spot_img

ಸಿಗಂದೂರಿನ ಹೊಳೆಬಾಗಿಲು ಲಾಂಚ್‌ ಸ್ಟೀರಿಂಗ್ ಜಾಮ್: ನೂರಾರು ಪ್ರಯಾಣಿಕರಿಗೆ ಆತಂಕ

Date:

ಸಾಗರ : ಶಿವಮೊಗ್ಗ ಜಿಲ್ಲೆಯ ಸಿಗಂದೂರಿನ ಹೊಳೆಬಾಗಿಲಿನಲ್ಲಿ ನದೀ ದಾಟುವ ಲಾಂಚ್‌ನ ಸ್ಟೀರಿಂಗ್ ಜಾಮ್ ಆದ ಪರಿಣಾಮ, ನೂರಾರು ಪ್ರಯಾಣಿಕರು ಹಾಗೂ ವಾಹನಗಳು ಕೆಲಕಾಲ ನದಿಯಲ್ಲಿ ಅತೀವ ಆತಂಕದ ವಾತಾವರಣವನ್ನು ಅನುಭವಿಸಿದ ಘಟನೆ ಗುರುವಾರ ಮಧ್ಯಾಹ್ನ ಸಂಭವಿಸಿದೆ.

ಲಾಂಚ್‌ನಲ್ಲಿದ್ದವರು ಭಯಭೀತರಾಗಿದ್ದು, ಮಳೆಗಾಲದ ಗಾಳಿ ಕಾರಣಕ್ಕೆ ದಿಕ್ಕು ತಪ್ಪಿದೆ ಎಂದು ದಡದಲ್ಲಿದ್ದವರು ಭಾವಿಸಿದ್ದರು. ಆದರೆ ಹತ್ತಿರದಲ್ಲಿದ್ದ ದಿಲೀಪ್ ಬಿಲ್ಡರ್ಸ್‌ನ ಬೋಟಿನಿಂದ ಲಾಂಚ್‌ಗೆ ಸಹಾಯ ನೀಡಿ ಅದನ್ನು ಸುರಕ್ಷಿತವಾಗಿ ದಡಕ್ಕೆ ತಲುಪಿಸಲಾಯಿತು.

ಲಾಂಚ್‌ದಲ್ಲಿ ತಾಂತ್ರಿಕ ದೋಷ ಇತ್ತೀಚಿನದ್ದಲ್ಲ. ಸ್ಥಳೀಯರ ಪ್ರಕಾರ, ಈ ಲಾಂಚ್‌ ಈಗಾಗಲೇ ಹಾಳಾಗಿದ್ದು, ಹಲವು ದಿನಗಳಿಂದ ರಿಪೇರಿ ಮಾಡದೆ ಉಪೇಕ್ಷಿತ ಸ್ಥಿತಿಯಲ್ಲಿತ್ತು. ತಿಂಗಳಿಗೆ ಸರಾಸರಿ 40 ಲಕ್ಷಕ್ಕೂ ಅಧಿಕ ಆದಾಯ ನೀಡುವ ಲಾಂಚ್‌ಗಳ ನಿರ್ವಹಣೆ ಅತಂತ್ರವಾಗಿರುವುದು ಪ್ರಶ್ನೆಯಾಗಿದ್ದು, ಸಾರ್ವಜನಿಕರು ಕಿಡಿಕಾರಿದ್ದಾರೆ.

ಸೇತುವೆ ಉದ್ಘಾಟನೆ ತಡವಾದರೂ, ಲಾಂಚ್‌ಗಳ ಸರಿಯಾದ ನಿರ್ವಹಣೆ ಖಚಿತಪಡಿಸಿ ಸಂಚಾರಕ್ಕೆ ಅವಕಾಶ ನೀಡಬೇಕೆಂಬುದು ಸಾರ್ವಜನಿಕರ ಆಶಯವಾಗಿದೆ. ಅರೆಕಾಲಿಕ ನೌಕರರ ವೇತನ ಪಾವತಿಯಾಗದೇ ಆರು ತಿಂಗಳಿನಿಂದ ಬಾಕಿ ಇರುವ ಕಾರಣದಿಂದಾಗಿ ನಿರ್ಲಕ್ಷ್ಯ ಮತ್ತು ನಿರ್ವಹಣಾ ಕೊರತೆ ಏಳಲಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಹಿರಿಯಡ್ಕದ ಕೆಪಿಎಸ್ ತಂಡಕ್ಕೆ ಥ್ರೋ ಬಾಲ್‌ನಲ್ಲಿ ಪ್ರಥಮ ಸ್ಥಾನ: ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕ್ರೀಡಾ ಕ್ಷೇತ್ರದಲ್ಲಿ ಮತ್ತೊಂದು ಸಾಧನೆ ತೋರಿರುವ ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್) ಹಿರಿಯಡ್ಕದ ವಿದ್ಯಾರ್ಥಿಗಳು, ಉಡುಪಿ ತಾಲ್ಲೂಕು ಮಟ್ಟದ ಥ್ರೋ ಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ.

ಪೂಜಾ ಹೆಗ್ಡೆ ಟಾಲಿವುಡ್‌ಗೆ ಕಂಬ್ಯಾಕ್‌: ದುಲ್ಕರ್ ಸಲ್ಮಾನ್ ಜೊತೆ ಹೊಸ ಸಿನಿಮಾ

ಬಹುಭಾಷಾ ನಟಿ ಪೂಜಾ ಹೆಗ್ಡೆ ಅವರು ಮಾಲಿವುಡ್ ನಟ ದುಲ್ಕರ್ ಸಲ್ಮಾನ್ ಜೊತೆ ಹೊಸ ಚಿತ್ರವೊಂದರಲ್ಲಿ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ.

ಕಣಜಾರು : ಬೇಟೆಯ ವೇಳೆ ಗುಂಡು ಹಾರಿಸಿದ ಪ್ರಕರಣ – ಇಬ್ಬರು ಆರೋಪಿಗಳ ಬಂಧನ

ಬೇಟೆಯ ವೇಳೆ ಗುಂಡು ಹಾರಿಸಿ ಅದು ಕಾರು ಮತ್ತು ಮನೆಯ ಬಾಗಿಲಿಗೆ ತಗುಲಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯಡ್ಕ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ರಾಜ್ಯ ಮತ್ತು ಅಂತರಾಷ್ಟ್ರೀಯ ಕರಾಟೆ ಚಾಂಪಿಯನ್‌ಶಿಪ್‌ಗಳಲ್ಲಿ 6 ಪದಕಗಳನ್ನು ಗೆದ್ದ ಹಿರಿಯಡ್ಕದ ಗ್ರೀನ್ ಪಾರ್ಕ್ ಶಾಲಾ ವಿದ್ಯಾರ್ಥಿಗಳು

ಕರಾಟೆ ಕ್ರೀಡೆಯಲ್ಲಿ ಹಿರಿಯಡ್ಕದ ಗ್ರೀನ್ ಪಾರ್ಕ್ ಶಾಲೆಯ ವಿದ್ಯಾರ್ಥಿಗಳು ರಾಜ್ಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ.