spot_img

ವೀರೇಂದ್ರ ಹೆಗ್ಗಡೆಯವರ ಒಳ್ಳೆ ಕೆಲಸ ಕಾಣಿಸುತ್ತಿಲ್ಲವೇ?: ಅಪಪ್ರಚಾರದ ವಿರುದ್ಧ ವಚನಾನಂದ ಶ್ರೀಗಳ ಆಕ್ರೋಶ

Date:

spot_img

ಹಾವೇರಿ : ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಅವರು ಹಾವೇರಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರ ಪರವಾಗಿ ಪ್ರಬಲವಾಗಿ ಮಾತನಾಡಿದರು. ಕೆಲವು ಶಕ್ತಿಗಳು ಹಿಂದುತ್ವಕ್ಕೆ ಮತ್ತು ಧಾರ್ಮಿಕ ಸಂಸ್ಥೆಗಳಿಗೆ ಹಾನಿ ಮಾಡಲು ಪಿತೂರಿ ನಡೆಸುತ್ತಿವೆ ಎಂದು ಅವರು ಆರೋಪಿಸಿದರು.

ಪಿತೂರಿಗಳ ವಿರುದ್ಧ ಹಿಂದೂಗಳು ಒಂದಾಗಬೇಕು

“ಕೆಲವರಿಗೆ ಹಿಂದುತ್ವವು ಬೆಳೆಯುತ್ತಿರುವುದು ಮತ್ತು ಇಡೀ ಜಗತ್ತು ಹಿಂದೂ ಧರ್ಮವನ್ನು ಒಪ್ಪಿಕೊಳ್ಳಬಹುದು ಎಂಬ ಭಯ ಕಾಡುತ್ತಿದೆ. ಅದಕ್ಕಾಗಿ ಧಾರ್ಮಿಕ ಸಂಸ್ಥೆಗಳು, ದೇಗುಲಗಳಿಗೆ ಕೆಟ್ಟದ್ದು ಮಾಡಬೇಕೆಂದು ಪಿತೂರಿ ಮಾಡುತ್ತಿದ್ದಾರೆ” ಎಂದು ಸ್ವಾಮೀಜಿ ಹೇಳಿದರು. “ಇವತ್ತು ವೀರೇಂದ್ರ ಹೆಗ್ಗಡೆಯವರಿಗೆ ಬಂದಿರಬಹುದು, ನಾಳೆ ನಮಗೂ ಬರಬಹುದು. ನಾವೆಲ್ಲರೂ ಒಂದಾಗಬೇಕಿದೆ” ಎಂದು ಪಕ್ಕದ ಮನೆಯ ಬೆಂಕಿಯ ಹೋಲಿಕೆ ನೀಡಿ ಎಚ್ಚರಿಕೆ ನೀಡಿದರು. ಏನಾದರೂ ತಪ್ಪುಗಳಿದ್ದರೆ ಅದನ್ನು ಕಾನೂನು ಮತ್ತು ನ್ಯಾಯಾಲಯ ನಿರ್ಧರಿಸುತ್ತದೆ, ನಾವಲ್ಲ ಎಂದೂ ಅವರು ತಿಳಿಸಿದರು.

ಹೆಗ್ಗಡೆಯವರ ಒಳ್ಳೆ ಕೆಲಸಗಳು ಕಾಣಿಸುತ್ತಿಲ್ಲವೇ?

ವೀಂದ್ರ ಹೆಗ್ಗಡೆಯವರು ಗ್ರಾಮೀಣಾಭಿವೃದ್ಧಿಗಾಗಿ ಮಾಡುತ್ತಿರುವ ಉತ್ತಮ ಕಾರ್ಯಗಳನ್ನು ಸ್ವಾಮೀಜಿ ಶ್ಲಾಘಿಸಿದರು. “ಒಳ್ಳೆಯ ಕೆಲಸಗಳನ್ನು ಬಿಟ್ಟು, ಮೊಸರಿನಲ್ಲಿ ಕಲ್ಲು ಹುಡುಕುವ ಕೆಲಸ ನಡೆದಿದೆ. ಅವರ ಒಳ್ಳೆಯ ಕಾರ್ಯಗಳನ್ನು ಪ್ರೋತ್ಸಾಹಿಸುವ ಬದಲು ಅಪಖ್ಯಾತಿ ತರುವ ಮತ್ತು ನಕಾರಾತ್ಮಕವಾಗಿ ಬಿಂಬಿಸುವ ಕೆಲಸ ನಡೆಯುತ್ತಿದೆ. ನಾವು ಅವರೊಂದಿಗೆ ನಿಲ್ಲಬೇಕು” ಎಂದು ಹೇಳಿದರು.

ಜೈನರು ಹಿಂದೂ ಧರ್ಮದ ಭಾಗ: ವಿದೇಶಿ ನಿಧಿಗಳ ಬಗ್ಗೆ ಅನುಮಾನ

ಯಾವುದೇ ಜೈನರು ತಾವು ಹಿಂದೂಗಳಲ್ಲ ಎಂದು ಎಂದಿಗೂ ಹೇಳಿಲ್ಲ. ಜೈನರು ಹಾಲಿನಲ್ಲಿ ಬೆರೆತ ಕಲ್ಲುಸಕ್ಕರೆಯಂತೆ ಹಿಂದೂಗಳ ಜೊತೆಗಿದ್ದಾರೆ. ಅವರು ಎಂದಿಗೂ ನಮ್ಮ ಪರಂಪರೆಯನ್ನು ಟೀಕಿಸಿಲ್ಲ ಎಂದು ವಚನಾನಂದ ಸ್ವಾಮೀಜಿ ಸ್ಪಷ್ಟಪಡಿಸಿದರು. ಜೊತೆಗೆ, ಅಲ್ ಜಜೀರಾ ಚಾನೆಲ್‌ನಲ್ಲಿಯೂ ಈ ಕುರಿತು ವರದಿ ಬರುತ್ತಿರುವುದು ಶಂಕೆಯನ್ನು ಹುಟ್ಟುಹಾಕಿದೆ. ಇದಕ್ಕೆ ಯಾರು ಹಣಕಾಸು ಒದಗಿಸುತ್ತಿರಬಹುದು ಎಂದು ಪ್ರಶ್ನಿಸಿದ ಅವರು, “ಅಖಂಡ ಸನಾತನ ತತ್ವಗಳ ವಿರುದ್ಧ ಮೂಲಭೂತವಾದವನ್ನು ಬೆಂಬಲಿಸುವ ಯೂಟ್ಯೂಬರ್‌ಗಳನ್ನು ನಿರ್ಲಕ್ಷಿಸಬೇಕು” ಎಂದು ಕರೆ ನೀಡಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಖಾಲಿ ಹೊಟ್ಟೆಯಲ್ಲಿ ಹಾಲು ಕುಡಿಯುತ್ತೀರಾ?: ಇಲ್ಲಿದೆ ಆರೋಗ್ಯ ತಜ್ಞರ ಅಭಿಪ್ರಾಯ

ಆರೋಗ್ಯ ತಜ್ಞರ ಪ್ರಕಾರ, ಖಾಲಿ ಹೊಟ್ಟೆಯಲ್ಲಿ ಡೈರಿ ಉತ್ಪನ್ನಗಳನ್ನು ಸೇವಿಸುವುದರಿಂದ ಕೆಲವರಿಗೆ ಪ್ರಯೋಜನವಾದರೆ, ಇನ್ನು ಕೆಲವರಿಗೆ ತೊಂದರೆ ಉಂಟಾಗಬಹುದು.

ಭಾರತದ ವಾಹನ ಮಾರುಕಟ್ಟೆಗೆ ಕ್ವಾಲ್ಕಾಮ್‌ನ ‘ಡಿಜಿಟಲ್ ಚಾಸಿಸ್’: ಸ್ಮಾರ್ಟ್‌ ಕಾರ್‌ಗಳು ಇನ್ನಷ್ಟು ಸುರಕ್ಷಿತ

ಕ್ವಾಲ್ಕಾಮ್ ತನ್ನ ಸ್ನಾಪ್‌ಡ್ರಾಗನ್ ಪ್ಲಾಟ್‌ಫಾರ್ಮ್‌ಗಳ ಮೂಲಕ ಭಾರತದ ವಾಹನ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆ ತರಲು ಮುಂದಾಗಿದೆ.

ರೀಲ್ಸ್‌ಗಾಗಿ ಈ ಪರಿಯ ಹುಚ್ಚಾಟವೇ? ಉರಿಯುವ ಚಿತೆಯ ಮುಂದೆ ನಗುತ್ತಾ ವಿಡಿಯೋ ಮಾಡಿದ ಯುವತಿ

ಯುವತಿಯೊಬ್ಬಳು ಸ್ಮಶಾನದಲ್ಲಿ ಉರಿಯುತ್ತಿರುವ ಚಿತೆಯ ಮುಂದೆ ನಗುತ್ತಾ ಫೋಸ್ ಕೊಟ್ಟು ವಿಡಿಯೋ ಮಾಡಿರುವ ಘಟನೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ

ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು ಕಾರ್ಕಳದಲ್ಲಿ ವಿಶ್ವ ಮಾದಕ ದ್ರವ್ಯ ವಿರೋಧಿ ದಿನಾಚರಣೆ

ಮಾದಕ ದ್ರವ್ಯಗಳು ಯುವ ಜನತೆಯ ಮೇಲೆ ಬೀರುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿಯನ್ನು ಮೂಡಿಸುವ ಸಲುವಾಗಿ ದಿನಾಂಕ 09-08-2025 ರಂದು ಕ್ರಿಯೇಟಿವ್ ಪದವಿಪೂರ್ವ ಕಾಲೇಜು ಕಾರ್ಕಳದಲ್ಲಿ 'ವಿಶ್ವ ಮಾದಕ ದ್ರವ್ಯ ವಿರೋಧಿ ದಿನಾಚರಣೆ'ಯನ್ನು ಆಚರಿಸಲಾಯಿತು.