spot_img

ತಿ.ನರಸೀಪುರದಲ್ಲಿ ನಾಳೆಯಿಂದ 13ನೇ ಕುಂಭಮೇಳ

Date:

ಮೈಸೂರು: ದಕ್ಷಿಣ ಭಾರತದ ಪ್ರಯಾಗರಾಜ್ ಎಂಬ ಹೆಗ್ಗಳಿಕೆಗೆ ಪಾತ್ರವಾದ ತಿರುಮಕುಡಲು ನರಸೀಪುರ (ತಿ.ನರಸೀಪುರ) ತ್ರಿವೇಣಿ ಸಂಗಮದಲ್ಲಿ ಫೆಬ್ರವರಿ 10ರಿಂದ 12ರವರೆಗೆ 13ನೇ ಕುಂಭಮೇಳ ವಿಜೃಂಭಣೆಯಿಂದ ನಡೆಯಲಿದೆ. ಪಾವನ ಪುಣ್ಯಸ್ನಾನಕ್ಕೆ ರಾಜ್ಯ ಹಾಗೂ ದೇಶದ ವಿವಿಧ ಭಾಗಗಳಿಂದ ಲಕ್ಷಾಂತರ ಭಕ್ತಾಧಿಗಳು ಆಗಮಿಸುವ ನಿರೀಕ್ಷೆ ಇದೆ.

ತಿ.ನರಸೀಪುರದ ತ್ರಿವೇಣಿ ಸಂಗಮವು ಕಾವೇರಿ, ಕಪಿಲಾ ಹಾಗೂ ಗುಪ್ತಗಾಮಿನಿಯಾದ ಸ್ಪಟಿಕಾ ಸರೋವರದ ಸಂಗಮಸ್ಥಾನವಾಗಿದೆ. ಈ ಪವಿತ್ರ ತೀರ್ಥಕ್ಷೇತ್ರದಲ್ಲಿ ಫೆಬ್ರವರಿ 12, ಸೋಮವಾರ ಮುಂಜಾನೆ ಸಾಧು-ಸಂತರು ಮತ್ತು ಮಠಾಧೀಶರ ನೇತೃತ್ವದಲ್ಲಿ ಕುಂಭಸ್ನಾನಕ್ಕೆ ಭಾವೈಕ್ಯತೆಯ ಪೂರ್ಣೋತ್ಸವ ದೊರೆಯಲಿದೆ.

6 ವರ್ಷದ ಬಳಿಕ ಮಹೋತ್ಸವ
1989ರಿಂದ ಪ್ರತೀ ಮೂರು ವರ್ಷಗಳಿಗೊಮ್ಮೆ ನಡೆಯುತ್ತಿರುವ ಈ ಮಹಾಕುಂಭಮೇಳ 2021ರಲ್ಲಿ ಕೋವಿಡ್-19 ಮಿತಿಗಳ ಕಾರಣದಿಂದಾಗಿ ನಡೆಸಲಾಗಿರಲಿಲ್ಲ. ಈ ವರ್ಷ 6 ವರ್ಷದ ಬಳಿಕ ಪುನಃ ಭಕ್ತಿ, ಸಂಸ್ಕೃತಿ ಹಾಗೂ ಪರಂಪರೆಯ ಮಹಾಸಂಗಮವಾಗಿ ಜರುಗುತ್ತಿದೆ.

ಶನಿವಾರ, ಚುಂಚನ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ತ್ರಿವೇಣಿ ಸಂಗಮಕ್ಕೆ ಭೇಟಿ ನೀಡಿ ಧಾರ್ಮಿಕ ವೇದಿಕೆ ಮತ್ತು ಪುಣ್ಯಸ್ನಾನ ಸ್ಥಳಗಳನ್ನು ಪರಿಶೀಲಿಸಿದರು. ಅವರಿಂದ ಪೂಜಾ ಕಾರ್ಯಗಳು ನೆರವೇರಲಿದ್ದು, ಭಕ್ತಾದಿಗಳಿಗೆ ಅಗತ್ಯ ಸೌಕರ್ಯಗಳ ಪರಿಶೀಲನೆ ನಡೆಸಿದ್ದಾರೆ.

ಮಾರ್ಗ ಹಾಗೂ ಸಾರಿಗೆ ವ್ಯವಸ್ಥೆ
ತಿ.ನರಸೀಪುರ ತಲುಪಲು ವಿವಿಧ ಮಾರ್ಗಗಳಿವೆ:
✅ ಬೆಂಗಳೂರು → ಮಳವಳ್ಳಿ/ಕನಕಪುರ/ಮೈಸೂರು ಮಾರ್ಗದ ಮೂಲಕ
✅ ಮದ್ದೂರು, ಕೆ.ಎಂ. ದೊಡ್ಡಿ, ಮಳವಳ್ಳಿ, ಬೆಳಕವಾಡಿ, ಪುರಿಗಾಲಿ ಮೂಲಕ
✅ ಕನಕಪುರ → ಸಾತನೂರು, ಹಲಗೂರು, ಮಳವಳ್ಳಿ ಮಾರ್ಗವಾಗಿ
✅ ಮಂಡ್ಯ → ಕಿರುಗಾವಲು, ಕಲ್ಕುಣಿ, ಸೋಸಲೆ ಮೂಲಕ
✅ ಮೈಸೂರು → 35 ಕಿ.ಮೀ. ದೂರದಲ್ಲಿದ್ದು, ಸರಿಯಾದ ಸಾರಿಗೆ ವ್ಯವಸ್ಥೆ ಲಭ್ಯವಿದೆ.

