
ಪಳ್ಳಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ )ಬಿಸಿ ಟ್ರಸ್ಟ್ ಕಾರ್ಕಳ ಇದರ ಶೌರ್ಯ ವಿಪತ್ತು ನಿರ್ವಹಣಾ ಪಳ್ಳಿ ಘಟಕದ ವತಿಯಿಂದ “ಪರಿಸರ ಮಾಹಿತಿ ಮತ್ತು ಗಿಡ ನಾಟಿ” ಕಾರ್ಯಕ್ರಮವನ್ನು ಸರ್ಕಾರಿ ಪದವಿ ಪೂರ್ವ ಕಾಲೇಜು ಪಳ್ಳಿಯಲ್ಲಿ ನಡೆಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಎಂ ಸಿ ಅಧ್ಯಕ್ಷರಾದ ದಿನೇಶ್ ನಾಯ್ಕ್ ಇವರು ವಹಿಸಿದರು. ಪಳ್ಳಿ ಒಕ್ಕೂಟದ ಅಧ್ಯಕ್ಷರಾದ ರಾಜೇಶ್ ಆಚಾರ್ಯ ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಮುಖ್ಯ ಅತಿಥಿಯಾಗಿ ಆಗಮಿಸಿದ ಶ್ರೀಕಾಂತ್ ಪ್ರಭು ಪಳ್ಳಿ ಇವರು ಮಾತನಾಡಿ ಗ್ರಾಮೀಣ ಭಾಗದಲ್ಲಿ ತುರ್ತು ಸಂದರ್ಭಗಳಲ್ಲಿ ಸೇವಾ ಮನೋಭಾವವದಿಂದ ಧಾವಿಸುವವರು ಇದ್ದರೆ ಅದು ಶೌರ್ಯ ವಿಪತ್ತು ಘಟಕ. ಅವರ ಎಲ್ಲಾ ಕಾರ್ಯಗಳು ಮಾದರಿಯಾಗಿವೆ. ಮುಂದಿನ ಭವಿಷ್ಯಕ್ಕಾಗಿ ಮಾಡಬೇಕಾದ ದೊಡ್ಡ ಆಸ್ತಿ ಅಂದರೆ ಅದು ಸ್ವಚ್ಛ ಪರಿಸರ. ಒಬ್ಬ ವಿದ್ಯಾರ್ಥಿ ಒಂದು ಗಿಡ ನೆಡುವ ಸಂಕಲ್ಪ ಮಾಡಬೇಕು ಆಗ ಮಾತ್ರ ನಮ್ಮ ಸ್ವಚ್ಛ ನಿರ್ಮಲ ಪರಿಸರ ನಿರ್ಮಾಣದ ಕನಸು ನನಸಾಗಲು ಸಾಧ್ಯ ಎಂದರು.

ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಮಂಜಪ್ಪ ಇವರು ಸ್ವಾಗತವನ್ನು ಕೋರಿದರು. ಶಿಕ್ಷಕಿಯಾದ ಶ್ರೀಮತಿ ಜ್ಯೋತಿಯವರು ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಜನಜಾಗ್ರತಿ ವೇದಿಕೆಯ ಸದಸ್ಯರಾದ ಶ್ರೀ ಸಂದೀಪ್, ಕೃಷಿ ಮೇಲ್ವಿಚಾರಕರಾದ ಬ್ರಿಜೇಶ್, ವಲಯ ಮೇಲ್ವಿಚಾರಕರಾದ ಶ್ರೀಮತಿ ಯಶೋಧ, ಮುಖ್ಯ ಶಿಕ್ಷಕರರಾದ ಶ್ರೀಮತಿ ಜಯಲಕ್ಷ್ಮಿ, ಸೇವಾ ಪ್ರತಿನಿಧಿಯಾದ ಆಶಾಲತಾ, ಶೌರ್ಯ ವಿಪತ್ತು ವಿಭಾಗದ ಸದಸ್ಯರು, ಶಿಕ್ಷಕ – ಶಿಕ್ಷಕಿ ವೃಂದದವರು , ವಿದ್ಯಾರ್ಥಿ- ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.




