spot_img

ಬಾಹ್ಯಾಕಾಶದಲ್ಲಿ 286 ದಿನ ಕಳೆದು ಸುನೀತಾ, ಬುಚ್ ಭೂಮಿಗೆ ಮರಳಿದ ಕ್ಷಣ

Date:

spot_img

ಫ್ಲೋರಿಡಾ (ಅಮೆರಿಕ): ಸುಮಾರು 9 ತಿಂಗಳುಗಳ ಕಾಲ ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರ (ISS)ದಲ್ಲಿ ಕಳೆದ ಬಳಿಕ ಭಾರತೀಯ ಮೂಲದ ನಾಸಾ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಹಾಗೂ ಬುಚ್ ವಿಸ್ಕೋರ್ ಭೂಮಿಗೆ ಸುರಕ್ಷಿತವಾಗಿ ಮರಳಿದ್ದಾರೆ.

ಭಾರತೀಯ ಕಾಲಮಾನದ ಪ್ರಕಾರ ಬುಧವಾರ (ಮಾ.19) ಬೆಳಗಿನ ಜಾವ 3.27ರ ಸುಮಾರಿಗೆ ಸ್ಪೇಸ್ ಎಕ್ಸ್‌ನ ಕ್ರೂ ಡ್ರಾಗನ್ ನೌಕೆಯು ಪ್ಯಾರಚೂಟ್ ಮೂಲಕ ಅಮೆರಿಕದ ಫ್ಲೋರಿಡಾದ ಸಮುದ್ರದಲ್ಲಿ ಯಶಸ್ವಿಯಾಗಿ ಲ್ಯಾಂಡ್ ಆಯಿತು. ಬಳಿಕ ನಾಸಾ ತಂಡವು ಗಗನಯಾತ್ರಿಗಳನ್ನು ಸಮುದ್ರದಿಂದ ಮೇಲಕ್ಕೆತ್ತಿ, ಆರೋಗ್ಯ ಪರೀಕ್ಷೆಗೆ ಕರೆದೊಯ್ಯಲಾಯಿತು.

9 ತಿಂಗಳ ಸಮಯದಲ್ಲಿ 286 ದಿನಗಳ ಕಾಲ ISS ನಲ್ಲಿ ಉಳಿದುಕೊಂಡಿದ್ದರು.4,577 ಬಾರಿ ಭೂಮಿಗೆ ಸುತ್ತು ಕೊಟ್ಟಿದ್ದರು. ಒಟ್ಟು 195.2 ಮಿಲಿಯನ್ ಕಿಮೀ ದೂರ ಹಾರಾಟ ಮಾಡಿದ್ದರು.

ಅಪರೂಪದ ಸನ್ನಿವೇಶ:
2023ರ ಜೂನ್ 5ರಂದು ಬೋಯಿಂಗ್ ಸ್ಟಾರ್‌ಲೈನರ್ ನೌಕೆಯಲ್ಲಿ ಬಾಹ್ಯಾಕಾಶಕ್ಕೆ ತೆರಳಿದ ಸುನೀತಾ ಹಾಗೂ ಬುಚ್ ವಿಸ್ಕೋರ್ ನೌಕೆಯಲ್ಲಿ ತಾಂತ್ರಿಕ ದೋಷ ಉಂಟಾದ ಕಾರಣ ISSನಲ್ಲೇ ಉಳಿಯಬೇಕಾದ ಪರಿಸ್ಥಿತಿ ಎದುರಿಸಿದ್ದರು. ತಾಂತ್ರಿಕ ಸಮಸ್ಯೆ ನಿವಾರಣೆಯಾಗುವವರೆಗೂ ಅವರು ಬಾಹ್ಯಾಕಾಶದಲ್ಲಿ ಮುಂದುವರಿಯಬೇಕಾಯಿತು.

ನಾಸಾದ ಧನ್ಯವಾದ:
“ಎಲ್ಲವೂ ನಿರೀಕ್ಷೆಯಂತೆ ನಡೆದಿದ್ದು, ಗಗನಯಾತ್ರಿಗಳು ಸುರಕ್ಷಿತವಾಗಿದ್ದಾರೆ” ಎಂದು ನಾಸಾ ಅಧಿಕೃತ ಹೇಳಿಕೆ ನೀಡಿದ್ದು, ಸ್ಪೇಸ್ ಎಕ್ಸ್ ತಂಡಕ್ಕೆ ಧನ್ಯವಾದಗಳನ್ನು ಸಲ್ಲಿಸಿದೆ.

