spot_img

ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆಗೆ ಕೇಂದ್ರದಿಂದ ಪರವಾನಿಗೆ! ಸೆಟಲೈಟ್ ಇಂಟರ್ನೆಟ್ ಸೇವೆಗೆ ಮತ್ತೊಂದು ಹೆಜ್ಜೆ

Date:

spot_img

ನವದೆಹಲಿ : ಅಮೆರಿಕದ ಆಂತರಿಕ್ಷ ತಂತ್ರಜ್ಞಾನ ಕ್ಷೇತ್ರದ ಅಗ್ರಗಣ್ಯ ಸಂಸ್ಥೆ ಸ್ಪೇಸ್ ಎಕ್ಸ್‌ಗೆ ಸೇರಿದ ಎಲಾನ್ ಮಸ್ಕ್ ಅವರ ಸ್ಟಾರ್ ಲಿಂಕ್ ಸಂಸ್ಥೆಗೆ ಭಾರತದಲ್ಲಿ ಸೆಟಲೈಟ್ ಕಮ್ಯೂನಿಕೇಶನ್ ಸೇವೆ ನೀಡಲು ದೂರಸಂಪರ್ಕ ಇಲಾಖೆಯಿಂದ (DoT) ಪರವಾನಿಗೆ ನೀಡಲಾಗಿದೆ ಎಂದು ಪಿಟಿಐ ವರದಿ ತಿಳಿಸಿದೆ.

ಇದರಿಂದ ಭಾರತದಲ್ಲಿ ಸೆಟಲೈಟ್ ಮೂಲಕ ಇಂಟರ್ನೆಟ್ ಸೇವೆ ನೀಡಲು ಅನುಮತಿ ಪಡೆದ ಮೂರನೇ ಕಂಪನಿಯಾಗಿ ಸ್ಟಾರ್ ಲಿಂಕ್ ಹೊರಹೊಮ್ಮಿದೆ. ಈಗಾಗಲೇ 2022ರಿಂದಲೇ ಈ ಸೇವೆ ನೀಡಲು ಸ್ಟಾರ್ ಲಿಂಕ್ ಪ್ರಯತ್ನಿಸುತ್ತಿತ್ತು. ಆದರೆ ರಾಷ್ಟ್ರೀಯ ಭದ್ರತಾ ಅಂಶದ ಪರಿಶೀಲನೆಯ ಹಿನ್ನೆಲೆಯಲ್ಲಿ ಲೈಸೆನ್ಸ್ ನಿರ್ಧಾರ ವಿಳಂಬವಾಗಿತ್ತು ಎಂದು ಮೂಲಗಳು ತಿಳಿಸಿವೆ.

ಡಿಓಟಿ ಮೂಲಗಳ ಪ್ರಕಾರ, ಕಂಪನಿಗೆ 15-20 ದಿನಗಳೊಳಗೆ ಪ್ರಾಯೋಗಿಕ ತರಂಗಾಂತರ ಹಂಚಿಕೆ (trial spectrum allocation) ಕೂಡಾ ನೀಡಲಾಗಲಿದೆ.

ಇದರ ಜೊತೆಗೆ, ಅಮೆಜಾನ್ ಸಂಸ್ಥೆಯ ಕೈಪರ್ ಯೋಜನೆ ಕೂಡಾ ಲೈಸೆನ್ಸ್ ನಿರೀಕ್ಷೆಯಲ್ಲಿ ಇದ್ದು, ಭಾರತದಲ್ಲಿ ಸೆಟಲೈಟ್ ಇಂಟರ್ನೆಟ್ ಸ್ಪರ್ಧೆ ತೀವ್ರವಾಗಲಿದೆ ಎನ್ನಬಹುದು.

ಈ ಹಿಂದೆ 2025ರ ಮಾರ್ಚ್‌ನಲ್ಲಿ, ಭಾರ್ತಿ ಏರ್‌ಟೆಲ್ ಸ್ಟಾರ್ ಲಿಂಕ್ ಸಹಿತ ಸ್ಪೇಸ್ ಎಕ್ಸ್ ಜತೆಗೆ ಸಹಭಾಗಿತ್ವ ಮಾಡಿಕೊಂಡು, ಭಾರತದಲ್ಲಿ ಹೈಸ್ಪೀಡ್ ಇಂಟರ್ನೆಟ್ ಸೇವೆ ಆರಂಭಿಸಲು ಉದ್ದೇಶಿಸಿದ್ದಾಗಿ ಘೋಷಿಸಿತ್ತು. ಆದರೆ ಆ ಒಪ್ಪಂದವನ್ನು ಕಾರ್ಯರೂಪಕ್ಕೆ ತರುವ ಮೊದಲು ಭಾರತೀಯ ಸರ್ಕಾರದ ಪರವಾನಿಗೆ ಪಡೆಯುವುದು ಅನಿವಾರ್ಯವಾಗಿತ್ತು.

