spot_img

‘ಒನ್ ಟು ಒನ್’ ಸಭೆಯಲ್ಲಿ ಅಚ್ಚರಿ: ಶಾಸಕ ಸಿ.ಪಿ. ಯೋಗೇಶ್ವರ ವಿರುದ್ಧ ಅವರ ಕುಟುಂಬ ಸದಸ್ಯರಿಂದಲೇ ಸುರ್ಜೇವಾಲಗೆ ದೂರು!

Date:

ಬೆಂಗಳೂರು: ಕಾಂಗ್ರೆಸ್‌ನ “ಒನ್ ಟು ಒನ್” ಸಭೆಗಳು ಆಡಳಿತದ ಕಾರ್ಯವೈಖರಿ ಮತ್ತು ಸಚಿವರ ವರ್ತನೆಗಳ ಬಗ್ಗೆ ಅಸಮಾಧಾನ ಹೊರಹಾಕುವ ವೇದಿಕೆಯಾಗಿದ್ದರೆ, ಬುಧವಾರ ಈ ಸಭೆ ಶಾಸಕರ ವಿರುದ್ಧವೇ ಅವರ ಕುಟುಂಬದ ಸದಸ್ಯರು ದೂರು ಸಲ್ಲಿಸಲು ಅವಕಾಶ ಮಾಡಿಕೊಟ್ಟಿತು.

ಕೆಪಿಸಿಸಿ ಕಚೇರಿಯಲ್ಲಿ ನಡೆಯುತ್ತಿದ್ದ ಮ್ಯಾರಥಾನ್ “ಒನ್ ಟು ಒನ್” ಸಭೆಗಳ ನಡುವೆ, ಶಾಸಕ ಸಿ.ಪಿ. ಯೋಗೇಶ್ವರ ಅವರ ವಿಚ್ಛೇದಿತ ಪತ್ನಿ ಮಾಳವಿಕಾ ಸೋಳಂಕಿ ಮತ್ತು ಪುತ್ರಿ ನಿಶಾ ಅವರು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು ಭೇಟಿಯಾಗಿ ದೂರು ನೀಡಿದರು.

“ನಮ್ಮ ಪಾಡಿಗೆ ನಾವಿದ್ದರೂ ನಮ್ಮ ಮೇಲೆ ಕೇಸುಗಳನ್ನು ಹಾಕಿಸಿ, ಮಾನಸಿಕ ಹಿಂಸೆ ನೀಡುತ್ತಿದ್ದಾರೆ. ನಮ್ಮ ಮೇಲೆ ಯಾಕಿಷ್ಟು ದ್ವೇಷ ಎಂದು ಗೊತ್ತಾಗುತ್ತಿಲ್ಲ. ದಯವಿಟ್ಟು ಇದರಿಂದ ಮುಕ್ತಿ ಕಲ್ಪಿಸಬೇಕು” ಎಂದು ಅವರು ಸುರ್ಜೇವಾಲ ಅವರಿಗೆ ಮನವಿ ಮಾಡಿದರು. ಇದರ ಬಗ್ಗೆ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳೊಂದಿಗೆ ಚರ್ಚಿಸುವುದಾಗಿ ಸುರ್ಜೇವಾಲ ಭರವಸೆ ನೀಡಿದ್ದಾರೆ ಎಂದು ಯೋಗೇಶ್ವರ ಪುತ್ರಿ ನಿಶಾ ಸ್ವತಃ ತಿಳಿಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ನಿಶಾ ಮತ್ತು ಮಾಳವಿಕಾ, “ಯೋಗೇಶ್ವರ್ ನಮ್ಮನ್ನು ಬೀದಿಗೆ ತಳ್ಳಿದ್ದಾರೆ. ನಮ್ಮ ಭವಿಷ್ಯ ಕತ್ತಲಿನಲ್ಲಿದೆ. ವಿಚ್ಛೇದನದ ನಂತರ ನಮ್ಮ ಪಾಡಿಗೆ ನಾವಿದ್ದೆವು. ಆದರೂ ನಮ್ಮ ಮೇಲೆ ಕೇಸು ಹಾಕಿಸಿದರು. ಅವರಿಗೆ ನಮ್ಮ ಮೇಲೆ ಯಾಕಿಷ್ಟು ದ್ವೇಷ ಎಂದು ಗೊತ್ತಾಗುತ್ತಿಲ್ಲ. ಇದೆಲ್ಲದರಿಂದ ಬೇಸತ್ತು ಸುರ್ಜೇವಾಲ ಅವರನ್ನು ಭೇಟಿ ಮಾಡಿದೆವು. ಸಿಎಂ-ಡಿಸಿಎಂ ಗಮನಕ್ಕೆ ತರುವುದಾಗಿ ಭರವಸೆ ನೀಡಿದ್ದಾರೆ. ನಮ್ಮ ಹೋರಾಟ ಮುಂದುವರಿಯಲಿದೆ” ಎಂದು ಹೇಳಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಫುಟ್‌ಬಾಲ್ : ಕಾರ್ಕಳ ಜ್ಞಾನಸುಧಾ ತಂಡ ಜಿಲ್ಲಾಮಟ್ಟಕ್ಕೆ

ಪದವಿಪೂರ್ವ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ತಾಲೂಕು ಮಟ್ಟದ ಫುಟ್‌ಬಾಲ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ.

‘ಸೇವಾ ಪಾಕ್ಷಿಕ ಅಭಿಯಾನ’ ಯಶಸ್ವಿಗೊಳಿಸಲು ಕುತ್ಯಾರು ನವೀನ್ ಶೆಟ್ಟಿ ಕರೆ

ಜಿಲ್ಲೆಯಾದ್ಯಂತ ನಡೆಯಲಿರುವ ಸೇವಾ ಪಾಕ್ಷಿಕ ಅಭಿಯಾನವನ್ನು ಪಕ್ಷದ ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಸಂಘಟಿತ ಪರಿಶ್ರಮದ ಮೂಲಕ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಕರೆ ನೀಡಿದರು.

ಕ್ರಿಯೇಟಿವ್ ಕಾಲೇಜಿನಲ್ಲಿ ಗುರುದೇವೋಭವ ಕಾರ್ಯಕ್ರಮ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸಪ್ತಸ್ವರ ಸಭಾಂಗಣದಲ್ಲಿ, 'ಕ್ರಿಯೇಟಿವ್ ಗುರುದೇವೋಭವ' ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಜ್ಞಾನ ಜ್ಯೋತಿಯನ್ನು ಬೆಳಗಿ, ಡಾ. ರಾಧಾಕೃಷ್ಣನ್ ರವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆಯನ್ನು ನೀಡಲಾಯಿತು.

ಕಾರ್ಕಳ ಜ್ಞಾನಸುಧಾ – ಶಿಕ್ಷಕರ ದಿನಾಚರಣೆಸಾವಧಾನದ ಮನಸ್ಥಿತಿ ಗೌರವದ ಉಪಸ್ಥಿತಿ : ವಸಂತ್ ಆಚಾರ್

ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ನಡೆದ ಶಿಕ್ಷಕರ ದಿನಾಚರಣೆಯ ಸಂದರ್ಭ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲಾ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿ ಮಾತನಾಡಿದರು.