ಗುಜರಾತ್‌ನಲ್ಲಿ ಸಂಭ್ರಮ:
ಸುನೀತಾ ವಿಲಿಯಮ್ಸ್ ಅವರ ಪೂರ್ವಿಕರ ಮನೆ ಇರುವ ಗುಜರಾತ್‌ನ ಜುಲಾಸಾನ್ ಗ್ರಾಮದಲ್ಲಿ ಜನರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಇರುವತ್ತೂರು ಕೊಳಕೆ ಶಾಲಾ ವಿದ್ಯಾರ್ಥಿಗಳಿಗೆ ಆನಂದ್ ಸರ್ ಅಭಿಮಾನಿ ಶಿಷ್ಯರ ಬಳಗದಿಂದ ಕೊಡೆ, ಕಲಿಕಾ ಸಾಮಗ್ರಿ ವಿತರಣೆ

ಇರುವತ್ತೂರು ಕೊಳಕೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಆನಂದ್ ಸರ್ ಅಭಿಮಾನಿ ಶಿಷ್ಯರ ಬಳಗ, ಕುಂದಾಪುರ ವತಿಯಿಂದ ಸುಮಾರು ₹20,000 ಮೌಲ್ಯದ ಕೊಡೆಗಳು ಮತ್ತು ಕಲಿಕಾ ಸಾಮಗ್ರಿಗಳನ್ನು ವಿತರಿಸಲಾಯಿತು.

ಪರಶುರಾಮ ಮೂರ್ತಿ ಬಗ್ಗೆ ಅಪಪ್ರಚಾರಗೈದ ಕಾಂಗ್ರೆಸ್ ಮುಖಂಡ ಉದಯ ಕುಮಾರ್ ಶೆಟ್ಟಿ ಮತ್ತು ಅವರ ತಂಡ ಜಿಲ್ಲೆಯ ಜನತೆಯ ಕ್ಷಮೆ ಯಾಚಿಸಬೇಕು : ಸಂಧ್ಯಾ ರಮೇಶ್

ಪರಶುರಾಮ ಮೂರ್ತಿ ಬಗ್ಗೆ ಅಪಪ್ರಚಾರಗೈದ ಕಾಂಗ್ರೆಸ್ ಮುಖಂಡ ಉದಯ ಕುಮಾರ್ ಶೆಟ್ಟಿ ಮತ್ತು ಅವರ ತಂಡ ಜಿಲ್ಲೆಯ ಜನತೆಯ ಕ್ಷಮೆ ಯಾಚಿಸಬೇಕು ಎಂದು ಸಂಧ್ಯಾ ರಮೇಶ್ ತಿಳಿಸಿದ್ದಾರೆ.

“ಬಿಜೆಪಿಗೆ ಧೈರ್ಯವಿದ್ದರೆ ದಲಿತರನ್ನು ಪ್ರಧಾನಿ ಮಾಡಿ”: ವಿಜಯೇಂದ್ರಗೆ ಸಿಎಂ ಸಿದ್ದರಾಮಯ್ಯ ಸವಾಲು!

ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸುವಂತೆ ಹೇಳಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀಕ್ಷ್ಣ ತಿರುಗೇಟು ನೀಡಿದ್ದಾರೆ.

ಫೋನ್ ಪಾಸ್‌ವರ್ಡ್ ನೀಡುವಂತೆ ಪತ್ನಿಗೆ ಒತ್ತಾಯಿಸುವಂತಿಲ್ಲ: ಛತ್ತೀಸ್‌ಗಢ ಹೈಕೋರ್ಟ್ ಮಹತ್ವದ ತೀರ್ಪು!

ಪತ್ನಿಯ ಮೊಬೈಲ್ ಫೋನ್ ಪಾಸ್‌ವರ್ಡ್ ಅಥವಾ ಬ್ಯಾಂಕ್ ಖಾತೆ ವಿವರಗಳನ್ನು ಹಂಚಿಕೊಳ್ಳುವಂತೆ ಒತ್ತಾಯಿಸುವುದು ಆಕೆಯ ಗೌಪ್ಯತೆಯ ಹಕ್ಕಿನ ಉಲ್ಲಂಘನೆ ಎಂದು ಛತ್ತೀಸ್‌ಗಢ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