ಇದರ ಬೆನ್ನಲ್ಲೇ, ರಿಲಯನ್ಸ್ ಜಿಯೋ ಕೂಡಾ ಸ್ಟಾರ್ ಲಿಂಕ್ ಜೊತೆ ಸಹಯೋಗ ಹೊಂದಲು ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಆರೋಗ್ಯಕ್ಕೆ ಮಾರಕವಾಗಬಲ್ಲ ದಿನನಿತ್ಯದ ಸೊಪ್ಪು: ಕಿಡ್ನಿ ಕಲ್ಲುಗಳ ಸೃಷ್ಟಿಗೆ ಪ್ರಮುಖ ಕಾರಣ!

ನಮ್ಮ ದೇಹದ ಅತ್ಯಂತ ಪ್ರಮುಖ ಅಂಗಗಳಲ್ಲಿ ಒಂದಾದ ಮೂತ್ರಪಿಂಡಗಳು, ರಕ್ತವನ್ನು ಶುದ್ಧೀಕರಿಸಿ ವಿಷಕಾರಿ ಅಂಶಗಳನ್ನು ಹೊರಹಾಕುವ ಕಾರ್ಯವನ್ನು ನಿರಂತರವಾಗಿ ಮಾಡುತ್ತವೆ.

“ಸು ಫ್ರಮ್‌ ಸೋ” ಅಬ್ಬರ: ಸಣ್ಣ ಬಜೆಟ್, ದೊಡ್ಡ ಕಲೆಕ್ಷನ್ – ಇದು ಕಂಟೆಂಟ್ ತಾಕತ್ತು!

ಇತ್ತೀಚೆಗೆ ತೆರೆ ಬಿದ್ದಿದ್ದು, ಜೆ.ಪಿ. ತುಮಿನಾಡ್ ನಿರ್ದೇಶನದ "ಸು ಫ್ರಮ್‌ ಸೋ" ಚಿತ್ರವು ಅದ್ಭುತ ಗೆಲುವು ಸಾಧಿಸಿದೆ. ರಾಜ್ ಬಿ ಶೆಟ್ಟಿ ಅವರ ಲೈಟರ್ ಬುದ್ಧ ಫಿಲಂಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣಗೊಂಡಿರುವ ಈ ಚಲನಚಿತ್ರವು, ಕಥಾವಸ್ತು ಮತ್ತು ನಿರೂಪಣೆಯ ಶಕ್ತಿಗೆ ಪ್ರೇಕ್ಷಕರು ಹೇಗೆ ಸ್ಪಂದಿಸುತ್ತಾರೆ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ.

ಉಡುಪಿಯಲ್ಲಿ ವರುಣನ ಆರ್ಭಟ: ಆಸ್ತಿಪಾಸ್ತಿಗೆ ಹಾನಿ

ಕರಾವಳಿ ಜಿಲ್ಲೆ ಉಡುಪಿಯಲ್ಲಿ ಕಳೆದ 24 ಗಂಟೆಗಳಿಂದ ಬಿಡದೇ ಸುರಿಯುತ್ತಿರುವ ಭಾರೀ ಗಾಳಿ ಮತ್ತು ಮಳೆಯು ವ್ಯಾಪಕ ಅವಾಂತರಗಳನ್ನು ಸೃಷ್ಟಿಸಿದ್ದು, ಜಿಲ್ಲೆಯ ಬಹುತೇಕ ಪ್ರದೇಶಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ

ಹರಿದ್ವಾರದಲ್ಲಿ ದುರಂತ: ಮಾನಸಾ ದೇವಿ ದೇವಾಲಯದಲ್ಲಿ ಕಾಲ್ತುಳಿತ, 7 ಮಂದಿ ಸಾವು, ಹಲವರಿಗೆ ಗಾಯ

ಉತ್ತರಾಖಂಡದ ಪುಣ್ಯಕ್ಷೇತ್ರ ಹರಿದ್ವಾರದಲ್ಲಿರುವ ಪ್ರಸಿದ್ಧ ಮಾನಸಾ ದೇವಿ ದೇವಾಲಯದಲ್ಲಿ ಭಾನುವಾರ (ಜುಲೈ 27) ಸಂಭವಿಸಿದ ದುರದೃಷ್ಟಕರ ಕಾಲ್ತುಳಿತದಲ್ಲಿ ಏಳು ಭಕ್ತರು ಪ್ರಾಣ ಕಳೆದುಕೊಂಡಿದ್ದು, 28ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