ಧಾರ್ಮಿಕ, ಆಧ್ಯಾತ್ಮಿಕ ಹಾಗೂ ಸಂಸ್ಕೃತಿಯ ಮಹಾ ಕೂಟವಾಗಿ ಈ ಕುಂಭಮೇಳ ನಡೆಯಲಿದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪುಣ್ಯಸ್ನಾನ ಮಾಡಲಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಇನ್ಮುಂದೆ ಹಲಸಿನ ಬೀಜ ಬಿಸಾಡಬೇಡಿ! ಆರೋಗ್ಯಕ್ಕೆ ಬೆಟ್ಟದಷ್ಟು ಲಾಭ ನೀಡುವ ಗುಣವಿದೆ

ಈಗ ಹಲಸಿನ ಹಣ್ಣಿನ ಕಾಲ. ರುಚಿ ಮತ್ತು ಸುವಾಸನೆಯಿಂದ ಬಾಯಲ್ಲಿ ನೀರೂರಿಸುವ ಈ ಹಣ್ಣು ಆರೋಗ್ಯಕ್ಕೂ ಅಪಾರ ಲಾಭ ನೀಡುತ್ತದೆ. ಆದರೆ, ಬಹುಪಾಲು ಜನರು ಈ ಹಣ್ಣಿನ ಬೀಜಗಳನ್ನು ಉಪಯೋಗವಿಲ್ಲದ ಅಂಶವೆಂದು ಬಿಸಾಡುತ್ತಾರೆ. ಆದರೆ, ಆರೋಗ್ಯ ತಜ್ಞರ ಪ್ರಕಾರ, ಈ ಬೀಜಗಳಲ್ಲೂ ಅಮೂಲ್ಯ ಪೌಷ್ಟಿಕಾಂಶಗಳು ಅಡಗಿವೆ.

ಉಡುಪಿಯಲ್ಲಿ ಭೀಕರ ರಸ್ತೆ ಅಪಘಾತ: ಎಂ.ಬಿ.ಎ ವಿದ್ಯಾರ್ಥಿ ಹಾಗೂ ತಬಲ ವಾದಕ ಸಂಕೀರ್ತನ್ ದುರ್ಮರಣ

ರಾಷ್ಟ್ರೀಯ ಹೆದ್ದಾರಿ 66ರ ಉಡುಪಿ ಕಿನ್ನಿಮುಲ್ಕಿ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ವರದಿಯಾಗಿದೆ.

ಉಡುಪಿ: ಎರಡು ದಿನಗಳ ರೋಚಕ ಕಾರ್ಯಾಚರಣೆ ಬಳಿಕ ಒಂಟಿ ಸಲಗ ಸೆರೆ – ಗ್ರಾಮಸ್ಥರಿಗೆ ನಿಟ್ಟುಸಿರು!

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಸಿದ್ದಾಪುರ, ಕಮಲಶಿಲೆ ಹಾಗೂ ಹೊಸಂಗಡಿ ಭಾಗಗಳಲ್ಲಿ ಎರಡು ದಿನಗಳ ಕಾಲ ಆತಂಕ ಮೂಡಿಸಿದ್ದ ಒಂಟಿ ಕಾಡಾನೆ ಕೊನೆಗೂ ಅರಣ್ಯ ಇಲಾಖೆಯ ಬಲೆಗೆ ಬಿದ್ದು, ಸಕ್ರೆಬೈಲಿಗೆ ಕಳುಹಿಸಲಾಗಿದೆ.

ಇರ್ವತ್ತೂರು ಕೊಳಕೆ ಶಾಲೆಯಲ್ಲಿ ಉಚಿತ ನೋಟ್ಸ್ ಪುಸ್ತಕ ವಿತರಣೆ

ಸುಮಾರು 15 ವರ್ಷಗಳಿಂದ ಇರ್ವತ್ತೂರು ಕೊಳಕೆ ಶಾಲೆಗೆ ಶಾಲಾ ಹೆಮ್ಮೆಯ ಹಳೆವಿದ್ಯಾರ್ಥಿ ನಿಕಟ ಪೂರ್ವ ಜಿಲ್ಲಾ ಪಂಚಾಯತ್ ಸದಸ್ಯರಾದ ಉದಯ ಎಸ್ ಕೋಟ್ಯಾನ್ ಮತ್ತು ಮುಂಬೈ ಉದ್ಯಮಿ ವಿಠ್ಠಲ ಎಸ್ ಅಮೀನ್ ರವರು ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ಸ್ ಪುಸ್ತಕ ನೀಡುತ್ತಿದ್ದು ,ಈ ಬಾರಿಯೂ ಕೊಡುಗೆ ನೀಡಿ ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿದ್ದಾರೆ.