spot_img

ಬಾಹ್ಯಾಕಾಶದಲ್ಲಿ 286 ದಿನ ಕಳೆದು ಸುನೀತಾ, ಬುಚ್ ಭೂಮಿಗೆ ಮರಳಿದ ಕ್ಷಣ

Date:

ಫ್ಲೋರಿಡಾ (ಅಮೆರಿಕ): ಸುಮಾರು 9 ತಿಂಗಳುಗಳ ಕಾಲ ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರ (ISS)ದಲ್ಲಿ ಕಳೆದ ಬಳಿಕ ಭಾರತೀಯ ಮೂಲದ ನಾಸಾ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಹಾಗೂ ಬುಚ್ ವಿಸ್ಕೋರ್ ಭೂಮಿಗೆ ಸುರಕ್ಷಿತವಾಗಿ ಮರಳಿದ್ದಾರೆ.

ಭಾರತೀಯ ಕಾಲಮಾನದ ಪ್ರಕಾರ ಬುಧವಾರ (ಮಾ.19) ಬೆಳಗಿನ ಜಾವ 3.27ರ ಸುಮಾರಿಗೆ ಸ್ಪೇಸ್ ಎಕ್ಸ್‌ನ ಕ್ರೂ ಡ್ರಾಗನ್ ನೌಕೆಯು ಪ್ಯಾರಚೂಟ್ ಮೂಲಕ ಅಮೆರಿಕದ ಫ್ಲೋರಿಡಾದ ಸಮುದ್ರದಲ್ಲಿ ಯಶಸ್ವಿಯಾಗಿ ಲ್ಯಾಂಡ್ ಆಯಿತು. ಬಳಿಕ ನಾಸಾ ತಂಡವು ಗಗನಯಾತ್ರಿಗಳನ್ನು ಸಮುದ್ರದಿಂದ ಮೇಲಕ್ಕೆತ್ತಿ, ಆರೋಗ್ಯ ಪರೀಕ್ಷೆಗೆ ಕರೆದೊಯ್ಯಲಾಯಿತು.

9 ತಿಂಗಳ ಸಮಯದಲ್ಲಿ 286 ದಿನಗಳ ಕಾಲ ISS ನಲ್ಲಿ ಉಳಿದುಕೊಂಡಿದ್ದರು.4,577 ಬಾರಿ ಭೂಮಿಗೆ ಸುತ್ತು ಕೊಟ್ಟಿದ್ದರು. ಒಟ್ಟು 195.2 ಮಿಲಿಯನ್ ಕಿಮೀ ದೂರ ಹಾರಾಟ ಮಾಡಿದ್ದರು.

ಅಪರೂಪದ ಸನ್ನಿವೇಶ:
2023ರ ಜೂನ್ 5ರಂದು ಬೋಯಿಂಗ್ ಸ್ಟಾರ್‌ಲೈನರ್ ನೌಕೆಯಲ್ಲಿ ಬಾಹ್ಯಾಕಾಶಕ್ಕೆ ತೆರಳಿದ ಸುನೀತಾ ಹಾಗೂ ಬುಚ್ ವಿಸ್ಕೋರ್ ನೌಕೆಯಲ್ಲಿ ತಾಂತ್ರಿಕ ದೋಷ ಉಂಟಾದ ಕಾರಣ ISSನಲ್ಲೇ ಉಳಿಯಬೇಕಾದ ಪರಿಸ್ಥಿತಿ ಎದುರಿಸಿದ್ದರು. ತಾಂತ್ರಿಕ ಸಮಸ್ಯೆ ನಿವಾರಣೆಯಾಗುವವರೆಗೂ ಅವರು ಬಾಹ್ಯಾಕಾಶದಲ್ಲಿ ಮುಂದುವರಿಯಬೇಕಾಯಿತು.

