spot_img

ನಾಸೀರ್ ಜೊತೆ ಸಂಪರ್ಕ: ಎಎಸ್‌ಐ ಚಾಂದ್ ಪಾಷಾ ಸೇರಿ ಮೂವರು ಎನ್‌ಐಎ ಕಸ್ಟಡಿಗೆ – ತನಿಖೆ ತೀವ್ರ!

Date:

ಬೆಂಗಳೂರು: ನಗರದಲ್ಲಿ ನಡೆದ ಎನ್‌ಐಎ ದಾಳಿಗಳಲ್ಲಿ ಭಯೋತ್ಪಾದಕರಿಗೆ ಬೆಂಬಲ ನೀಡಿದ ಆರೋಪದಡಿ ಮೂವರು ಶಂಕಿತ ಉಗ್ರರನ್ನು ಬಂಧಿಸಲಾಗಿದೆ. ಪರಪ್ಪನ ಅಗ್ರಹಾರ ಜೈಲಿನ ಸಹಾಯಕ ಸಬ್‌ ಇನ್ಸ್‌ಪೆಕ್ಟರ್ (ಎಎಸ್‌ಐ) ಚಾಂದ್ ಪಾಷಾ, ಅನೀಸ್ ಫಾತಿಮಾ ಹಾಗೂ ಪರಪ್ಪನ ಅಗ್ರಹಾರ ಜೈಲಿನ ಮನೋವೈದ್ಯ ನಾಗರಾಜ್ ಬಂಧಿತರು. ಎನ್‌ಐಎ ಅಧಿಕಾರಿಗಳು ಈ ಮೂವರನ್ನು ಬುಧವಾರ ಎನ್‌ಐಎ ವಿಶೇಷ ಕೋರ್ಟ್‌ಗೆ ಹಾಜರುಪಡಿಸಿದ್ದು, ನ್ಯಾಯಾಲಯವು ಅವರನ್ನು ಜುಲೈ 14ರವರೆಗೆ ಎನ್‌ಐಎ ಕಸ್ಟಡಿಗೆ ನೀಡಿ ಆದೇಶಿಸಿದೆ.

ಬಂಧಿತರು ದಕ್ಷಿಣ ಭಾರತದಲ್ಲಿ ನಡೆದ ಹಲವು ಸ್ಫೋಟಗಳ ಮಾಸ್ಟರ್‌ಮೈಂಡ್ ಆಗಿರುವ ನಾಸೀರ್‌ನೊಂದಿಗೆ ಸಂಪರ್ಕ ಹೊಂದಿದ್ದರು ಎಂಬ ಮಹತ್ವದ ಸುಳಿವು ಎನ್‌ಐಎಗೆ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ, ಮುಂದಿನ ಆರು ದಿನಗಳ ಕಾಲ ವಿಚಾರಣೆ ತೀವ್ರಗೊಳ್ಳುವ ಸಾಧ್ಯತೆ ಇದೆ.

ಉಗ್ರ ನಾಸೀರ್, ಕೊಲೆ ಪ್ರಕರಣದಲ್ಲಿ ಪರಿಚಿತನಾಗಿದ್ದ ಯುವಕರ ತಂಡವೊಂದನ್ನು ಕಟ್ಟಿದ್ದ. ಈ ತಂಡದಲ್ಲಿ ಜುನೇದ್, ಮೊಹಮ್ಮದ್ ಹರ್ಷದ್ ಖಾನ್, ಸುಹೇಲ್, ಫೈಜಲ್, ಜಾಹಿದ್ ತಬ್ರೇಜ್ ಮತ್ತು ಮುದಾಸಿರ್ ಇದ್ದರು. ಈ ತಂಡವು ಗ್ರೆನೇಡ್‌ಗಳು, ಪಿಸ್ತೂಲ್‌ಗಳು ಮತ್ತು ಸ್ಫೋಟಕ ವಸ್ತುಗಳೊಂದಿಗೆ ಬೆಂಗಳೂರಿನ ಆರ್.ಟಿ.ನಗರ ಮತ್ತು ಹೆಬ್ಬಾಳದಲ್ಲಿ ಸಿಕ್ಕಿಬಿದ್ದಿತ್ತು. ಪ್ರಸ್ತುತ ಪ್ರಮುಖ ಆರೋಪಿ ಜುನೈದ್‌ಗಾಗಿ ಎನ್‌ಐಎ ಹುಡುಕಾಟ ನಡೆಸುತ್ತಿದ್ದು, ಈತನನ್ನು ಪತ್ತೆ ಹಚ್ಚುವ ಕಾರ್ಯಾಚರಣೆ ವೇಳೆ ಡಾ. ನಾಗರಾಜ್, ಚಾಂದ್ ಪಾಷಾ ಮತ್ತು ಅನೀಸ್ ಫಾತಿಮಾ ಸಿಕ್ಕಿಬಿದ್ದಿದ್ದಾರೆ ಎಂದು ತಿಳಿದುಬಂದಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಫುಟ್‌ಬಾಲ್ : ಕಾರ್ಕಳ ಜ್ಞಾನಸುಧಾ ತಂಡ ಜಿಲ್ಲಾಮಟ್ಟಕ್ಕೆ

ಪದವಿಪೂರ್ವ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ತಾಲೂಕು ಮಟ್ಟದ ಫುಟ್‌ಬಾಲ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ.

‘ಸೇವಾ ಪಾಕ್ಷಿಕ ಅಭಿಯಾನ’ ಯಶಸ್ವಿಗೊಳಿಸಲು ಕುತ್ಯಾರು ನವೀನ್ ಶೆಟ್ಟಿ ಕರೆ

ಜಿಲ್ಲೆಯಾದ್ಯಂತ ನಡೆಯಲಿರುವ ಸೇವಾ ಪಾಕ್ಷಿಕ ಅಭಿಯಾನವನ್ನು ಪಕ್ಷದ ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಸಂಘಟಿತ ಪರಿಶ್ರಮದ ಮೂಲಕ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಕರೆ ನೀಡಿದರು.

ಕ್ರಿಯೇಟಿವ್ ಕಾಲೇಜಿನಲ್ಲಿ ಗುರುದೇವೋಭವ ಕಾರ್ಯಕ್ರಮ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸಪ್ತಸ್ವರ ಸಭಾಂಗಣದಲ್ಲಿ, 'ಕ್ರಿಯೇಟಿವ್ ಗುರುದೇವೋಭವ' ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಜ್ಞಾನ ಜ್ಯೋತಿಯನ್ನು ಬೆಳಗಿ, ಡಾ. ರಾಧಾಕೃಷ್ಣನ್ ರವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆಯನ್ನು ನೀಡಲಾಯಿತು.

ಕಾರ್ಕಳ ಜ್ಞಾನಸುಧಾ – ಶಿಕ್ಷಕರ ದಿನಾಚರಣೆಸಾವಧಾನದ ಮನಸ್ಥಿತಿ ಗೌರವದ ಉಪಸ್ಥಿತಿ : ವಸಂತ್ ಆಚಾರ್

ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ನಡೆದ ಶಿಕ್ಷಕರ ದಿನಾಚರಣೆಯ ಸಂದರ್ಭ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲಾ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿ ಮಾತನಾಡಿದರು.