಟ್ಟಡದಲ್ಲಿ ಈ ವಿಶೇಷ ಕಾರ್ಯಪಡೆ ತನ್ನ ಕಚೇರಿ ಕಾರ್ಯಾಚರಣೆಯನ್ನು ನಿರ್ವಹಿಸಲಿದೆ.

ಉದ್ಘಾಟನಾ ಸಮಾರಂಭದಲ್ಲಿ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್, ಜಿಲ್ಲೆಯ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ವಿಧಾನ ಪರಿಷತ್ ಸದಸ್ಯರುಗಳಾದ ಐವನ್ ಡಿ’ಸೋಜಾ ಹಾಗೂ ಮಂಜುನಾಥ ಭಂಡಾರಿ, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.ಎ. ಸಲೀಂ, ಎಡಿಜಿಪಿ ಮುರುಗನ್, ಐಜಿಪಿ ಅಮಿತ್ ಸಿಂಗ್, ದ.ಕ. ಜಿಲ್ಲಾಧಿಕಾರಿ ಮುತ್ತೈ ಮುಗಿಲನ್, ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ, ಎಸ್‌ಪಿ ಡಾ. ಅರುಣ್ ಕೆ ಮತ್ತು ಉಡುಪಿ ಎಸ್‌ಪಿ ಹರಿರಾಮ್ ಶಂಕರ್ ಸೇರಿದಂತೆ ಹಲವಾರು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ವಿಶೇಷ ಕಾರ್ಯಪಡೆ, ದ.ಕ., ಉಡುಪಿ ಮತ್ತು ಸುತ್ತಮುತ್ತಲಿನ ಕೋಮು ಸೂಕ್ಷ್ಮ ಪ್ರದೇಶಗಳಲ್ಲಿ ಶಾಂತಿ ಕಾಪಾಡುವಲ್ಲಿ ಮಹತ್ವದ ಪಾತ್ರ ವಹಿಸಲಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಸುಂದರಿ ನಾರಾಯಣ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನೋಟ್ ಬುಕ್ ಕೊಡೆ ಹಾಗೂ ಬ್ಯಾಗ್ ವಿತರಣೆ

ಶ್ರೀನಾಥ್ ಶೆಟ್ಟಿ ಉದ್ಯಮಿ ಮುಂಬೈ 20 ನೇ ವರ್ಷದ ಲೇಖನ ಸಾಮಗ್ರಿ ನೋಟ್ ಬುಕ್ ಕೊಡೆ ಹಾಗೂ ಬ್ಯಾಗ್ ವಿತರಣಾ ಕಾರ್ಯಕ್ರಮ

ಬಾಳೆಹಣ್ಣಿನ ಸಿಪ್ಪೆಯ ಅಚ್ಚರಿಯ ಪ್ರಯೋಜನಗಳು!

ಬಾಳೆಹಣ್ಣಿನ ಸಿಪ್ಪೆ ಚರ್ಮದ ಆರೋಗ್ಯ, ತುಟಿಗಳ ತೇಜಸ್ಸು ಹಾಗೂ ಹಲ್ಲುಗಳ ಸ್ವಚ್ಛತೆಗಾಗಿ ನೈಸರ್ಗಿಕ ಪರಿಹಾರವಾಗಿದೆ.

ದಿನ ವಿಶೇಷ – ವಿಶ್ವ ರಕ್ತದಾನಿಗಳ ದಿನ

ದೈಹಿಕವಾಗಿ ಆರೋಗ್ಯವಿರುವ ಪ್ರತಿಯೊಬ್ಬರೂ 3-6 ತಿಂಗಳಿಗೆ ರಕ್ತದಾನ ಮಾಡಬಹುದು

ಅಹಮದಾಬಾದ್ ವಿಮಾನ ದುರಂತ: 27 ಗಂಟೆಗಳ ಬಳಿಕ ಬ್ಲ್ಯಾಕ್ ಬಾಕ್ಸ್ ಪತ್ತೆ – ದುರಂತದ ನಿಜಾಂಶ ಬಹಿರಂಗವಾಗುವ ನಿರೀಕ್ಷೆ

ಗುಜರಾತ್‌ನ ಅಹಮದಾಬಾದ್‌ನಲ್ಲಿ ಸಂಭವಿಸಿದ ಭೀಕರ ಏರ್ ಇಂಡಿಯಾ ವಿಮಾನ ದುರಂತದ ನಂತರ 27 ಗಂಟೆಗಳ ಬಳಿಕ ಬ್ಲ್ಯಾಕ್ ಬಾಕ್ಸ್ (Black Box) ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.