ನಾಸಾದ ಧನ್ಯವಾದ:
“ಎಲ್ಲವೂ ನಿರೀಕ್ಷೆಯಂತೆ ನಡೆದಿದ್ದು, ಗಗನಯಾತ್ರಿಗಳು ಸುರಕ್ಷಿತವಾಗಿದ್ದಾರೆ” ಎಂದು ನಾಸಾ ಅಧಿಕೃತ ಹೇಳಿಕೆ ನೀಡಿದ್ದು, ಸ್ಪೇಸ್ ಎಕ್ಸ್ ತಂಡಕ್ಕೆ ಧನ್ಯವಾದಗಳನ್ನು ಸಲ್ಲಿಸಿದೆ.

ಗುಜರಾತ್‌ನಲ್ಲಿ ಸಂಭ್ರಮ:
ಸುನೀತಾ ವಿಲಿಯಮ್ಸ್ ಅವರ ಪೂರ್ವಿಕರ ಮನೆ ಇರುವ ಗುಜರಾತ್‌ನ ಜುಲಾಸಾನ್ ಗ್ರಾಮದಲ್ಲಿ ಜನರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ಭಾರತದಲ್ಲಿ ಮೊದಲು ರೈಲು ಓಡಿದ ದಿವಸ

ಭಾರತದ ಬಹು ಮುಖ್ಯ ಭಾಗವಾಗಿ ಗುರುತಿಸಿಕೊಂಡಿರುವುದು ರೈಲು ವ್ಯವಸ್ಥೆ.1853 ರ ಏಪ್ರಿಲ್ 16 ರಂದು, ಮೊದಲ ಪ್ರಯಾಣಿಕ ರೈಲು ಮುಂಬಯಿಯ ಬೋರಿ ಬಂದರ್ ಮತ್ತು ಥಾಣೆ ನಡುವೆ 34 ಕಿ.ಮೀ ದೂರದಲ್ಲಿ ಓಡಿತು.

ಅಯೋಧ್ಯೆ ರಾಮ ಮಂದಿರಕ್ಕೆ ಬಾಂಬ್ ಸ್ಫೋಟದ ಬೆದರಿಕೆಯ ಇಮೇಲ್: ಭದ್ರತೆ ಹೆಚ್ಚಳ, ತನಿಖೆ ಪ್ರಾರಂಭ

ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ಮಂದಿರವನ್ನು ಸ್ಫೋಟಿಸುವುದಾಗಿ ಇಮೇಲ್ ಮೂಲಕ ಬಂದ ಬೆದರಿಕೆಯಿಂದ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಸೈಬರ್ ಪೊಲೀಸರಿಂದ ತನಿಖೆ ಆರಂಭವಾಗಿದೆ.

ಮಳೆಗಾಲಕ್ಕೆ ಮುನ್ನೆಚ್ಚರಿಕಾ ಸನ್ನದ್ಧತೆ: ಉಡುಪಿಯಲ್ಲಿ ಅಧಿಕಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಸೂಚನೆ

ಉಡುಪಿ ಜಿಲ್ಲೆಯಲ್ಲಿ ಮುಂಗಾರು ಮುನ್ನೆಚ್ಚರಿಕಾ ಕ್ರಮವಾಗಿ ತುರ್ತು ಪರಿಸ್ಥಿತಿ ಮತ್ತು ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಸಕಾಲಿಕ ತಯಾರಿ ಮಾಡಿಕೊಳ್ಳುವಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಅವರು ಉಡುಪಿ ನಗರಸಭೆಯ ಸಭಾಂಗಣದಲ್ಲಿ ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ಸೂಚನೆ ನೀಡಿದ್ದಾರೆ.

ಮಹಿಳೆಗೆ ಲೈಂಗಿಕ ಕಿರುಕುಳ ಮತ್ತು ಹಲ್ಲೆ!

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಹೋಬಳಿಯ ಕೊಟ್ಟಿಗೆಹಾರ ಪ್ರದೇಶದಲ್ಲಿ ಏಪ್ರಿಲ್ 12, 2025 ರಂದು ಸಂಜೆ 6 ಗಂಟೆ ಸುಮಾರಿಗೆ 38 ವರ್ಷದ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ಮತ್ತು ಹಲ್ಲೆ ನಡೆಸಿದ ಘಟನೆ ಬೆಳಕಿಗೆ ಬಂದಿದೆ.